ಸ್ವ ರಕ್ಷಣೆಗೆ ಗನ್ ಖರೀದಿಸ್ತಾರೆಸಂಸದೆ ಶೋಭಾ ಕರಂದ್ಲಾಜೆ
Team Udayavani, Dec 16, 2017, 11:28 AM IST
ಬೆಂಗಳೂರು: ಹಿಂದೂ ಕಾರ್ಯಕರ್ತರ ಹತ್ಯೆ ವಿರುದ್ಧ ತೀವ್ರ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ದುಷ್ಕರ್ಮಿಗಳು ಗುರಿಯಾಗಿಸಿ ಕೊಂಡಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ಅವರು ಸ್ವರಕ್ಷಣೆಗಾಗಿ ಗನ್ ಖರೀದಿಸಲು ನಿರ್ಧರಿಸಿದ್ದಾರೆ.
ಇತ್ತೀಚೆಗೆ ದಕ್ಷಿಣ ಕನ್ನಡದಲ್ಲಿ ನಡೆದ ಕೋಮು ವೈಷಮ್ಯ ಸಂದರ್ಭದಲ್ಲಿ ದುಷ್ಕರ್ಮಿಗಳು ಶೋಭಾ ಅವರಿಗೆ ಬೆದರಿಕೆ ಹಾಕಿದ್ದರು. ಈ ಮಧ್ಯೆ ಕಳೆದ ಕೆಲ ದಿನಗಳಿಂದ ಉತ್ತರ ಕನ್ನಡ ಭಾಗದಲ್ಲಿ ನಡೆಯುತ್ತಿರುವ ಹಿಂಸಾಚಾರದ ವೇಳೆ ಮತ್ತೆ ದುಷ್ಕರ್ಮಿಗಳ ಹಿಟ್ಲಿಸ್ಟ್ನಲ್ಲಿ ಅವರು ಮುಂಚೂಣಿಯಲ್ಲಿರುವ ಬಗ್ಗೆ ಗುಪ್ತಚರ ಇಲಾಖೆ ಅಧಿಕಾರಿಗಳಿಂದ ಸಂದೇಶ ಬಂದಿತ್ತು. ಈ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗೆ ಗನ್ ಖರೀದಿಸಲು ಮುಂದಾದ ಶೋಭಾ ಕರಂದ್ಲಾಜೆ ಅವರು ಪರವಾನಿಗೆಗಾಗಿ ವೈದ್ಯಕೀಯ ತಪಾಸಣೆಯನ್ನು ಪೂರ್ಣಗೊಳಿಸಿರುವುದರ ಜತೆಗೆ ಬೆಂಗಳೂರಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಎಲ್ಲ ದಾಖಲಾತಿಗಳನ್ನು ನೀಡಿದ್ದಾರೆ. ಪೊಲೀಸ್ ಇಲಾಖೆಯಿಂದ ಅನುಮತಿ ಸಿಕ್ಕಿದ ಕೂಡಲೇ ಅವರು ಗನ್ ರೀದಿಸಲಿದ್ದಾರೆ.