ಆತ್ಮೀಯತೆಯ ತಾಯಿ ಹೃದಯಿ ಯಡಿಯೂರಪ್ಪ


Team Udayavani, Jul 27, 2021, 6:20 AM IST

Untitled-1

ಯಡಿಯೂರಪ್ಪ ಅವರಿಗೆ ಒಮ್ಮೊಮ್ಮೆ  ತುಂಬ ಕೋಪ ಬರುತ್ತದೆ. ಕ್ಷಣಾರ್ಧದಲ್ಲೇ ಅದನ್ನು ಮರೆತು ಬಿಡುತ್ತಾರೆ. ಯಾರ ಮೇಲೂ ಕೋಪದಿಂದಾಗಿ ದ್ವೇಷ ಸಾಧನೆ ಮಾಡುವ ಸ್ವಭಾವ ಅವರದ್ದಲ್ಲ. ಎಲ್ಲರನ್ನು ಆತ್ಮೀಯತೆಯಿಂದ ಮಾತನಾಡಿಸುವ ತಾಯಿ ಹೃದಯಿ.

ಮಂಡ್ಯದಿಂದ ಶಿಕಾರಿಪುರಕ್ಕೆ ಅಳಿಯನಾಗಿ ಬಂದು, ಆರಂಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ ಅವರು, ನಂತರ ಜನ ಸಂಘದ ಜವಾಬ್ದಾರಿಯನ್ನು ವಹಿಸಿಕೊಂಡು, ಪಕ್ಷವನ್ನು ಬಲಪಡಿಸುವಲ್ಲಿ ಅನೇಕ ಹೋರಾಟಗಳನ್ನು ಮಾಡಿದರು. ಅವರದ್ದು ಕ್ಷಣ ಕ್ಷಣಕ್ಕೂ ಹೋರಾಟದ ಬದುಕು, ಹೋರಾಟದ ಅದಮ್ಯ ಚೇತನ ಎಂದರೂ ತಪ್ಪಾಗದು. ಸದಾ ಚಟುವಟಿಕೆ, ಕ್ರಿಯಾಶೀಲತೆ ಹಾಗೂ ವಿನೂತನ ಯೋಜನೆಗಳೊಂದಿಗೆ ಕೆಲಸ ಮಾಡುವುದು ಅವರ ಸ್ವಭಾವದಲ್ಲೇ ಇದೆ. ಶಿಕಾರಿಪುರದಲ್ಲಿ ಪಕ್ಷ ಸಂಘಟನೆಯ ಆರಂಭದ ದಿನದಲ್ಲಿ ತಲೆಗೆ ಗಂಭೀರ ಏಟು ಬಿದ್ದಾಗಲೂ ಅವರ ಧೈರ್ಯ ಕುಂದಲಿಲ್ಲ. ಅಧಿಕಾರಕ್ಕೆ ಬಂದ ನಂತರ ರಾಜಕೀಯ ಕಾರಣಕ್ಕೆ ಅಪಮಾನವಾದಾಗಲೂ ಹೋರಾಟ ಮರೆಯಲಿಲ್ಲ. ಯಾವ ಅವಮಾನದಿಂದಲೂ ಅವರು ಕುಗ್ಗಲಿಲ್ಲ. ಸದಾ ಜನರ ವಿಶ್ವಾಸಗಳಿಸುತ್ತಾ, ಅವರಿತ ಚಟುವಟಿಕೆಯಿಂದ ಮತ್ತೆಮತ್ತೆ ಮೇಲೇಳುತ್ತಲೇ ಬಂದವರು. ಅವರ ನಡೆದು ಬಂದ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕಲ್ಲು ಮುಳ್ಳುಗಳ ಕಾಡುದಾರಿಯಾಗಿತ್ತು. ಆ ಕಾಡು ದಾರಿಯಲ್ಲಿ ಸಾಗಿಬಂದು ರಾಜ್ಯಕ್ಕೆ ಅಮೃತದ ಫ‌ಲ ನೀಡಿದ ಧೀಮಂತ ನಾಯಕ.

ನಮ್ಮದು 50 ವರ್ಷಕ್ಕೂ ಮೀರಿದ ಗೆಳೆತನ. ನಾನು ಚಿಕ್ಕವನಾಗಿದ್ದಾಗಿನಿಂದಲೂ ಯಡಿಯೂರಪ್ಪ ಅವರನ್ನು ಬಲ್ಲವ. ನಂತರ ಅವರೊಂದಿಗೆ ಪಕ್ಷ ಸಂಘಟನೆಯಲ್ಲೂ ಕಾರ್ಯ ನಿರ್ವಹಿಸಿದ್ದೇನೆ. ಹಾಗೆಯೇ ಅವರು ಅಧಿಕಾರಕ್ಕೆ ಬಂದ ನಂತರವೂ ಸ್ವಲ್ಪ ಸಮಯ ಅವರೊಂದಿಗೆ ಸೇವೆ ಸಲ್ಲಿಸಿದ್ದೇನೆ.  ರಾಜ್ಯದ ಬಡಜನರ ನಾಡಿ ಮಿಡಿತ ಗೊತ್ತಿರುವ ಕೆಲವೇ ಕೆಲವು ನಾಯಕರಲ್ಲಿ ಇವರು ಒಬ್ಬರಾಗಿದ್ದಾರೆ. ಯಡಿಯೂರಪ್ಪನವರಷ್ಟು ಬಾರಿ ಕರ್ನಾಟಕವನ್ನು ಸುತ್ತಿದ, ಪ್ರವಾಸ ಮಾಡಿದ ಇನ್ನೊಬ್ಬ ರಾಜಕಾರಣಿ   ವಿಧಾನಸೌಧದ ಒಳಗೆ ಮತ್ತು ಹೊರೆಗೆ ಹೋರಾಟವನ್ನು ನಡೆಸಿದ ಚೈತನ್ಯದ ಚಿಲುಮೆ. ಅಧಿಕಾರದಲ್ಲಿದ್ದಾಗಲೂ ಸದಾ ಬಡ ಜನರ ಕಲ್ಯಾಣಕ್ಕಾಗಿಯೋ ಯೋಜನೆ, ಯೋಜನೆಗಳನ್ನು ರೂಪಿಸುತ್ತಿದ್ದರು.

ಅವರಲ್ಲಿ ಸಂಘಟನಾ ಕೌಶಲ್ಯ ಕರಗತವಾಗಿತ್ತು. ಯಾರಿಗೆ ಯಾವ ಜವಾಬ್ದಾರಿ ನೀಡಿಬೇಕು ಮತ್ತು ಯಾರಿಂದ ಹೇಗೆ ಪಕ್ಷದ ಕಾರ್ಯ ಮಾಡಿಸಬೇಕು ಎಂಬುದರ ಬಗ್ಗೆ ಸ್ಪಷ್ಟತೆಯಿತ್ತು ಹಾಗೂ ಅದರಂತೆಯೇ ಕಾರ್ಯನಿರ್ವಹಿಸಿದ್ದರು. ಕೇವಲ ಅಧಿಕಾರ ಕ್ಕಾಗಿಯೇ  ಪಕ್ಷಕ್ಕೆ ಬರುವವನ್ನು  ನೋಡಿದ್ದಾರೆ. ಜೀವನದಲ್ಲಿ ಏನಾದರೂ ಸಾಧಿಸಲೇಬೇಕು ಎನ್ನುವ ಛಲಗಾರ ಮತ್ತು ರಾಜ್ಯ, ದೇಶ ಮತ್ತು ಧರ್ಮದ ಹಿತಕ್ಕೆ ಸಂಬಂಧಿಸಿದಂತೆ ಸ್ಪಷ್ಟ ತಿಳಿವಳಿಕೆ, ಅವರಲ್ಲಿ ಆರಂಭದ ದಿನಗಳಿಂದಲೂ ನಾನು ಕಂಡಿದ್ದೇನೆ. ಯಡಿಯೂರಪ್ಪನವರ ಇನ್ನೊಂದು ವಿಶೇಷವೆಂದರೆ, ಆಡಳಿತ ಮತ್ತು ಹಣಕಾಸು ಈ ಎರಡರ ಜತೆಗೆ ಇಂಗ್ಲಿಷ್‌. ಈ ಮೂರು ವಿಷಯವನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ತಮ್ಮ ಜಾಣ್ಮೆಯ ಆಲೋಚನೆಗಳಿಂದ ಕಲಿತಿದ್ದರು. ಅಧಿಕಾರಶಾಹಿ ವ್ಯವಸ್ಥೆಯಲ್ಲಿ ಅಧಿಕಾರಿಗಳಿಂದ ಹೇಗೆ ಕೆಲಸ ಮಾಡಿಸಬೇಕು ಎಂಬ ಬುದ್ದಿವಂತಿಕೆ ಮತ್ತು ಜನರ ಕಲ್ಯಾಣದ ಯೋಜನೆಯ ಅನುಷ್ಠಾನಕ್ಕೆ ಎಂದೂ ವಿಳಂಬ ಮಾಡುತ್ತಿರಲಿಲ್ಲ.

ಅಪಮಾನ, ಹಿನ್ನಡೆಯಾದಾಗ ಪ್ರತಿಬಾರಿಯೂ ಧೈರ್ಯದಿಂದ ಮೇಲೇಳುವ ಅವರ ಗುಣ, ಅಪರಿಮಿತ ಚಟುವಟಿಕೆ, ನಿರಂತರ ಸೃಜನಶೀಲತೆ ಸದಾ ಪ್ರೇರಣೆ.

 

ಎಂ.ಪಿ.ಕುಮಾರ, ಬಿ.ಎಸ್‌.ಯಡಿಯೂರಪ್ಪ ಅವರ ಆಪ್ತ ಹಾಗೂ

ಒಡನಾಡಿ, ರಾಷ್ಟ್ರೋತ್ಥಾನ ಪರಿಷತ್‌ಅಧ್ಯಕ್ಷ

 

ಟಾಪ್ ನ್ಯೂಸ್

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.