ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ: ಅಂಗಾರಗೆ ಮೀನುಗಾರಿಕೆ; ಎಂಟಿಬಿಗೆ ಅಬಕಾರಿ
Team Udayavani, Jan 21, 2021, 7:53 AM IST
ಬೆಂಗಳೂರು: ಸಂಪುಟ ವಿಸ್ತರಣೆಯ ನಂತರ ಇದೀಗ ಸಚಿವರ ಖಾತೆ ಹಂಚಿಕೆ ಹಾಗೂ ಬದಲಾವಣೆಯೂ ಬಹುತೇಕ ಪೂರ್ಣಗೊಂಡಿದ್ದು, ರಾಜ್ಯಪಾಲರ ಅಂಕಿತವಷ್ಟೇ ಬಾಕಿಯಿದೆ ಎಂದು ಹೇಳಾಗುತ್ತಿದೆ.
ಸಿಎಂ ಯಡಿಯೂರಪ್ಪ ಅವರು ತಮ್ಮ ಸಂಪುಟದ ಸಚಿವರ ಖಾತೆಯ ಹಂಚಿಕೆ ಪ್ರಕ್ರಿಯೆಯನ್ನು ಬುಧವಾರ ತಡರಾತ್ರಿ ಪೂರ್ಣಗೊಳಿಸಿ, ರಾಜ್ಯಪಾಲರ ಅಂಕಿತಕ್ಕೆ ಕಳು ಹಿಸಿಕೊಟ್ಟಿದ್ದು, ಗುರುವಾರ ಬೆಳಗ್ಗೆ 8 ಗಂಟೆಯೊಳಗೆ ರಾಜ್ಯಪಾಲರ ಅಂಕಿತ ಬೀಳುವ ಸಾಧ್ಯತೆಯಿದೆ.
ಇದನ್ನೂ ಓದಿ:ಆಧಾರ್ ಮಾನ್ಯತೆ ತೀರ್ಪು ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಸುಳ್ಯದ ಎಸ್. ಅಂಗಾರ (ಬಂದರು ಮತ್ತು ಮೀನುಗಾರಿಕೆ), ಕೋಟ ಶ್ರೀನಿವಾಸ ಪೂಜಾರಿ (ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ), ಉಮೇಶ್ ಕತ್ತಿ (ಆಹಾರ, ನಾಗರಿಕ ಪೂರೈಕೆ ಇಲಾಖೆ), ಬಸವರಾಜ ಬೊಮ್ಮಾಯಿ (ಗೃಹ, ಕಾನೂನು, ಸಂಸದೀಯ ವ್ಯವಹಾರ), ಜೆ.ಸಿ.ಮಾಧುಸ್ವಾಮಿ (ವೈದ್ಯಕೀಯ ಶಿಕ್ಷಣ, ಕನ್ನಡ-ಸಂಸ್ಕೃತಿ ಇಲಾಖೆ), ಸಿ.ಸಿ.ಪಾಟೀಲ್ (ಸಣ್ಣ ಕೈಗಾರಿಕೆ, ವಾರ್ತಾ ಇಲಾಖೆ) ಅರವಿಂದ ಲಿಂಬಾವಳಿ (ಅರಣ್ಯ), ಮುರುಗೇಶ್ ನಿರಾಣಿ (ಗಣಿ, ಭೂ ವಿಜ್ಞಾನ), ಎಂಟಿಬಿ ನಾಗರಾಜ್ (ಅಬಕಾರಿ), ಡಾ| ಕೆ. ಸುಧಾಕರ (ಆರೋಗ್ಯ), ಆನಂದ್ ಸಿಂಗ್ (ಪ್ರವಾ ಸೋದ್ಯಮ, ಪರಿಸರ ಇಲಾಖೆ), ಸಿ. ಪಿ. ಯೋಗೇಶ್ವರ್ (ಸಣ್ಣ ನೀರಾವರಿ), ಆರ್. ಶಂಕರ್(ಪೌರಾಡಳಿತ ಹಾಗೂ ರೇಷ್ಮೆ ಇಲಾಖೆ), ಗೋಪಾಲಯ್ಯ (ತೋಟಗಾರಿಕೆ, ಸಕ್ಕರೆ), ಕೆ.ಸಿ. ನಾರಾಯಣ ಗೌಡ(ಯುವ ಸಬಲೀಕರಣ, ಕ್ರೀಡೆ, ಹಜ್ ಮತ್ತು ವಕ್ಫ್) ಖಾತೆ ನೀಡಲಾಗುತ್ತದೆ ಎನ್ನಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!