15 ಡಿನೋಟಿಫಿಕೇಶನ್ ಕೇಸ್ ಗೆ ಮರು ಜೀವ! BSYಗೆ ಮತ್ತೊಂದು ಶಾಕ್
Team Udayavani, Aug 25, 2017, 2:11 PM IST
ಬೆಂಗಳೂರು: ಎಸಿಬಿ ತೂಗುಗತ್ತಿಯಲ್ಲಿ ಸಿಲುಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಶಾಕ್ ಎಂಬಂತೆ, ಸುಪ್ರೀಂಕೋರ್ಟ್ ಬಿಎಸ್ ವೈ ವಿರುದ್ಧದ 15ಕ್ಕೂ ಹೆಚ್ಚು ಡಿನೋಟಿಫಿಕೇಶನ್ ಪ್ರಕರಣಗಳ ಮರು ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಸಾಮಾಜಿಕ ಕಾರ್ಯಕರ್ತ ಸಿರಾಜಿನ್ ಬಾಷಾ ಸಲ್ಲಿಸಿದ್ದ ಅರ್ಜಿ ಜತೆಗೆ ರಾಜ್ಯ ಸರ್ಕಾರ ಕೂಡಾ ಮೇಲ್ಮನವಿ ಸಲ್ಲಿಸಿದ್ದು, ಎರಡೂ ಅರ್ಜಿಗಳನ್ನೂ ಒಟ್ಟಾಗಿ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅವರ ವಿರುದ್ಧ ದಾಖಲಾಗಿದ್ದ ಡಿನೋಟಿಫಿಕೇಶನ್ ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿತ್ತು.
ಈ ನಿಟ್ಟಿನಲ್ಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿತ್ತು. ಇದೀಗ ಸಿರಾಜಿನ್ ಬಾಷಾ ಮತ್ತು ಬಾಲರಾಜ್ ಹಾಗೂ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿದೆ. ಶುಕ್ರವಾರ ಪ್ರರಣದ ವಿಚಾರಣೆ ಆರಂಭಿಸಿದ ಸುಪ್ರೀಂ ಪೀಠ, ಮುಂದಿನ 8 ವಾರಗಳ ಕಾಲ ವಿಚಾರಣೆಯನ್ನು ಮುಂದೂಡಿದೆ.