ಶಿರಾ, ಆರ್.ಆರ್. ನಗರ: ಬಿಜೆಪಿ – ಜೆಡಿಎಸ್ ನಡುವೆ ಒಳ ಒಪ್ಪಂದ ಸಾಧ್ಯತೆ
Team Udayavani, Oct 2, 2020, 6:02 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಶಿರಾ ನಿಮಗೆ.., ರಾಜರಾಜೇಶ್ವರಿ ನಗರ ನಮಗೆ! ಇಂಥದ್ದೊಂದು ಅಡ್ಜಸ್ಟ್ಮೆಂಟ್ ರಾಜಕಾರಣಕ್ಕೆ ಎರಡೂ ಕ್ಷೇತ್ರಗಳು ಸಾಕ್ಷಿಯಾಗಲಿವೆಯೇ? ಕೆಲವು ವಿದ್ಯಮಾನ ಗಳನ್ನು ಗಮನಿಸಿದರೆ ಇಂಥ ಸಾಧ್ಯತೆ ಇದೆ ಎಂದನಿಸುತ್ತಿದೆ.
ಮೂರೂ ಪಕ್ಷಗಳಿಗೂ ಉಪ ಚುನಾವಣೆ ಪ್ರತಿಷ್ಠೆಯಾಗಿದೆಯಾದರೂ “ಶತ್ರುವಿನ ಶತ್ರು ಮಿತ್ರ’ ಸಿದ್ಧಾಂತದಡಿ ಒಳ ಒಪ್ಪಂದದ ಸಾಧ್ಯತೆಗಳಿವೆ.
ಬಿಜೆಪಿ ನಾಯಕರು ಜೆಡಿಎಸ್ ಸಂಪರ್ಕದಲ್ಲಿದ್ದು, ಶಿರಾದಲ್ಲಿ ಜೆಡಿಎಸ್ಗೆ ಸಹಕರಿಸಿ ರಾಜರಾಜೇಶ್ವರಿ ನಗರದಲ್ಲಿ ಲಾಭ ಪಡೆಯುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಶಿರಾದಲ್ಲಿ ಬಿಜೆಪಿಗೆ ಅಷ್ಟಾಗಿ ನೆಲೆ ಇಲ್ಲ. ಅಲ್ಲಿ ಜೆಡಿಎಸ್ಗೆ ಸಹಕರಿಸಿದರೆ ಆರ್.ಆರ್. ನಗರದಲ್ಲಿ ಅವರ ಬೆಂಬಲ ಸಿಗಬಹುದಾ ಎಂಬ ಲೆಕ್ಕಾಚಾರದಲ್ಲಿ ಬಿಜೆಪಿ ನಾಯಕರಿದ್ದಂತಿದೆ.
ಡಿ. ಕೆ. ರವಿ ಪತ್ನಿ ಸ್ಪರ್ಧೆ?
ಜೆಡಿಎಸ್ನಲ್ಲಿರುವ ಹನುಮಂತ ರಾಯಪ್ಪ ಅವರು ರಾಜರಾಜೇಶ್ವರಿ ನಗರದಲ್ಲಿ ಪುತ್ರಿ ಕುಸುಮಾ ಡಿ.ಕೆ. ರವಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಪ್ರಯತ್ನಿಸುತ್ತಿದ್ದಾರೆ. ಜತೆಗೆ ಪುತ್ರಿಗೆ ಜೆಡಿಎಸ್ ಬೆಂಬಲ ಪಡೆಯುವ ಕಸರತ್ತು ನಡೆಸುತ್ತಿದ್ದಾರೆ ಎಂದೂ ಹೇಳ ಲಾಗುತ್ತಿದೆ. ಇದರ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಕಾರ್ಯತಂತ್ರವಿದೆ ಎನ್ನಲಾಗುತ್ತಿದೆ. ಆರ್.ಆರ್. ನಗರದಲ್ಲಿ ಮುನಿ ರತ್ನರನ್ನು ಸೋಲಿಸಲು ಡಿಕೆಶಿ ಸಹೋದರರು ಪಣ ತೊಟ್ಟಿದ್ದಾರೆ.
ಜೆಡಿಎಸ್ಗೆ ಶಿರಾ ಪ್ರತಿಷ್ಠೆ
ಶಿರಾವನ್ನು ಉಳಿಸಿಕೊಳ್ಳುವುದು ಜೆಡಿಎಸ್ಗೆ ಹಾಗೂ ಆರ್.ಆರ್. ನಗರದಲ್ಲಿ ಗೆಲ್ಲುವುದು ಬಿಜೆಪಿಗೆ ಪ್ರತಿಷ್ಠೆಯ ವಿಷಯವಾಗಿದೆ. ಬಿಜೆಪಿ ಹಾಗೂ ಜೆಡಿಎಸ್ನ ಏಕೈಕ ಗುರಿ ಕಾಂಗ್ರೆಸ್ ಮಣಿಸುವುದು. ಬಿಎಸ್ವೈ- ಎಚ್ಡಿಕೆ ಪದೇಪದೆ ಭೇಟಿ ನಡೆಸಿದ್ದರ ಮರ್ಮವೂ ಇದೇ ಎನ್ನಲಾಗುತ್ತಿದೆ.
ಆರ್. ಆರ್. ನಗರ: ಕಾಂಗ್ರೆಸ್ನಿಂದ ನಾಲ್ವರ ಹೆಸರು
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ಗಾಗಿ ಮಾಜಿ ಶಾಸಕ ಬಾಲಕೃಷ್ಣ, ರûಾ ರಾಮಯ್ಯ ಹಾಗೂ ಪ್ರಿಯಾ ಕೃಷ್ಣ ಅವರ ಹೆಸರುಗಳು ಪ್ರಸ್ತಾವವಾಗಿವೆ. ಈ ನಡುವೆ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ ಕುಸುಮಾ ಆದಿಚುಂಚನಗಿರಿ ಸ್ವಾಮೀಜಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಕೊಂಡಿದ್ದು, ಅವರೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ. ಗುರುವಾರ ಕ್ಷೇತ್ರದ ಮುಖಂಡರ ಜತೆ ಚರ್ಚಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಚುನಾವಣ ಉಸ್ತುವಾರಿ ಡಿ.ಕೆ. ಸುರೇಶ್ ಅವರು, ನಾಲ್ವರ ಹೆಸರು ಸಭೆಯಲ್ಲಿ ಪ್ರಸ್ತಾವವಾಗಿದೆ. ಯಾರೇ ಸ್ಪರ್ಧಿಸಿದರೂ ಡಿ.ಕೆ.ಸುರೇಶ್ ಅವರೇ ಕಣದಲ್ಲಿದ್ದಾರೆ ಎಂದು ಭಾವಿಸಿ ಪಕ್ಷಕ್ಕಾಗಿ ದುಡಿಯಬೇಕೆಂದು ಕಾರ್ಯ ಕರ್ತರಿಗೆ ತಿಳಿಸಲಾಗಿದೆ ಎಂದರು.
ಎಸ್. ಲಕ್ಷ್ಮೀನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್