ಯಡಿಯೂರಪ್ಪ ಜೊತೆ ಆರು ದೊಡ್ಡ ದೊಡ್ಡ ಬ್ಯಾಗ್ ಗಳೂ ದೆಹಲಿಗೆ ಹೋಗಿದೆ!: ಎಚ್ ಡಿಕೆ ಹೊಸ ಬಾಂಬ್
Team Udayavani, Jul 17, 2021, 2:29 PM IST
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ದೆಹಲಿ ಭೇಟಿ ರಾಜ್ಯದ ಚರ್ಚೆಯ ವಿಷಯವಾಗಿದೆ. ಬಿಜೆಪಿ ಮಾತ್ರವಲ್ಲದೆ ಇತರ ಪಕ್ಷಗಳಲ್ಲೂ ಈ ಭೇಟಿಯ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಆದರೆ ಸಿಎಂ ರಾಜಧಾನಿ ಭೇಟಿಯ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ಡಿಕೆ, ನಿನ್ನೆ ವಿಶೇಷ ವಿಮಾನದಲ್ಲಿ ಪುತ್ರರೊಂದಿಗೆ ದೆಹಲಿಗೆ ತೆರಳಿದ ಯಡಿಯೂರಪ್ಪ ಆರು ದೊಡ್ಡ ದೊಡ್ಡ ಬ್ಯಾಗ್ ಗಳನ್ನು ಹಿಡಿದುಕೊಂಡು ಹೋಗಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದರು.
ಇದನ್ನೂ ಓದಿ:ಏರ್ ಪೋರ್ಟ್ ಗೆ ಹೊರಟಿದ್ದ ಯಡಿಯೂರಪ್ಪಗೆ ಶಾ ಬುಲಾವ್: ವಾಪಾಸ್ ತೆರಳಿದ ಸಿಎಂ
ರಾಜ್ಯದ ವಿಷಯಗಳನ್ನು ಆರು ಬ್ಯಾಗ್ ನಲ್ಲಿ ಹಾಕಿದ್ದರೋ, ಅಥವಾ ಅದರಲ್ಲಿ ಬೇರೆ ಏನಿತ್ತು ಎನ್ನುವುದು ಗೊತ್ತಿಲ್ಲ. ನಿನ್ನೆ ಪ್ರಧಾನಿಯವರನ್ನು ಭೇಟಿ ಮಾಡಲು ಹೋದಾಗ ಆರು ಬ್ಯಾಗ್ ಗಳೂ ಹೋದವೋ ಅಥವಾ ಅವರು ಒಬ್ಬರೇ ಮಾತ್ರ ಹೋಗಿದ್ದಾರೆಯೇ ಎನ್ನುವುದು ಗೊತ್ತಿಲ್ಲ. ಅದರ ಬಗ್ಗೆ ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ ಎಂದರು.
ಸಿಎಂ ಯಡಿಯೂರಪ್ಪ ಅವರ ಮನವಿಗೆ ಪುರಸ್ಕರಿಸಿ ಪ್ರಧಾನಿಗಳು, ಕೇಂದ್ರ ಸರ್ಕಾರ ಎಷ್ಟು ಗೌರವ ಸಲ್ಲಿಸುತ್ತಾರೆ ಎನ್ನುವುದನ್ನು ಕಾದು ನೋಡೋಣ ಎಂದು ಕುಮಾರಸ್ವಾಮಿ ಹೇಳಿದರು.
ಇದನ್ನೂ ಓದಿ: ಬಕ್ರೀದ್ ಹಿನ್ನೆಲೆ : ಮಸೀದಿಯಲ್ಲಿ ಪ್ರಾರ್ಥನೆ ಮಾಡಲು ಒಂದು ಬಾರಿಗೆ 50 ಮಂದಿಗೆ ಮಾತ್ರ ಅವಕಾಶ
ಅಕ್ರಮ ಗಣಿಗಾರಿಕೆ ಬಗ್ಗೆ ರಾಜ್ಯಪಾಲರಿಗೆ ದೂರು ವಿಚಾರವಾಗಿ ಮಾತನಾಡಿದ ಅವರು, ರಾಜ್ಯದ ಹಲವೆಡೆ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಸರ್ಕಾರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿ. ವೈಯಕ್ತಿಕವಾಗಿ ನನ್ನ ಮತ್ತು ಪಕ್ಷದ ಬೆಂಬಲವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?