Kalaburagi; ಒಂದೇ ದಿನ ಹೃದಯಾಘಾತದಿಂದ ಕೊನೆಯುಸಿರೆಳೆದ ಅಣ್ಣ-ತಮ್ಮ!
Team Udayavani, Apr 15, 2023, 9:31 PM IST
ವಾಡಿ: ಒಂದೇ ದಿನ ಒಂದೇ ಮನೆಯಲ್ಲಿ ಇಬ್ಬರು ಸಹೋದರರು ಹೃದಯಾಘಾತಕ್ಕೀಡಾಗಿ ಮೃತಪಟ್ಟ ಸೇರಿದ ಘಟನೆ ಶುಕ್ರವಾರ ಚಿತ್ತಾಪುರ ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ಸಂಭವಿಸಿದೆ.
ಹಂಪಣ್ಣ ಸಿದ್ದಣ್ಣ ಪೂಜಾರಿ (60) ಹಾಗೂ ನಾಗಪ್ಪ ಸೋಮಲಿಂಗಪ್ಪ ಪೂಜಾರಿ (62) ಮೃತರು. ವೃತ್ತಿಯಲ್ಲಿ ರೈತರಾಗಿದ್ದ ಈ ಇಬ್ಬರೂ ಸಹೋದರರು ಒಂದೇ ಗಳಿಗೆಯಲ್ಲಿ ಸಾವಿಗೀಡಾಗಿದ್ದು, ಕುಟುಂಬ ವರ್ಗದಲ್ಲಿ ದು:ಖ ಮಡುಗಟ್ಟಿದೆ.
ನಾಗಪ್ಪ ಎಂಬುವವರಿಗೆ ಶುಕ್ರವಾರ ರಾತ್ರಿ 11:30ಕ್ಕೆ ಎದೆ ನೋವು ಕಾಣಿಸಿಕೊಂಡಿದೆ. ಗ್ರಾಮದ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಕೊನೆ ಉಸಿರೆಳೆದಿದ್ದಾರೆ. ಹಿರಿಯ ಸಹೋದರ ನಾಗಪ್ಪನನ್ನು ಆಸ್ಪತ್ರೆಗೆ ಸಾಗಿಸಿ ಮನೆಗೆ ಬಂದಿದ್ದ ಹಂಪಣ್ಣ ಕೂಡ ಹಠಾತ್ ಎದೆ ನೋವಿನಿಂದ ಬಳಲಿದ್ದಾರೆ. ಹಿರಿಯ ಅಣ್ಣನ ಶವ ಮನೆಯಲ್ಲಿರುವಾಗಲೇ ತಮ್ಮನೂ ಮೃತಪಟ್ಟಿದ್ದ ಗಳಿಗೆ ಗ್ರಾಮಸ್ಥರಲ್ಲಿ ಆಶ್ಚರ್ಯ ಮೂಡಿಸಿದೆ.
ಶನಿವಾರ ಮಧ್ಯಾಹ್ನ ಇಬ್ಬರು ಸಹೋದರರ ಅಂತ್ಯಸಂಸ್ಕಾರವನ್ನು ಗ್ರಾಮದ ಸ್ವಂತ ಜಮೀನಿನಲ್ಲಿ ನೆರವೇರಿಸಲಾಯಿತು ಎಂದು ಕುಟುಂಬ ಮೂಲಗಳು ತಿಳಿಸುವೆ. ಕೊಲ್ಲೂರು ಗ್ರಾಮದಲ್ಲಿ ಜೋಡು ಶವ ಸಂಸ್ಕಾರ ನಡೆದಿದ್ದು ಕುಟುಂಬ ವರ್ಗದವರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ