ಬಿಎಸ್ವೈ “ತೀನ್ ದಿನ್ ಕಾ ನಾಯಕ’: ಸಿದ್ದು
Team Udayavani, May 15, 2019, 3:00 AM IST
ಹುಬ್ಬಳ್ಳಿ: ಕಳೆದ ಚುನಾವಣೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಬಹುಮತ ಸಾಬೀತುಪಡಿಸಲು ಸಾಧ್ಯವಾಗದೆ ರಾಜೀನಾಮೆ ನೀಡಿದ್ದರು. ಹೀಗಾಗಿ, ಯಡಿಯೂರಪ್ಪನವರು “ತೀನ್ ದಿನ್ ಕಾ ನಾಯಕ’ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು.
ವರೂರಿನಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, “ಇದೀಗ ಹೆಚ್ಚು ಶಾಸಕರನ್ನು ಹೊಂದಿದ ಪಕ್ಷ ನಮಗೆ ಅಧಿಕಾರ ನೀಡುತ್ತಿಲ್ಲ ಎಂದು ನಾಚಿಕೆಯಿಲ್ಲದೆ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಮೂರು ಕಾಸಿನ ಮರ್ಯಾದೆಯಿಲ್ಲದ ಬಿಜೆಪಿ ನಾಯಕರು ವಾಮಮಾರ್ಗದಿಂದ ಅಧಿಕಾರ ಹಿಡಿಯಬೇಕೆಂಬ ಉದ್ದೇಶದಿಂದ ಮಾಡುತ್ತಿರುವ ತಂತ್ರಗಾರಿಕೆ ಯಶಸ್ವಿಯಾಗಲು ಸಾಧ್ಯವಿಲ್ಲ.
ಮಾಜಿ ಸಚಿವ ದಿ| ಸಿ.ಎಸ್.ಶಿವಳ್ಳಿ ಅವರಿಗೆ 25 ಕೋಟಿ ರೂ.ನೀಡಲು ಬಿಜೆಪಿ ನಾಯಕರು ಒತ್ತಡ ಹಾಕಿ ವಿಧಾಸೌಧದ ಶಾಸಕರ ಭವನದಲ್ಲಿ 5 ಕೋಟಿ ರೂ.ನೀಡಲು ಹೋಗಿದ್ದರು. ನಾನು ಲಂಡನ್ನಲ್ಲಿದ್ದೆ. ಆಗ ಶಿವಳ್ಳಿ ನನಗೆ ಕರೆ ಮಾಡಿ ವಿಷಯ ತಿಳಿಸಿದರು.
ಸರ್ ಇವರನ್ನು ಹಿಡಿಸಲಾ ಎಂದು ಕೇಳಿದ್ದರು. ಹೋಗಲಿ ಬಿಡಪ್ಪಾ, ಉಗುದು ಹೊರಗಟ್ಟು ಎಂದು ಹೇಳಿದ್ದೆ. ದುಡ್ಡು ಕೊಡಲು ಹೋದವರಿಗೆ ತಕ್ಕ ಶಾಸ್ತಿ ಮಾಡಿ ಆಚೆ ಅಟ್ಟಿದ್ದರು. ಈ ಮೂಲಕ ಶಿವಳ್ಳಿ ಪಕ್ಷದ ನಿಷ್ಠೆ ಹಾಗೂ ಕ್ಷೇತ್ರದ ಜನತೆಯ ವಿಶ್ವಾಸಕ್ಕೆ ತಲೆ ಬಾಗಿದ್ದರು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ