ಮೊದಲ ಬಾರಿಗೆ ರೈಲಿನಲ್ಲಿ ಬಸ್ ಸಾಗಣೆ; ದೊಡ್ಡಬಳ್ಳಾಪುರದಿಂದ ಚಂಡೀಗಢಕ್ಕೆ ಹೊರಟ 32 ಬಸ್ಗಳು
Team Udayavani, May 19, 2022, 1:18 AM IST
ಬೆಂಗಳೂರು: ಬೆಂಗಳೂರು ವಿಭಾಗವು ಇದೇ ಮೊದಲ ಬಾರಿಗೆ ಸರಕು ಸಾಗಣೆ ರೈಲಿನಲ್ಲಿ ಬಸ್ಗಳನ್ನು ಸಾಗಣೆ ಮಾಡಿದೆ. ಇಲ್ಲಿನ ದೊಡ್ಡಬಳ್ಳಾಪುರದ ಗೂಡ್ಸ್ಶೆಡ್ನಿಂದ ಬುಧವಾರ ಚಂಡೀಗಢಕ್ಕೆ 32 ಬಸ್ಗಳನ್ನು ರೈಲಿನಲ್ಲಿ ಕಳುಹಿಸಿಕೊಡಲಾಯಿತು. ಈ ಮೂಲಕ 23.27 ಲಕ್ಷ ರೂ. ಆದಾಯ ಗಳಿಸಿದೆ.
2,500 ಕಿ.ಮೀ. ದೂರದಲ್ಲಿರುವ ಚಂಡೀಗಢಕ್ಕೆ 5ರಿಂದ 6 ದಿನಗಳಲ್ಲಿ ಈ ಬಸ್ಗಳು ರೈಲಿನ ಮೂಲಕ ತಲುಪಲಿವೆ. ಈ ಹಿಂದೆ ಪ್ಯಾಸೆಂಜರ್ ಬಸ್ಗಳನ್ನು ದೊಡ್ಡ ದೊಡ್ಡ ಟ್ರಕ್ಗಳ ಮೂಲಕ ಸಾಗಣೆ ಮಾಡಲಾಗುತ್ತಿತ್ತು. ಇದರಿಂದ ಸಮಯದ ಜತೆಗೆ ಭಾರಿ ಪ್ರಮಾಣದ ಡೀಸೆಲ್ ಖರ್ಚಾಗುತ್ತಿತ್ತು. ವಾಯುಮಾಲಿನ್ಯ ಮತ್ತು ಸಂಚಾರದಟ್ಟಣೆ ಹೆಚ್ಚಿತ್ತು.
ವಿವಿಧ ಹಂತಗಳಲ್ಲಿ 64 ಬಸ್ ರವಾನೆ
32 ರ್ಯಾಕ್ಗಳಲ್ಲಿ ಮೊದಲ ಹಂತದಲ್ಲಿ ಬಿಎಸ್-6 ಮಾದರಿಯ 32 ಪ್ರಯಾಣಿಕರ ಬಸ್ಗಳನ್ನು ಚಂಡೀಗಢಕ್ಕೆ ರೈಲಿನಲ್ಲಿ ಸಾಗಣೆ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಇನ್ನೂ 64 ಬಸ್ಗಳನ್ನು ವಿವಿಧ ಹಂತಗಳಲ್ಲಿ ರೈಲಿನಲ್ಲೇ ಸಾಗಿಸಲು ಉದ್ದೇಶಿಸಲಾಗಿದೆ.
ಈ ಸಂಬಂಧ ಬ್ಯುಸಿನೆಸ್ ಡೆವಲಪ್ಮೆಂಟ್ ಯೂನಿಟ್ ತಂಡವು ಅಶೋಕ್ ಲೈಲ್ಯಾಂಡ್ ಹಾಗೂ ಐವಿಸಿ ಲಾಜಿಸ್ಟಿಕ್ಸ್ ಮತ್ತು ಹಿಮಾಚಲ ಪ್ರದೇಶ ರಸ್ತೆ ಸಾರಿಗೆ ನಿಗಮದೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಇದರ ನೆರವಿನಿಂದ ಸಾಗಣೆ ಸಾಧ್ಯವಾಗಿದೆ ಎಂದು ಬೆಂಗಳೂರು ವಿಭಾಗೀಯ ರೈಲ್ವೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ಹುಣಸೂರು : ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಬೈಕ್ : ಸವಾರ ಸ್ಥಳದಲ್ಲೇ ಸಾವು
ಐಎಂಎ ಕೆಎಸ್ಬಿ ವೈದ್ಯರ ದಿನಾಚರಣೆ ಪ್ರಶಸ್ತಿಗೆ ಡಾ. ಆಶಾ ಪ್ರಭು ಆಯ್ಕೆ
ಸಾಗರ: ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ 14 ಮಕ್ಕಳು ದಿಢೀರ್ ಅಸ್ವಸ್ಥ
ಮುಂದಿನ 25 ವರ್ಷದಲ್ಲಿ ರಾಜ್ಯಕ್ಕೆ ಜಾಗತಿಕ ಪ್ರತಿಷ್ಠೆ: ಸಚಿವ ಅಶ್ವತ್ಥ ನಾರಾಯಣ
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
ವಿಂಬಲ್ಡನ್ ಗ್ರ್ಯಾನ್ಸ್ಲಾಂ ಟೆನಿಸ್ ಟೂರ್ನಿ: ವೀನಸ್ ದಾಖಲೆ ಮುರಿಯುವತ್ತ ಸ್ವಿಯಾಟೆಕ್
ಮಾರುತಿ ಸುಜುಕಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದ ಡಾ| ವೆಂಕಟರಾಮನ್ ಇನ್ನಿಲ್ಲ
ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ಹುಣಸೂರು : ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಬೈಕ್ : ಸವಾರ ಸ್ಥಳದಲ್ಲೇ ಸಾವು
ಇಮ್ರಾನ್ ಖಾನ್ ನಿವಾಸದಲ್ಲಿ ಬೇಹು ಸಾಧನ ಅಳವಡಿಕೆಗೆ ಯತ್ನ: ಭದ್ರತಾ ಸಿಬ್ಬಂದಿ ಬಂಧನ