ಬುಡ್ಗ ಜಂಗಮ ಕುಲಶಾಸ್ತ್ರೀಯ ಆಧ್ಯಯನ: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಬುಡ್ಗ ಜಂಗಮ/ಬೇಡ ಜಂಗಮ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಸಮಸ್ಯೆ ....
Team Udayavani, Oct 12, 2022, 5:36 PM IST
ಬೆಂಗಳೂರು: ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿರುವ ಅಲೆಮಾರಿ ಸಮುದಾಯ ಬುಡ್ಗ ಜಂಗಮ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಕ್ರಮ ವಹಿಸುವುದಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಬುಡ್ಗ ಜಂಗಮ ಅಲೆಮಾರಿ ಸಮುದಾಯದ ಮುಖಂಡರೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಿದ ಸಚಿವರು, ಬುಡ್ಗ ಜಂಗಮ ಅಥವಾ ಬೇಡ ಜಂಗಮ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ನಿಜವಾದ ಸಮುದಾಯ ಸರ್ಕಾರದ ಸೌಲಭ್ಯದಿಂದ ವಂಚಿತವಾಗುತ್ತಿರುವ ಬಗ್ಗೆ ಸಮುದಾಯದ ಅಹವಾಲಿನ ಬಳಿಕ ಈ ಬಗ್ಗೆ ನಿಜವಾದ ಬುಡ್ಗ ಜಂಗಮದ ಕುಲಶಾಸ್ತ್ರೀಯ ಆದ್ಯಯನ ಕೈಗೊಲಕ್ಳುವ ಬಗ್ಗೆ ಕ್ರಮ ವಹಿಸುವುದಾಗಿ ಅವರು ತಿಳಿಸಿದರು.
ಅಲ್ಲದೆ ಬುಡ್ಗ ಜಂಗಮ ಸಮುದಾಯಗಳಿಗೆ ನಿಯಮಾನುಸಾರ ಜಾತಿ ಪ್ರಮಾಣ ಪತ್ರ ವಿತರಣೆ, ಶೈಕ್ಷಣಿಕ ಹಾಗೂ ರಾಜಕೀಯ ಅಸಮತೋಲನ ನಿವಾರಣೆ, ಮನೆ, ಜಮೀನು ಸೇರಿದಂತೆ ವಿವಿಧ ಸರ್ಕಾರದ ಸೌಲಭ್ಯಗಳನ್ನು ವಿತರಿಸುವ ಸಂಬಂಧ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸುವುದಾಗಿ ಸಚಿವರು ಭರವಸೆ ನೀಡಿದರು.
ಬುಡ್ಗ ಜಂಗಮ ಅಲೆಮಾರಿ ಸಮುದಾಯದ ಪ್ರತಿನಿಧಿಗಳು, ಸಮಾಜ ಕಲ್ಯಾಣ ಇಲಾಖೆ ಸಲಹೆಗಾರರಾದ ಡಾ.ಇ.ವೆಂಕಟಯ್ಯ, ಇಲಾಖೆ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್, ಆಯುಕ್ತ ಡಾ.ಕೆ.ರಾಕೇಶಕುಮಾರ್, ಅಲೆಮಾರಿ ಕೋಶದ ವಿಶೇಷಾಧಿಕಾರಿ ಡಾ.ಜಿ.ಪಿ.ದೇವರಾಜು ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ