ಕಾರು ಖರೀದಿ :ರಾಜ್ಯದಲ್ಲಿ ದಕ್ಷಿಣ ಕನ್ನಡ ನಂ. 2


Team Udayavani, Feb 4, 2021, 7:10 AM IST

Buy cars: Dakshina Kannada no. 2

ಮಂಗಳೂರು: ಪರೀಕ್ಷಾ ಫ‌ಲಿತಾಂಶಗಳ ಸಹಿತ ಹಲವು ಕ್ಷೇತ್ರಗಳಲ್ಲಿ ಕರಾವಳಿ ರಾಜ್ಯಕ್ಕೆ ಮುಂಚೂಣಿಯಲ್ಲಿದೆ. ಈ ಸಾಲಿಗೆ ನೂತನ ಸೇರ್ಪಡೆ ಹೊಸ ಕಾರುಗಳ ಖರೀದಿ ಸದ್ಯ ರಾಜ್ಯದಲ್ಲಿ ಬೆಂಗಳೂರು ನಗರ ಬಿಟ್ಟರೆ ಅತೀ ಹೆಚ್ಚು ಹೊಸ ಕಾರುಗಳ ಖರೀದಿ ಮತ್ತು ನೋಂದಣಿ ನಡೆಯುತ್ತಿ ರುವ ಜಿಲ್ಲೆ ದಕ್ಷಿಣ ಕನ್ನಡ. ಆ ಮೂಲಕ ಹೆಚ್ಚು ರಸ್ತೆ ತೆರಿಗೆ ಪಾವತಿಸಿ ಸರಕಾರಿ ಬೊಕ್ಕಸಕ್ಕೆ ಆದಾಯ ತಂದುಕೊಡುವಲ್ಲಿಯೂ ಜಿಲ್ಲೆಯ ಜನತೆ ಮುಂದಿದ್ದಾರೆ. ಸಾರಿಗೆ ಇಲಾಖೆಯ ನಾಲ್ಕು ವರ್ಷಗಳ ಅಂಕಿ ಅಂಶಗಳು ಇದನ್ನು ಶ್ರುತಪಡಿಸುತ್ತಿವೆ.

ಅಧಿಕ ಜನಸಾಂದ್ರತೆ ಮತ್ತು ಮೆಟ್ರೊ ನಗರ ಹೊಂದಿರುವ ಬೆಂಗಳೂರು ಜಿಲ್ಲೆ ಹೊಸ ಕಾರುಗಳ ಮಾರಾಟ ಮತ್ತು ನೋಂದಣಿಯಲ್ಲಿ ಮೊದಲ ಸ್ಥಾನದಲ್ಲಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಅಲ್ಲಿ 4,15,331 ಕಾರುಗಳು ನೋಂದಣಿ ಯಾಗಿವೆ. ಎರಡನೇ ಸ್ಥಾನದಲ್ಲಿರುವ ದಕ್ಷಿಣ ಕನ್ನಡದಲ್ಲಿ ಇದೇ ಅವಧಿಯಲ್ಲಿ ನೋಂದಣಿಯಾಗಿರುವ ಕಾರುಗಳು 44,998. ಬೆಂಗಳೂರಿಗೆ ಹೋಲಿಸಿದರೆ ದಕ್ಷಿಣ ಕನ್ನಡದ ವ್ಯಾಪ್ತಿ, ಜನಸಂಖ್ಯೆ ಕಡಿಮೆ. ಬೆಂಗಳೂರಿನಲ್ಲಿ 10 ಆರ್‌ಟಿಒ ಕಚೇರಿಗಳಿದ್ದರೆ ದ.ಕ.ದಲ್ಲಿರುವುದು ಕೇವಲ ಮೂರು. ಹೀಗಿದ್ದರೂ ಇಲ್ಲಿ ಅಧಿಕ ಕಾರು ಖರೀದಿ ಮತ್ತು ನೋಂದಣಿ ದಾಖಲಾಗಿರುವುದು ವಿಶೇಷ.

ಸಾರಿಗೆ ಇಲಾಖೆ ಕಾರು ಖರೀದಿಯಲ್ಲಿ ಮೈಸೂರು ಮೂರನೇ ಸ್ಥಾನದಲ್ಲಿದ್ದು, ಐದು ವರ್ಷಗಳಲ್ಲಿ 29,768 ಕಾರು ನೋಂದಣಿಯಾಗಿವೆ. ಉಡುಪಿ ಜಿಲ್ಲೆಯಲ್ಲಿ 20,650 ಕಾರುಗಳು ನೋಂದಣಿಗೊಂಡಿವೆ. ಬೆಂಗಳೂರು ಬಳಿಕ ಅತೀ ಹೆಚ್ಚು ಆರ್‌ಟಿಒ ಕಚೇರಿ ಹೊಂದಿರುವ ಬೆಳಗಾವಿ ಯಲ್ಲಿ ಇದೇ ಅವಧಿಯಲ್ಲಿ ನೋಂದಣಿ ಯಾಗಿರುವುದು 25,281 ಕಾರುಗಳು.

ಇದೆ ಹಲವು ಕಾರಣ
ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಕಾರು ಖರೀದಿಸುವಲ್ಲಿ ಮುಂದಿರುವುದಕ್ಕೆ ಹಲವಾರು ಕಾರಣಗಳಿವೆ. 2011ರ ಜನಗಣತಿಯಂತೆ ದಕ್ಷಿಣ ಕನ್ನಡದ ಜನ ಸಂಖ್ಯೆ 20.90 ಲಕ್ಷ ಇದ್ದು, ರಾಜ್ಯದಲ್ಲಿ 8ನೇ ಸ್ಥಾನದಲ್ಲಿದೆ.

ಕರಾವಳಿ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಹೆಚ್ಚು. ಬೆಂಗಳೂರು ಬಿಟ್ಟರೆ ಕರಾವಳಿಯಲ್ಲಿ ಕಾರು ನೋಂದಣಿ ಹೆಚ್ಚಾಗುತ್ತಿದೆ. ಇದರಿಂದ ಸಾರಿಗೆ ಇಲಾಖೆಗೆ ಹೆಚ್ಚಿನ ಸಂಪನ್ಮೂಲ ಸಂಗ್ರಹ ಆಗುತ್ತಿದೆ.

– ಶಿವರಾಜ್‌ ಬಿ. ಪಾಟೀಲ್‌ ಅಪರ ಸಾರಿಗೆ ಆಯುಕ್ತರು, ಬೆಂಗಳೂರು

ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.