ಶಿಕಾರಿಪುರಕ್ಕೆ ವಿಜಯೇಂದ್ರ ಅಭ್ಯರ್ಥಿ: ಯಡಿಯೂರಪ್ಪ
Team Udayavani, Feb 25, 2023, 7:30 AM IST
ಬೆಂಗಳೂರು: ಚುನಾವಣ ರಾಜಕಾರಣದಲ್ಲಿ ಭಾಗಿಯಾಗುವುದಿಲ್ಲ ಎಂದು ಘೋಷಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ತಮ್ಮ ಕಾರ್ಯಕ್ಷೇತ್ರ ಶಿಕಾರಿಪುರ ವಿಧಾನಸಭಾ ಕ್ಷೇತ್ರಕ್ಕೆ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಉತ್ತರಾಧಿಕಾರಿಯಾಗಿ ಮತ್ತೆ ಘೋಷಣೆ ಮಾಡಿದ್ದಾರೆ.
ವಿಧಾನಸಭೆ ಕಲಾಪದ ಬಳಿಕ ಅಂಬೇಡ್ಕರ್ ಪ್ರತಿಮೆ ಹಾಗೂ ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ವಿಧಾನಸೌಧದಿಂದ ನಡೆದುಕೊಂಡೇ ಬಂದು ಗಾಂಧಿ ಪ್ರತಿಮೆಗೆ ಅವರು ನಮನ ಸಲ್ಲಿಸಿದರು. ಶಿಕಾರಿಪುರಕ್ಕೆ ಬಹುತೇಕ ವಿಜಯೇಂದ್ರ ಅವರೇ ಮುಂದಿನ ಚುನಾವಣೆಯ ಅಭ್ಯರ್ಥಿ. ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ನಮ್ಮ ಪಕ್ಷದ ವರಿಷ್ಠರು ಅಧಿಕೃತ ಘೋಷಣೆ ಮಾಡುತ್ತಾರೆ ಎಂದು ಹೇಳಿದರು.
ಇದೇ ತಿಂಗಳು 27ರಂದು ನನ್ನ ಜನ್ಮದಿನ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಶಿವಮೊಗ್ಗಕ್ಕೆ ಆಗಮಿಸಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಲಿದ್ದಾರೆ.
ರಾಜ್ಯದಲ್ಲಿ 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?