ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ
Team Udayavani, Oct 6, 2019, 3:05 AM IST
ಮೂಡಿಗೆರೆ: ರಾಜ್ಯದಲ್ಲಿ ಅತಿವೃಷ್ಟಿಯಿಂದ ಅಂದಾಜು ಒಂದು ಲಕ್ಷ ಕೋಟಿ ರೂ.ನಷ್ಟವಾಗಿದೆ. ಇದೀಗ ಕೇಂದ್ರ ಸರಕಾರ 1,200 ಕೋಟಿ ರೂ.ಬಿಡುಗಡೆ ಮಾಡಿದ್ದು, ಬಕಾಸುರನ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ ನೀಡಿದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು.
ಕಳಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಐದು ಸಾವಿರ ಕೋಟಿ ರೂ.ಮಧ್ಯಂತರ ಪರಿಹಾರ ನೀಡಬೇಕು. ಅತಿವೃಷ್ಟಿ ಹಾನಿ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತೆಂದು ಘೋಷಿಸಬೇಕು. ವಿಧಾನಸಭೆ ಅಧಿವೇಶನ ಕರೆಯಬೇಕೆಂದು ಒತ್ತಾಯಿಸಿದ್ದೆ. ಅದ್ಯಾವುದನ್ನೂ ಮಾಡಲಿಲ್ಲ ಎಂದು ಟೀಕಿಸಿದರು. ರಾಜ್ಯದಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಮೂಡಿಗೆರೆ ತಾಲೂಕು ಒಂದರಲ್ಲೇ ಐದು ಸಾವಿರ ಕೋಟಿ ರೂ. ನಷ್ಟ ಸಂಭವಿಸಿದೆ ಎಂದರು.
ಕಳಸ ಸಮೀಪದ ಕಾರಗದ್ದೆ ಹಾಗೂ ಎಸ್.ಕೆ.ಮೇಗಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ತಕ್ಷಣ ತಲಾ 5ಲಕ್ಷ ರೂ. ಪರಿಹಾರ ನೀಡಬೇಕು.
-ಸಿದ್ದರಾಮಯ್ಯ, ಮಾಜಿ ಸಿಎಂ