Bengaluru ; ನಗರದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ; 18 ಬಸ್ ಗಳು ಸುಟ್ಟು ಭಸ್ಮ
ಸ್ಥಳಕ್ಕೆ ಭೇಟಿ ನೀಡಿ ಪರೀಶೀಲಿಸಿದ ಡಿಸಿಎಂ, ಸಚಿವ ರಾಮಲಿಂಗಾ ರೆಡ್ಡಿ
Team Udayavani, Oct 30, 2023, 4:20 PM IST
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸೋಮವಾರ (ಅ 30) ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಹೊಸಕೆರೆ ಹಳ್ಳಿಯ ವೀರಭದ್ರ ನಗರದಲ್ಲಿರುವ ಗ್ಯಾರೇಜ್ ನಲ್ಲಿ ಬೆಂಕಿ ಹೊತ್ತಿಕೊಂಡು ದುರಸ್ತಿಗೆಂದು ಇಟ್ಟಿದ್ದ ಸುಮಾರು 18 ಕ್ಕೂ ಬಸ್ ಗಳು ಸುಟ್ಟು ಭಸ್ಮವಾಗಿವೆ.
10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಲು ಮತ್ತು ಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸಿದವು. ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.
ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. ಬಸ್ ಡಿಪೋ ಹತ್ತಿರವೇ ಗ್ಯಾರೇಜ್ ಕೆಲಸ ಮಾಡಲಾಗುತ್ತಿತ್ತು.
“ನಾವು ಇದನ್ನು ನಿರ್ಲಕ್ಷ್ಯ ಎಂದು ಕರೆಯಲಾಗುವುದಿಲ್ಲ. ಅವರೆಲ್ಲರೂ ವೆಲ್ಡಿಂಗ್ ಮತ್ತು ವೈರಿಂಗ್ ಕೆಲಸ ಮಾಡುವ ಕಾರ್ಮಿಕರು, ಎಲ್ಲವೂ ಸುಟ್ಟುಹೋಗಿರುವ ಕಾರಣ, ಸದ್ಯಕ್ಕೆ ನಾವು ಬೆಂಕಿಯ ಮೂಲದ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಪೆಟ್ರೋಲಿಯಂ ಉತ್ಪನ್ನಗಳಿಂದ ತಯಾರಿಸಿದ ಬಹಳಷ್ಟು ವಸ್ತುಗಳು ಇವೆ. ಇವೆಲ್ಲವೂ ಸುಲಭವಾಗಿ ಬೆಂಕಿಗೆ ಆಹುತಿಯಾಗುತ್ತವೆ. ಡಿಪೋದಲ್ಲಿ ಅಗ್ನಿಶಾಮಕಗಳನ್ನು ಇಡಬೇಕಿತ್ತು. ಮಾಲಕರಿಗೆ ಅರಿವಿನ ಕೊರತೆಯಿದೆ” ಎಂದು ಉನ್ನತ ಅಗ್ನಿ ಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಗ್ನಿ ಅವಘಡದಲ್ಲಿ ಖಾಸಗಿ ಬಸ್ ಗಳು ಸುತ್ತು ಹೋಗಿದ್ದು ಕೋಟ್ಯಂತರ ರೂ. ನಷ್ಟ ಅಂದಾಜಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಡಿಸಿಎಂ, ಸಚಿವ ಭೇಟಿ
ಅಗ್ನಿ ಅವಘಡ ನಡೆದ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ರಾಮಲಿಂಗಾ ರೆಡ್ಡಿ ಅವರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಪರೀಕ್ಷೆ ಮುಗಿದ 3 ಗಂಟೆಗಳಲ್ಲಿ ವಿಟಿಯು ಫಲಿತಾಂಶ ಪ್ರಕಟ!
Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ
Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ
Subrahmanya ಪರಿಸರದಲ್ಲಿ ಧಾರಾಕಾರ ಮಳೆ: ಕೆಲವೆಡೆ ಹಾನಿ
Mangaluru ನಮಾಜ್ ಪ್ರಕರಣ: ಬಿ ರಿಪೋರ್ಟ್ ಸಲ್ಲಿಕೆ; ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ