ಬೆಲೆ ಏರಿಕೆ ಬಗ್ಗೆ ಬಜೆಟ್ ಮೌನ: ಬಿ.ಕೆ.ಹರಿಪ್ರಸಾದ್
ಉದಯವಾಣಿ ವರದಿ ಪ್ರಸ್ತಾವಿಸಿ ವಾಗ್ಧಾಳಿ ನಡೆಸಿದರು
Team Udayavani, Feb 23, 2023, 6:30 AM IST
ವಿಧಾನಪರಿಷತ್ತು: ಅಗತ್ಯ ವಸ್ತುಗಳ ಬೆಲೆ ದುಬಾರಿ ಆಗುತ್ತಿದೆ. ಬಡವರ ಬದುಕು ಕಷ್ಟವಾಗಿದೆ. ಇದರ ಬಗ್ಗೆ ಬಜೆಟ್ನಲ್ಲಿ ಏನನ್ನೂ ಹೇಳಿಲ್ಲ. ಇದೊಂದು ಬಡವರ ವಿರೋಧಿ, ಜನರ ವಿರೋಧಿ ಬಜೆಟ್ ಎಂದು ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.
ಮುಖ್ಯಮಂತ್ರಿಯವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಮೇಲೆ ಭಾಷಣ ಮಾಡುವಾಗ “ಎಲ್ಲವೂ ದುಬಾರಿ’ ಎಂಬ ಶೀರ್ಷಿಕೆಯಡಿ ಫೆ.21ರಂದು “ಉದಯವಾಣಿ’ಯಲ್ಲಿ ಪ್ರಕಟವಾದ ವಿಶೇಷ ವರದಿಯನ್ನು ಸದನದಲ್ಲಿ ಪ್ರದರ್ಶಿಸಿದ ಹರಿಪ್ರಸಾದ್, ಬೆಲೆ ಏರಿಕೆ ವಿಚಾರವಾಗಿ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.
“ಬಡವರ ಬೆನ್ನು ಮುರಿಯುವ ಬೆಲೆ ಏರಿಕೆಯನ್ನು ನೂರು ದಿನಗಳಲ್ಲಿ ನಿಯಂತ್ರಿಸುತ್ತೇನೆ’ ಎಂದು ಪ್ರಧಾನಿ ಮೋದಿ ಹೇಳಿದ್ದರು. ಆದರೆ, ಅಂತಹ ಯಾವ ಕ್ರಮವೂ ಆಗಿಲ್ಲ. ಡೀಸೆಲ್, ಅಡುಗೆ ಅನಿಲ ದರ ನಿರಂತರವಾಗಿ ಏರುತ್ತಲೇ ಇದೆ. ಇದರ ಜತೆಗೆ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಹಾಲು, ತರಕಾರಿ ಇತ್ಯಾದಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ. ಇದರ ಬಗ್ಗೆ ರಾಜ್ಯದ ಬಜೆಟ್ನಲ್ಲಿ ಏನನ್ನೂ ಹೇಳಲಾಗಿಲ್ಲ. ಹಾಗಾಗಿ, ಇದೊಂದು ಬಡವರ ವಿರೋಧಿ ಬಜೆಟ್ ಎಂದು ಆರೋಪಿಸಿದರು.
ರೈತರ ಆತ್ಮಹತ್ಯೆ ಡಬಲ್ ಆಗಿದೆ: ರೈತರ ಆದಾಯ ಡಬಲ್ ಮಾಡುತ್ತೇನೆಂದು ಪ್ರಧಾನಿ ಮೋದಿ ಘೋಷಿಸಿದ್ದರು. ಈ ಡಬಲ್ ಇಂಜಿನ್ ಸರ್ಕಾರದಲ್ಲಿ ರೈತರ ಆದಾಯ ಡಬಲ್ ಆಗಿಲ್ಲ. ಬದಲಿಗೆ ರೈತರ ಆತ್ಮಹತ್ಯೆ ಡಬಲ್ ಆಗಿದೆ. ಈ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಆಕ್ಷೇಪಿಸಿದ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ, ಕೃಷಿ ಸಮ್ಮಾನ್ ಯೋಜನೆಯಡಿ 10 ಲಕ್ಷ ರೈತರಿಗೆ ನೆರವು ನೀಡಲಾಗಿದೆ. ವಿಷ ಸೇವಿಸಿದ ರೈತನಿಗೆ ಕುಡುಕ ಎಂದು ಹೇಳಿದ್ದ ನಿಮ್ಮ ಸರ್ಕಾರಕ್ಕೆ ನಾಚಿಕೆ ಆಗಬೇಕು ಎಂದರು.
ಕೇಂದ್ರದಲ್ಲಿ ನಮ್ಮ ಸರ್ಕಾರ ಇದ್ದಾಗ ರೈತರ 72 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಲಾಗಿತ್ತು. ರೈತರ ಮೇಲೆ ಗೋಲಿಬಾರ್ ಮಾಡಿದ ರೈತರನ್ನು ಗೂಂಡಾಗಳು ಎಂದು ಹೇಳಿದ್ದ ಸರ್ಕಾರ ನಿಮ್ಮದು. ರೈತರ ಸಾಲ ಮನ್ನಾ ಮಾಡಿದರೆ ಪ್ರಯೋಜವಿಲ್ಲ ಎಂದು ನಿಮ್ಮ ಪಕ್ಷದ ಸಂಸದರೊಬ್ಬರು ಹೇಳಿದ್ದಾರೆ. ನಿಮಗೆ ನಾಚಿಕೆ ಆಗಬೇಕು ಎಂದು ಹರಿಪ್ರಸಾದ್ ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು