Budget Discussion; ಆಡಳಿತ ವೈಫ‌ಲ್ಯವನ್ನು ಅಧಿವೇಶನದಲ್ಲಿ ಮುನ್ನೆಲೆಗೆ ತರಲು ವಿಪಕ್ಷ ಸಜ್ಜು

ಉಳಿದ ಕಲಾಪದಲ್ಲಿ ವಿಪಕ್ಷ ಬಳಸುವ ಅಸ್ತ್ರಗಳ ಬಗ್ಗೆ ತೀವ್ರ ಕುತೂಹಲ

Team Udayavani, Feb 19, 2024, 7:20 AM IST

Budget Discussion; ಆಡಳಿತ ವೈಫ‌ಲ್ಯವನ್ನು ಅಧಿವೇಶನದಲ್ಲಿ ಮುನ್ನೆಲೆಗೆ ತರಲು ವಿಪಕ್ಷ ಸಜ್ಜು

ಬೆಂಗಳೂರು: ಒಂದು ವಾರದಿಂದ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದ ಕಲಾಪಗಳು ಸೋಮವಾರದಿಂದ ಮುಂದುವರಿಯಲಿದ್ದು, ರಾಜ್ಯಪಾಲರ ಭಾಷಣ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 3.71 ಲಕ್ಷ ಕೋಟಿ ರೂ. ಬಜೆಟ್‌ ಮೇಲೆ ಚರ್ಚೆ ಕಾವೇರಲಿದೆ.

ಕೇಂದ್ರ ಸರಕಾರದಿಂದ ಬರ ಪರಿಹಾರ ಸಿಕ್ಕಿಲ್ಲ, ಅನುದಾನಗಳು ಸರಿಯಾಗಿ ಸಿಗುತ್ತಿಲ್ಲ ಎಂಬುದು ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖವಾಗಿತ್ತಲ್ಲದೆ, ಅದೇ ಧಾಟಿಯ ಅಂಶಗಳನ್ನು ರಾಜ್ಯ ಬಜೆಟ್‌ನಲ್ಲೂ ಪ್ರಸ್ತಾವಿಸಲಾಗಿದೆ.

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ನನ್ನ ತೆರಿಗೆ, ನನ್ನ ಹಕ್ಕು ಅಭಿಯಾನದ ಮೂಲಕ ಕೇಂದ್ರದ ವಿರುದ್ಧ ಸೆಣಸಾಟಕ್ಕೆ ನಿಂತಿರುವ ರಾಜ್ಯ ಕಾಂಗ್ರೆಸ್‌ ಸರಕಾರ ಒಂದೆಡೆಯಾದರೆ, ಕೇಂದ್ರ ಸರಕಾರದ ಸಮರ್ಥನೆಯ ಜತೆಗೆ ರಾಜ್ಯ ಸರಕಾರದ 8 ತಿಂಗಳ ಆಡಳಿತ ವೈಫ‌ಲ್ಯವನ್ನು ಚರ್ಚೆಯ ಮುನ್ನೆಲೆಗೆ ತರಲು ವಿಪಕ್ಷಗಳು ಸೆಣೆಸುತ್ತಿವೆ.

ಮೈತ್ರಿಯಾದರೂ ಒಂಟಿ ಹೋರಾಟ?
ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಜಂಟಿ ಹೋರಾಟ ನಡೆಸುವುದಾಗಿ ಹೇಳಿದ್ದ ಬಿಜೆಪಿ ಹಾಗೂ ಜೆಡಿಎಸ್‌, ಒಂಟಿ ಹೋರಾಟವನ್ನೇ ಮುಂದುವರಿಸಿದ್ದು, ವಿಧಾನಸಭೆಯಲ್ಲಿ ಕೊಬ್ಬರಿಗೆ ರಾಜ್ಯಸರಕಾರದಿಂದ ಸಹಾಯಧನ ಕೊಡಬೇಕೆಂಬ ಜೆಡಿಎಸ್‌ನ ಹೋರಾಟಕ್ಕೆ ಬಿಜೆಪಿ ಬೆಂಬಲಿಸಿದ್ದು ಅಷ್ಟಕ್ಕಷ್ಟೇ. ಕಾನೂನು-ಸುವ್ಯವಸ್ಥೆ ವಿಚಾರದಲ್ಲಿ ಹೋರಾಟ ಕೈಗೊಂಡ ಬಿಜೆಪಿಗೆ ಕೆಳಮನೆಯಲ್ಲಿ ಜೆಡಿಎಸ್‌ ಸಾಥ್‌ ಸಿಗಲೇ ಇಲ್ಲ. ಮೇಲ್ಮನೆಯಲ್ಲೂ ಬಿಜೆಪಿ-ಜೆಡಿಎಸ್‌ನ ಹೊಂದಾಣಿಕೆ ಎದ್ದು ಕಾಣಲಿಲ್ಲ. ಇನ್ನೂ 5 ದಿನಗಳ ಕಾಲ ನಡೆಯಲಿರುವ ಕಲಾಪದಲ್ಲಿ ವಿಪಕ್ಷಗಳು ಯಾವ ಅಸ್ತ್ರಗಳನ್ನು ಪ್ರಯೋಗಿಸಲಿವೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಸರಕಾರಕ್ಕೆ ಸವಾಲಾಗದ ವಿಪಕ್ಷ
ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ವಿಪಕ್ಷ ನಾಯಕ ಆರ್‌.ಅಶೋಕ್‌, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಜೆಡಿಎಸ್‌ ನಾಯಕ ಎಚ್‌. ಡಿ. ಕುಮಾರಸ್ವಾಮಿ ಅವರು ಸರಕಾರಕ್ಕೆ ಕೊಂಚ ಬಿಸಿ ಮುಟ್ಟಿಸಿದ್ದು ಬಿಟ್ಟರೆ, ಒಟ್ಟಾರೆಯಾಗಿ ಸರಕಾರವನ್ನು ಕಟ್ಟಿ ಹಾಕುವ ಬಹಳ ದೊಡ್ಡ ಪ್ರಯತ್ನವೇನೂ ಕಂಡುಬರಲಿಲ್ಲ. ಮಂಡ್ಯದ ಕೆರಗೋಡಿನ ಹನುಮಧ್ವಜ, ಮಂಗಳೂರಿನ ಶಾಲಾ ಶಿಕ್ಷಕಿಯಿಂದ ಕೋಮುದ್ವೇಷದ ಪಾಠ ಸಹಿತ ಕೆಲವೇ ವಿಚಾರಗಳಲ್ಲಿ ವಿಪಕ್ಷಗಳು ಸರಕಾರಕ್ಕೆ ತೀಕ್ಷ್ಣ ಪ್ರತಿಕ್ರಿಯೆಗಳನ್ನು ಕೊಟ್ಟಿವೆ. ಉಳಿದಂತೆ ಸರಕಾರದ ಪಾಲಿಗೆ ವಿಪಕ್ಷ ಯಾವುದೇ ದೊಡ್ಡ ರೀತಿಯ ಸವಾಲಾಗಿ ಪರಿಣಮಿಸಿಲ್ಲ.

ಇನ್ನೂ 12-15 ಮಸೂದೆ ಮಂಡನೆ?
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಮಸೂದೆಗೆ ವಿಧಾನಸಭೆಯಲ್ಲಿ ಅನುಮೋದನೆ ನೀಡುವ ಮೂಲಕ ನಾಮಫ‌ಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಗೆ ಅಸ್ತು ಎನ್ನಲಾಗಿದ್ದು, ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿ ಮೀಸಲಾತಿ ನೀಡುವ ಎರಡು ವಿಧೇಯಕಗಳಿನ್ನೂ ಚರ್ಚೆ ಹಂತದಲ್ಲಿವೆ. ಇದಲ್ಲದೆ ಧನವಿನಿಯೋಗ ಮಸೂದೆ ಸಹಿತ 12 ರಿಂದ 15 ಮಸೂದೆಗಳು ಈ ಬಾರಿ ಮಂಡನೆಯಾಗುವ ಸಾಧ್ಯತೆಗಳಿವೆ. ವಿಧಾನಸಭೆ ಕಲಾಪವನ್ನು ಬೆಳಗ್ಗೆ 9.30ಕ್ಕೇ ಆರಂಭಿಸುತ್ತಿರುವುದಕ್ಕೆ ಸ್ಪೀಕರ್‌ ಖಾದರ್‌ ವಿರುದ್ಧ ವಿಪಕ್ಷ ಮಾತ್ರವಲ್ಲದೆ, ಆಡಳಿತಾರೂಢ ಕಾಂಗ್ರೆಸ್‌ ಕೂಡ ಪರೋಕ್ಷ ಬೇಸರ ವ್ಯಕ್ತಪಡಿಸಿದ್ದು, ಸಮಯದಲ್ಲಿ ಬದಲಾವಣೆ ಆಗುವ ಸಾಧ್ಯತೆಗಳು ಕಡಿಮೆ ಎನ್ನಲಾಗಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.