ಬಿಎಸ್‌ವೈ ಕಣ್ಣೀರು ಒರೆಸಿದ ವರಿಷ್ಠರು


Team Udayavani, Jul 28, 2021, 6:40 AM IST

ಬಿಎಸ್‌ವೈ ಕಣ್ಣೀರು ಒರೆಸಿದ ವರಿಷ್ಠರು

ಬೆಂಗಳೂರು: “ವಯಸ್ಸಿನ’ ಅಧಿಕೃತ ಕಾರಣಕ್ಕೆ ಸಿಎಂ ಪದವಿಯನ್ನು ತ್ಯಾಗ ಮಾಡಿದ ಯಡಿಯೂರಪ್ಪ, ತಮ್ಮ ಸರಕಾರದ ದ್ವಿತೀಯ ವರ್ಷದ ಸಮಾರಂಭದಲ್ಲೇ ವಿದಾಯವನ್ನೂ ಹೇಳಬೇಕಾಗಿ ಬಂತು. ವಿದಾಯ ಭಾಷಣದಲ್ಲಿ  ತಾವು ಏಕಾಂಗಿಯಾಗಿ ಪಕ್ಷ ಕಟ್ಟಿದ ಸಂದರ್ಭ, ಎದುರಿಸಿದ ಹಲವಾರು ಅಗ್ನಿಪರೀಕ್ಷೆಗಳನ್ನು ವಿವರಿಸುತ್ತಲೇ ಅವರ ದುಃಖ ಉಮ್ಮಳಿಸಿತು. ಕಣ್ಣೀರನ್ನು ಸುರಿಸುತ್ತಲೇ “ಎಲ್ಲರ  ಒಪ್ಪಿಗೆ ಪಡೆದು’ ರಾಜೀನಾಮೆ ಘೋಷಣೆ ಮಾಡಿದರು.

ಈಗ ರಾಜ್ಯ ಬಿಜೆಪಿಯಲ್ಲಿ ಪಿತೃ ಸ್ಥಾನ ದಲ್ಲಿರುವ ಯಡಿಯೂರಪ್ಪ  ಹರಿಸಿದ ಕಣ್ಣೀರು ರಾಜ್ಯ ರಾಜಕಾರಣ ದಲ್ಲಿ  ಅಪಾರ್ಥ ಸಂದೇಶ ರವಾ ನಿಸುವ ಸಾಧ್ಯತೆ ದಟ್ಟವಾಗಿತ್ತು.  ಪಕ್ಷದ ಕಾರ್ಯಕರ್ತರಲ್ಲಿ, ಅವರ ಹಿಂದೆ ಇರುವ ಪ್ರಬಲ ಲಿಂಗಾ ಯತ ಸಮುದಾಯದಲ್ಲಿ  ಹರಡ ಬಹುದಾಗಿದ್ದ ಋಣಾತ್ಮಕತೆ. ಅವು ಗಳೆಲ್ಲಕ್ಕಿಂತ ಹೆಚ್ಚಾಗಿ ಯಡಿಯೂರಪ್ಪ ಸ್ಥಿತ್ಯಂತರವನ್ನು ಕಾಂಗ್ರೆಸ್‌ ಬಳಸಿ ಕೊಳ್ಳುವ ಸಾಧ್ಯತೆ ಬಹುತೇಕ ಹೆಚ್ಚಿತ್ತು. ಜತೆಗೆ, ಮುಂದಿನ ವಿಧಾನಸಭೆ ಚುನಾವಣೆ ಮಾತ್ರವಲ್ಲದೆ ಲೋಕಸಭೆ ಚುನಾವಣೆಯನ್ನೂ ಎದುರಿಸ ಬೇಕಾದಾಗ ಯಡಿಯೂರಪ್ಪ ಅವರ ಅಗತ್ಯತೆ ಇವೆಲ್ಲವನ್ನೂ ಮನಗಂಡ ಬಿಜೆಪಿ ವರಿಷ್ಠರು ಯಡಿಯೂರಪ್ಪ ಅವರಿಗೆ ಮನ್ನಣೆ ನೀಡಿರುವುದು ವೇದ್ಯವಾಗುತ್ತದೆ.  ಜತೆಗೆ, ಯಡಿ ಯೂರಪ್ಪ ಅವರ  ಅಧಿಕಾರ ತ್ಯಾಗದ ಸಂದರ್ಭದ ಭಾವುಕ ಕಣ್ಣೀರನ್ನು ಒರೆಸುವ ಉದ್ದೇಶವೂ ವರಿಷ್ಠರಿಗೆ  ಇರುವಂತಿದೆ.

ಹಾಗಾಗಿ ಯಡಿಯೂರಪ್ಪ ಅವರ ಕಣ್ಣೀರಿನ ಗಂಭೀರ ಸಂದೇಶಕ್ಕೆ ಅವರ ಕಣ್ಣೀರು ಒರೆಸುವ ಸಂದೇಶದ ಮೂಲಕ ಪ್ರಮುಖವಾಗಿ ಲಿಂಗಾಯಿತ ಸಮುದಾಯವನ್ನು ಸಮಾಧಾನಿಸುವ ಮತ್ತು ಯಡಿ ಯೂರಪ್ಪ ಅವರ ಮಾತಿಗೆ ಮಣೆ ಹಾಕಿದೆ. ಆ  ಮೂಲಕ ಅವರ ಅಧಿಕಾರ ರಾಜಕಾರಣಕ್ಕೆ ಗೌರವಯುತವಾಗಿ ವಿದಾಯ ಹೇಳುವ ನಿರ್ಧಾರಕ್ಕೆ ಬಿಜೆಪಿ ಬಂದಿರುವ ಸಾಧ್ಯತೆಯಿದೆ. ಶಾಸಕಾಂಗ ಪಕ್ಷ ಸಭೆಯಲ್ಲಿ ಯಡಿಯೂರಪ್ಪ ಅವರ ಮೂಲಕವೇ ಮುಂದಿನ ಮುಖ್ಯಮಂತ್ರಿ ಹೆಸರನ್ನು ಸೂಚಿಸುವಂತೆ ಮಾಡಿ ಅವರ ಆಪ್ತನನ್ನೇ ಮುಖ್ಯಮಂತ್ರಿ ಮಾಡುವ ಮೂಲಕ ಜಾಣ್ಮೆಯ ಸಂದೇಶ ರವಾನಿಸಿದೆ.

ಖಡಕ್‌ ಸಂದೇಶ?:

ಏನಿದ್ದರೂ, ಯಡಿಯೂರಪ್ಪ ತಮ್ಮ ವಿದಾಯದಲ್ಲೂ ರಾಜಕೀಯವಾಗಿ ಮತ್ತಷ್ಟು ಶಕ್ತಿಯುತವಾಗಿ ಹೊರ ಹೊಮ್ಮುವ ಲಕ್ಷಣ ತೋರಿಸಿದ್ದಾರೆ. ತಮ್ಮ ಆಪ್ತನನ್ನೇ ಮುಖ್ಯಮಂತ್ರಿಯಾಗಿಸುವ ಮೂಲಕ ತಮ್ಮ ವಿರೋಧಿ ಬಣದ ನಾಯಕರಿಗೂ ಖಡಕ್‌ ಸಂದೇಶ ನೀಡಿದ್ದಾರೆ. ಅವರ ಪದಚ್ಯುತಿಗೆ ಕಾರಣರಾದ ರಾಜಕೀಯ ನಾಯಕರು ಒಳದಾರಿಯಿಂದ ಸಿಎಂ ಪದವಿಯತ್ತ ಬರುವುದನ್ನು ತಡೆದಿದ್ದಾರೆ.

ಅವರ ರಾಜಕೀಯ ಅನುಭವದ ಅಗಾಧತೆ ಮುಂದೆ ಚಿಕ್ಕವರಾಗಿದ್ದರೂ, ವಿರುದ್ಧ ಮಾತನಾಡಿದ ಕೆಲ ನಾಯಕರಿಗೆ  ಮಾತಿನೇಟು ನೀಡದೆ, ರಾಜಕೀಯ ಪೆಟ್ಟಿನ ಮೂಲಕ ಆಘಾತ ನೀಡಿರುವುದನ್ನು ಗಮನಿಸಬೇಕಿದೆ.

ಆದರೆ ಪಕ್ಷದ ಕೇಂದ್ರ ನಾಯ ಕರೂ ಮುಂದಿನ ರಾಜಕೀಯ ನಡಾವಳಿಗಳನ್ನು ಖಂಡಿತ ಹತ್ತಿರ ದಿಂದ ನೋಡಲಿದ್ದಾರೆ. ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ತಮ್ಮ ಪಕ್ಷದ ನಿಲುವಿಗೆ ತಕ್ಕಂತೆ ರೂಪಿಸುವ ಸಾಧ್ಯತೆ ಹೆಚ್ಚಿದೆ. ಜನತಾ ಪರಿವಾರ ದಿಂದ ಬಂದ ಬೊಮ್ಮಾಯಿ, ಸಮಾಜವಾದಿ ನಾಯಕರ ಗರಡಿ ಯಲ್ಲಿ ಪಳಗಿದವರು. ಈಗ ಬಿಜೆಪಿ ಮುಖ್ಯಮಂತ್ರಿಯಾಗಿರುವ ಅವರನ್ನು ತನ್ನ ಪಕ್ಷದ ಚೌಕಟ್ಟಿನಲ್ಲಿ ಹೇಗೆ ತನ್ನ ಮುಂದಿನ ನಾಯಕನಾಗಿ ರೂಪಿಸುತ್ತದೆ ಮತ್ತು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ಬರುವಂತೆ ಹೇಗೆ ನೋಡಿಕೊಳ್ಳುತ್ತಾರೆ ಎನ್ನುವುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

 

-ನವೀನ್‌ ಅಮ್ಮೆಂಬಳ

 

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.