ಅಂಗಡಿಗೆ ನುಗ್ಗಿದ ಬಸ್: ಮಾಲಿಕ ಸಾವು
Team Udayavani, Aug 2, 2017, 8:46 AM IST
ಬೆಂಗಳೂರು: ಬಸ್ವೊಂದರ ಬ್ರೇಕ್ ಫೇಲ್ ಆಗಿ ಅಂಗಡಿಯೊಂದಕ್ಕೆ ನುಗ್ಗಿ ಮಾಲಿಕ ದಾರುಣವಾಗಿ ಸಾವನ್ನಪ್ಪಿದ ಘಟನೆ ನೆಲಮಂಗಲದ ತ್ಯಾಮಗೊಂಡ್ಲು ಪ್ರದೇಶದಲ್ಲಿ ಮಂಗಳವಾರ ನಡೆದಿದೆ.
ಅಡವೀಶಯ್ಯ(45ವರ್ಷ) ಮೃತಪಟ್ಟ ದುರ್ದೈವಿ. ದಾಬಸ್ ಪೇಟೆಯಿಂದ ದೊಡ್ಡಬಳ್ಳಾಪುರಕ್ಕೆ ಹೊರಟ್ಟಿದ್ದ ಬಸ್ ಬ್ರೇಕ್ ಫೇಲ್ ಆಗಿ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ತ್ಯಾಮ್ಲಗೊಂಡು ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಕೊಂಡು ಬಸ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.