ಇನ್ನೇನು ಫಸ್ಟ್ನೈಟ್ ಅನ್ನುವಷ್ಟರಲ್ಲಿ ವಧುವಿನ ಕಿಡ್ನ್ಯಾಪ್ !
Team Udayavani, Oct 11, 2018, 10:41 AM IST
ಕೊಪ್ಪಳ: ಸಡಗರದಿಂದ ಮದುವೆ ಮುಗಿದಿತ್ತು ಇನ್ನೇನು ಪ್ರಥಮ ರಾತ್ರಿಯ ಸಂಭ್ರಮ ಎನ್ನುವಷ್ಟರಲ್ಲಿ ವಧುವನ್ನು ಕಿಡ್ನ್ಯಾಪ್ ಮಾಡಿದ ಘಟನೆ ಗಂಗಾವತಿಯ ಗುಡೂರು ಎಂಬಲ್ಲಿ ನಡೆದಿದೆ.
15 ದಿನಗಳ ಹಿಂದೆ ಮಲ್ಲನ ಗೌಡ ಎನ್ನುವ ಯುವಕನೊಂದಿಗೆ ಗಾಯತ್ರಿ ಎಂಬಾಕೆಯ ವಿವಾಹ ಗುರು ಹಿರಿಯರ ಸಮ್ಮುಖದಲ್ಲಿ ನಡೆದಿತ್ತು. ಮದುವೆಯ ಬಳಿಕ ಪ್ರಥಮ ರಾತ್ರಿಗೂ ಎಲ್ಲಾ ಸಿದ್ಧತೆಯಾಗಿತ್ತು. ದುರಂತವೆಂದರೆ ವಧು ಶೌಚಾಲಯಕ್ಕೆಂದು ಮನೆಯಿಂದ ಹೊರ ಬಂದ ವೇಳೆ ಹೊಂಚು ಹಾಕಿ ಕುಳಿತಿದ್ದ 6 ಮಂದಿ ಕಿಡ್ನ್ಯಾಪ್ ಮಾಡಿ ಕಾರಿನಲ್ಲಿ ಎಳೆದೊಯ್ದಿದ್ದಾರೆ. ಮನೆಯವರು ಬಿಡಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದು ಪೊಲೀಸರಿಗೆ ತಿಳಿಸಲಾಗಿದೆ.
ಸೋಮನಾಳ ಗ್ರಾಮದ ಅಂಜು ಕುಮಾರ್ ರೆಡ್ಡಿ ಎನ್ನುವನ್ನು ತನ್ನ ಸಹಚರರೊಂದಿಗೆ ಗಾಯತ್ರಿಯನ್ನು ಕಿಡ್ನ್ಯಾಪ್ ಮಾಡಿದ್ದಾನೆ ಎನ್ನಲಾಗಿದೆ.
ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ಆರೋಪಿಗಳನ್ನು ಬಂಧಿಸುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವರನ ಮನೆಯವರು ಆರೋಪಿಸಿದ್ದಾರೆ.
ಒಟ್ಟಿನಲ್ಲಿ ಪ್ರಕರಣ ಹಲವು ಅನುಮಾನಗಳಿಕೆ ಕಾರಣವಾಗಿದೆ. ವರ ಮತ್ತು ಮನೆಯವರಿಗೆ ಬರ ಸಿಡಿಲು ಬಡಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ