ಆತ್ಮೀಯತೆಯ ತಾಯಿ ಹೃದಯಿ ಯಡಿಯೂರಪ್ಪ


Team Udayavani, Jul 27, 2021, 6:20 AM IST

Untitled-1

ಯಡಿಯೂರಪ್ಪ ಅವರಿಗೆ ಒಮ್ಮೊಮ್ಮೆ  ತುಂಬ ಕೋಪ ಬರುತ್ತದೆ. ಕ್ಷಣಾರ್ಧದಲ್ಲೇ ಅದನ್ನು ಮರೆತು ಬಿಡುತ್ತಾರೆ. ಯಾರ ಮೇಲೂ ಕೋಪದಿಂದಾಗಿ ದ್ವೇಷ ಸಾಧನೆ ಮಾಡುವ ಸ್ವಭಾವ ಅವರದ್ದಲ್ಲ. ಎಲ್ಲರನ್ನು ಆತ್ಮೀಯತೆಯಿಂದ ಮಾತನಾಡಿಸುವ ತಾಯಿ ಹೃದಯಿ.

ಮಂಡ್ಯದಿಂದ ಶಿಕಾರಿಪುರಕ್ಕೆ ಅಳಿಯನಾಗಿ ಬಂದು, ಆರಂಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ ಅವರು, ನಂತರ ಜನ ಸಂಘದ ಜವಾಬ್ದಾರಿಯನ್ನು ವಹಿಸಿಕೊಂಡು, ಪಕ್ಷವನ್ನು ಬಲಪಡಿಸುವಲ್ಲಿ ಅನೇಕ ಹೋರಾಟಗಳನ್ನು ಮಾಡಿದರು. ಅವರದ್ದು ಕ್ಷಣ ಕ್ಷಣಕ್ಕೂ ಹೋರಾಟದ ಬದುಕು, ಹೋರಾಟದ ಅದಮ್ಯ ಚೇತನ ಎಂದರೂ ತಪ್ಪಾಗದು. ಸದಾ ಚಟುವಟಿಕೆ, ಕ್ರಿಯಾಶೀಲತೆ ಹಾಗೂ ವಿನೂತನ ಯೋಜನೆಗಳೊಂದಿಗೆ ಕೆಲಸ ಮಾಡುವುದು ಅವರ ಸ್ವಭಾವದಲ್ಲೇ ಇದೆ. ಶಿಕಾರಿಪುರದಲ್ಲಿ ಪಕ್ಷ ಸಂಘಟನೆಯ ಆರಂಭದ ದಿನದಲ್ಲಿ ತಲೆಗೆ ಗಂಭೀರ ಏಟು ಬಿದ್ದಾಗಲೂ ಅವರ ಧೈರ್ಯ ಕುಂದಲಿಲ್ಲ. ಅಧಿಕಾರಕ್ಕೆ ಬಂದ ನಂತರ ರಾಜಕೀಯ ಕಾರಣಕ್ಕೆ ಅಪಮಾನವಾದಾಗಲೂ ಹೋರಾಟ ಮರೆಯಲಿಲ್ಲ. ಯಾವ ಅವಮಾನದಿಂದಲೂ ಅವರು ಕುಗ್ಗಲಿಲ್ಲ. ಸದಾ ಜನರ ವಿಶ್ವಾಸಗಳಿಸುತ್ತಾ, ಅವರಿತ ಚಟುವಟಿಕೆಯಿಂದ ಮತ್ತೆಮತ್ತೆ ಮೇಲೇಳುತ್ತಲೇ ಬಂದವರು. ಅವರ ನಡೆದು ಬಂದ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕಲ್ಲು ಮುಳ್ಳುಗಳ ಕಾಡುದಾರಿಯಾಗಿತ್ತು. ಆ ಕಾಡು ದಾರಿಯಲ್ಲಿ ಸಾಗಿಬಂದು ರಾಜ್ಯಕ್ಕೆ ಅಮೃತದ ಫ‌ಲ ನೀಡಿದ ಧೀಮಂತ ನಾಯಕ.

ನಮ್ಮದು 50 ವರ್ಷಕ್ಕೂ ಮೀರಿದ ಗೆಳೆತನ. ನಾನು ಚಿಕ್ಕವನಾಗಿದ್ದಾಗಿನಿಂದಲೂ ಯಡಿಯೂರಪ್ಪ ಅವರನ್ನು ಬಲ್ಲವ. ನಂತರ ಅವರೊಂದಿಗೆ ಪಕ್ಷ ಸಂಘಟನೆಯಲ್ಲೂ ಕಾರ್ಯ ನಿರ್ವಹಿಸಿದ್ದೇನೆ. ಹಾಗೆಯೇ ಅವರು ಅಧಿಕಾರಕ್ಕೆ ಬಂದ ನಂತರವೂ ಸ್ವಲ್ಪ ಸಮಯ ಅವರೊಂದಿಗೆ ಸೇವೆ ಸಲ್ಲಿಸಿದ್ದೇನೆ.  ರಾಜ್ಯದ ಬಡಜನರ ನಾಡಿ ಮಿಡಿತ ಗೊತ್ತಿರುವ ಕೆಲವೇ ಕೆಲವು ನಾಯಕರಲ್ಲಿ ಇವರು ಒಬ್ಬರಾಗಿದ್ದಾರೆ. ಯಡಿಯೂರಪ್ಪನವರಷ್ಟು ಬಾರಿ ಕರ್ನಾಟಕವನ್ನು ಸುತ್ತಿದ, ಪ್ರವಾಸ ಮಾಡಿದ ಇನ್ನೊಬ್ಬ ರಾಜಕಾರಣಿ   ವಿಧಾನಸೌಧದ ಒಳಗೆ ಮತ್ತು ಹೊರೆಗೆ ಹೋರಾಟವನ್ನು ನಡೆಸಿದ ಚೈತನ್ಯದ ಚಿಲುಮೆ. ಅಧಿಕಾರದಲ್ಲಿದ್ದಾಗಲೂ ಸದಾ ಬಡ ಜನರ ಕಲ್ಯಾಣಕ್ಕಾಗಿಯೋ ಯೋಜನೆ, ಯೋಜನೆಗಳನ್ನು ರೂಪಿಸುತ್ತಿದ್ದರು.

ಅವರಲ್ಲಿ ಸಂಘಟನಾ ಕೌಶಲ್ಯ ಕರಗತವಾಗಿತ್ತು. ಯಾರಿಗೆ ಯಾವ ಜವಾಬ್ದಾರಿ ನೀಡಿಬೇಕು ಮತ್ತು ಯಾರಿಂದ ಹೇಗೆ ಪಕ್ಷದ ಕಾರ್ಯ ಮಾಡಿಸಬೇಕು ಎಂಬುದರ ಬಗ್ಗೆ ಸ್ಪಷ್ಟತೆಯಿತ್ತು ಹಾಗೂ ಅದರಂತೆಯೇ ಕಾರ್ಯನಿರ್ವಹಿಸಿದ್ದರು. ಕೇವಲ ಅಧಿಕಾರ ಕ್ಕಾಗಿಯೇ  ಪಕ್ಷಕ್ಕೆ ಬರುವವನ್ನು  ನೋಡಿದ್ದಾರೆ. ಜೀವನದಲ್ಲಿ ಏನಾದರೂ ಸಾಧಿಸಲೇಬೇಕು ಎನ್ನುವ ಛಲಗಾರ ಮತ್ತು ರಾಜ್ಯ, ದೇಶ ಮತ್ತು ಧರ್ಮದ ಹಿತಕ್ಕೆ ಸಂಬಂಧಿಸಿದಂತೆ ಸ್ಪಷ್ಟ ತಿಳಿವಳಿಕೆ, ಅವರಲ್ಲಿ ಆರಂಭದ ದಿನಗಳಿಂದಲೂ ನಾನು ಕಂಡಿದ್ದೇನೆ. ಯಡಿಯೂರಪ್ಪನವರ ಇನ್ನೊಂದು ವಿಶೇಷವೆಂದರೆ, ಆಡಳಿತ ಮತ್ತು ಹಣಕಾಸು ಈ ಎರಡರ ಜತೆಗೆ ಇಂಗ್ಲಿಷ್‌. ಈ ಮೂರು ವಿಷಯವನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ತಮ್ಮ ಜಾಣ್ಮೆಯ ಆಲೋಚನೆಗಳಿಂದ ಕಲಿತಿದ್ದರು. ಅಧಿಕಾರಶಾಹಿ ವ್ಯವಸ್ಥೆಯಲ್ಲಿ ಅಧಿಕಾರಿಗಳಿಂದ ಹೇಗೆ ಕೆಲಸ ಮಾಡಿಸಬೇಕು ಎಂಬ ಬುದ್ದಿವಂತಿಕೆ ಮತ್ತು ಜನರ ಕಲ್ಯಾಣದ ಯೋಜನೆಯ ಅನುಷ್ಠಾನಕ್ಕೆ ಎಂದೂ ವಿಳಂಬ ಮಾಡುತ್ತಿರಲಿಲ್ಲ.

ಅಪಮಾನ, ಹಿನ್ನಡೆಯಾದಾಗ ಪ್ರತಿಬಾರಿಯೂ ಧೈರ್ಯದಿಂದ ಮೇಲೇಳುವ ಅವರ ಗುಣ, ಅಪರಿಮಿತ ಚಟುವಟಿಕೆ, ನಿರಂತರ ಸೃಜನಶೀಲತೆ ಸದಾ ಪ್ರೇರಣೆ.

 

ಎಂ.ಪಿ.ಕುಮಾರ, ಬಿ.ಎಸ್‌.ಯಡಿಯೂರಪ್ಪ ಅವರ ಆಪ್ತ ಹಾಗೂ

ಒಡನಾಡಿ, ರಾಷ್ಟ್ರೋತ್ಥಾನ ಪರಿಷತ್‌ಅಧ್ಯಕ್ಷ

 

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.