ಅನ್ಯಕೆಲಸಕ್ಕೆ ಬ್ರೇಕ್: ಸಚಿವೆ
Team Udayavani, Dec 12, 2018, 6:00 AM IST
ಸುವರ್ಣಸೌಧ (ವಿಧಾನಸಭೆ): ಅಂಗನವಾಡಿ ಕಾರ್ಯಕರ್ತೆಯರು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ನಿರ್ದಿಷ್ಟ ಕೆಲಸದಲ್ಲಷ್ಟೇ ತೊಡಗಿಸಿಕೊಂಡು ಅನ್ಯ ಕೆಲಸ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ. ಇತರೆ ಕಾರ್ಯಗಳಿಗೆ ನಿವೃತ್ತ ಕಾರ್ಯಕರ್ತೆಯರನ್ನು ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವೆ ಡಾ.ಜಯಮಾಲಾ ಹೇಳಿದರು.
ಬಿಜೆಪಿಯ ಎಸ್.ಸುರೇಶ್ ಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯ ಅಂಗನವಾಡಿ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರ 3000ರೂ. ಹಾಗೂ ರಾಜ್ಯ ಸರ್ಕಾರದಿಂದ 5000ರೂ. ಸೇರಿ ಒಟ್ಟು 8000 ರೂ. ಗೌರವ ಧನ ನೀಡಲಾಗುತ್ತಿದೆ. ಸಹಾಯಕರಿಗೆ 4,750 ರೂ. ನೀಡಲಾಗುತ್ತಿದೆ ಎಂದು ತಿಳಿಸಿದರು. ಕಾಂಗ್ರೆಸ್ನ ಶಾಸಕ ತನ್ವೀರ್ಸೇs…, ಕೇಂದ್ರ ಸರ್ಕಾರವು ಈ ಹಿಂದೆ ಶೇ.90ರಷ್ಟು ಗೌರವಧನ ಭರಿಸುತ್ತಿತ್ತು. ಇದೀಗ 50: 50ರ ಅನುಪಾತ ನಿಗದಿಪಡಿಸಿರುವುದರಿಂದ ರಾಜ್ಯ ಸರ್ಕಾರಕ್ಕೆ ಹೊರೆಯಾಗಿದೆ ಎಂದು ಹೇಳಿದರು.
ಬಳಿಕ ಸುರೇಶ್ ಕುಮಾರ್, ಅಂಗನವಾಡಿ ಕಾರ್ಯಕರ್ತೆಯರು ನಿರ್ದಿಷ್ಟ ಉದ್ದೇಶದ ಕಾರ್ಯಗಳನ್ನಷ್ಟೇ ನಿರ್ವಹಿಸಿದರೆ ಮಾತೃಪೂರ್ಣ, ಮಾತೃಶ್ರೀ, ಭಾಗ್ಯಲಕ್ಷ್ಮೀ, ಶಿಶು- ಮಕ್ಕಳಿಗೆ ನಾನಾ ಲಸಿಕೆ ಹಾಕುವ ಕಾರ್ಯಕ್ರಮ, ಸಮೀಕ್ಷೆಗಳು, ಶೌಚಾಲಯ
ನಿರ್ಮಾಣ ಮೇಲ್ವಿಚಾರಣೆ, ಬಿಪಿಎಲ್ ಕಾರ್ಡ್ ಸರ್ವೇ, ಪಲ್ಸ್ ಪೊಲಿಯೋ ಲಸಿಕೆ ಕಾರ್ಯಕ್ರಮ, ಇಂದ್ರಧನುಷ್ ಇತರೆ
ಯೋಜನೆಗಳನ್ನು ಜಾರಿಗೊಳಿಸುವವರು ಯಾರು? ಇಷ್ಟೆಲ್ಲಾ ಕಾರ್ಯ ನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರಿಗೆ
ಕೇವಲ ಗೌರವ ಧನ ನೀಡುವುದು ಸೂಕ್ತವೇ ಎಂದು ಪ್ರಶ್ನಿಸಿದರು.
59,296 ಮಕ್ಕಳಿಗೆ ಅಪೌಷ್ಟಿಕತೆ: ರಾಯಚೂರು ಜಿಲ್ಲೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ 59,296 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಬೆಳಕಿಗೆ ಬಂದಿದೆ. ಜಿಲ್ಲೆಯ ಎಂಟು ತಾಲೂಕಿನ ಪೈಕಿ ಮಾನ್ವಿ, ಸಿರವಾರ ತಾಲೂಕಿನಲ್ಲಿ 13,731 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಬೆಳಕಿಗೆ ಬಂದಿದೆ. ಬಿಜೆಪಿಯ ಶಿವನಗೌಡ ನಾಯಕ ಪ್ರಶ್ನೆಗೆ ಉತ್ತರ ನೀಡಿದ ಸಚಿವೆ ಜಯಮಾಲಾ, ರಾಯಚೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ 59,296 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಬೆಳಕಿಗೆ ಬಂದಿದ್ದು, ಹಲವು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ