BSY ಒತ್ತಡಕ್ಕೆ ಮಣಿದು ಅಂದು ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಲಾಗಿತ್ತು: ರೇಣುಕಾಚಾರ್ಯ
ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ರೇಣುಕಾಚಾರ್ಯ
Team Udayavani, Nov 22, 2020, 3:23 PM IST
ಬೆಂಗಳೂರು: ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಸಿಎಂಗೆ ಮತ್ತು ಹೈಕಮಾಂಡ್ ಗೆ ಬಿಟ್ಟದ್ದು. ಕೆಲ ಸಚಿವರನ್ನು ಕೈಬಿಡುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಮಾತಾಡಿದ್ದೇವೆ. ಅದನ್ನು ಹಾದಿಯಲ್ಲಿ ಬೀದಿಯಲ್ಲಿ ನಾನು ಚರ್ಚೆ ಮಾಡೋದಿಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.
ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ರೇಣುಕಾಚಾರ್ಯ ಸಿಎಂ ಯಡಿಯೂರಪ್ಪನವರನ್ನು ಭೇಟಿ ಮಾಡಿದ ನಂತರ ಕಾವೇರಿ ನಿವಾಸದ ಬಳಿ ಈ ಹೇಳಿಕೆ ನೀಡಿದ್ದಾರೆ.
ಶಾಸಕರ ಭಾವನೆಗಳನ್ನು ಪಕ್ಷದ ಅಧ್ಯಕ್ಷರಿಗೆ,ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ದೆಹಲಿಗೆ ಹೋಗಿದ್ದಾಗ ಬಿಎಲ್ ಸಂತೋಷ್ ಅವರ ಗಮನಕ್ಕೂ ತಂದಿದ್ದೇವೆ. ಎಲ್ಲವನ್ನೂ ತೀರ್ಮಾನ ಮಾಡೋದು ಹೈಕಮಾಂಡ್ ಮತ್ತು ಮುಖ್ಯಮಂತ್ರಿಗಳು. ಯಾವಾಗ ಆಗುವುದು ಎಂದು ನಮಗೂ ತಿಳಿದಿಲ್ಲ ಎಂದರು.
ಇದನ್ನೂ ಓದಿ: ನಿಮ್ಮನ್ನು ಕಾಂಗ್ರೆಸ್ ಸಂಸ್ಥಾಪಕರ ಮೊಮ್ಮಗ, ಇಂದಿರಾಗಾಂಧಿ ದತ್ತುಪುತ್ರ ಎನ್ನಲ್ಲ: CT ರವಿ
ಕರ್ನಾಟಕ ಬಂದ್ ವಿಚಾರವಾಗಿ’ ರೋಲ್ ಕಾಲ್ ಸಂಘಟನೆಗಳು’ ಎಂದಿದ್ದ ಯತ್ನಾಳ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡ ಎಂಪಿ ರೇಣುಕಾಚಾರ್ಯ, ಯತ್ನಾಳ್ ನೀಡಿದ್ದ ಹೇಳಿಕೆಯಲ್ಲಿ ಏನು ತಪ್ಪಿದೆ ? ಅವರು ಸರಿಯಾಗಿಯೇ ಹೇಳಿದ್ದಾರೆ. ಯಡಿಯೂರಪ್ಪ ವಯಸ್ಸು ಅವರ ಅನುಭಕ್ಕೆ ಇವರು ನೀತಿ ಪಾಠ ಹೇಳ್ತಾರೆ ಎಂದು ಕಿಡಿಕಾರಿದರು.
ವಾಟಾಳ್ ನಾಗರಾಜ್ ಗೆ ಏಕವಚನದಲ್ಲೇ ಜಾಡಿಸಿದ ರೇಣುಕಾಚಾರ್ಯ, ‘ನಿನ್ನ ಬಾಯಲ್ಲಿ ಒಂದಾದರೂ ಒಳ್ಳೆಯ ಶಬ್ಧ ಬರುತ್ತಾ..!? ಕನ್ನಡದಲ್ಲಿ ಎಷ್ಟು ಒಳ್ಳೆಯ ಪದಗಳಿವೆ. ಆದ್ರೆ ನೀನು ಒಂದಾದರೂ ಒಳ್ಳೆಯ ಪದ ಬಳಕೆ ಮಾಡ್ತಿಯಾ ? ನಿನಗೆ ತಾಕತ್ ಇದ್ರೆ, ನಿನ್ನ ನಾಲಿಗೆ ಮೇಲೆ ಹಿಡಿತ ಇರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ರಾಜಕೀಯ ಖೈದಿ: ಸೌದಿಯ ಮಹಿಳಾ ಹಕ್ಕು ಹೋರಾಟಗಾರ್ತಿ ಲೌಜೈನ್ ಅಲ್-ಹಥ್ಲೌಲ್ ರ ಬಗ್ಗೆ ಗೊತ್ತಾ?
ಯಡಿಯೂರಪ್ಪನವರಿಗೆ ಕನ್ನಡದ ಬಗ್ಗೆ ಇರುವ ಬದ್ಧತೆಯನ್ನು ಪ್ರಶ್ನೆ ಮಾಡಬೇಡಿ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ತಂದಿದ್ದು ಯಡಿಯೂರಪ್ಪನವರು. ಮನಮೋಹನ್ ಸಿಂಗ್ ಅವರಿಗೆ ಕರೆ ಮಾಡಿ, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನ ನೀಡಬೇಕು ಎಂದು ಯಡಿಯೂರಪ್ಪನವರು ಒತ್ತಡ ಹಾಕಿದ್ದರು. ಮಾತ್ರವಲ್ಲದೆ ಶಾಸ್ತ್ರೀಯ ಸ್ಥಾನಮಾನ ನೀಡದಿದ್ದರೇ, ದೆಹಲಿಗೆ ಬಂದು ರಾಜಘಾಟ್ ಮುಂದೆ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದರು. ಈ ಒತ್ತಡಕ್ಕೆ ಮಣಿದು ಅಂದು ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಲಾಗಿತ್ತು ಎಂದು ತಿಳಿಸಿದರು.
ಮರಾಠ ನಿಗಮವೇ ಹೊರತಾಗಿ ಮರಾಠಿ ಭಾಷೆಯ ಪ್ರಾಧಿಕಾರ ಅಲ್ಲ. ಮರಾಠ ಜನಾಂಗದ ಅಭಿವೃದ್ಧಿಗೆ ಮಾಡಿರುವ ನಿಗಮ ಇದು. ಕರ್ನಾಟಕದಲ್ಲಿ ಹುಟ್ಟಿರುವ ಮರಾಠಿ ಭಾಷೆಯೆ ಮಾತನಾಡಲು ಬರದ ಮರಾಠ ಜನಾಂಗಕ್ಕೆ ಮಾಡಿದ ನಿಗಮ ಇದಾಗಿದೆ. ಈ ನಿಗಮಕ್ಕೂ ಮರಾಠ ಭಾಷೆಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಇದನ್ನೂ ಓದಿ: ಆಶ್ರಮದಲ್ಲಿ ಚಹಾ ಸೇವಿಸಿದ ನಂತರ ಇಬ್ಬರು ಸಾಧುಗಳ ನಿಗೂಢ ಸಾವು: ಮತ್ತೊಬ್ಬರ ಸ್ಥಿತಿ ಚಿಂತಾಜನಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’