ವಿನಯ್ ಕುಲಕರ್ಣಿ ಬಂಧನವು ಬಿಎಸ್ ವೈ ಮತ್ತು ಬಿಜೆಪಿಯ ರಾಜಕೀಯ ಪಿತೂರಿ: ಸುರ್ಜೇವಾಲ
Team Udayavani, Nov 7, 2020, 1:59 PM IST
ಬೆಂಗಳೂರು: ಬಿಜೆಪಿ ಸರ್ಕಾರವು ಸಿಬಿಐ ಅನ್ನು ತನ್ನ ಕೈಗೊಂಬೆಯಾಗಿ ಮಾಡಿಕೊಂಡು ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿರುವುದು ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿಯ ರಾಜಕೀಯ ಪಿತೂರಿಯನ್ನು ಎತ್ತಿ ತೋರಿಸುತ್ತದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ನಾಯಕರು ಇಂತಹ ಬೆದರಿಕೆ ತಂತ್ರಗಳಿಗೆ ಎಂದಿಗೂ ಜಗ್ಗುವುದಿಲ್ಲ ಎಂಬುದನ್ನು ಯಡಿಯೂರಪ್ಪನವರು ಅರ್ಥಮಾಡಿಕೊಳ್ಳಬೇಕು ಎಂದಿದ್ದಾರೆ.
ಅಸ್ಥಿರ ಯಡಿಯೂರಪ್ಪ ಸರ್ಕಾರವು ತನ್ನ ಮುಂಚೂಣಿ ಘಟಕಗಳಾದ ಸಿಬಿಐ & ಇಡಿ ಬಳಸಿಕೊಂಡು ಡಿಕೆ ಶಿವಕುಮಾರ್, ಡಾ.ಜಿ ಪರಮೇಶ್ವರ್, ವಿನಯ್ ಕುಲಕರ್ಣಿ ಸೇರಿದಂತೆ ಇನ್ನಿತರ ಕಾಂಗ್ರೆಸ್ ನಾಯಕರನ್ನು ಹಣಿಯಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಈ ತಂತ್ರಗಳು ಜನರಿಗಾಗಿ ಹೋರಾಡುವ ನಮ್ಮ ಸಂಕಲ್ಪವನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆ ಎಂಬುದನ್ನು ಬಿಜೆಪಿ ನೆನಪಿನಲ್ಲಿಡಬೇಕು ಎಂದು ಸುರ್ಜೇವಾಲಾ ಬಿಜೆಪಿ ನಾಯಕರಿಗೆ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ