ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ


Team Udayavani, Oct 24, 2021, 2:23 PM IST

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ

ವಿಜಯಪುರ: ಕುರಿಯಿಂದ ಉಣ್ಣೆ ತೆಗೆದು, ನೇಯ್ದು ಕಂಬಳಿ ಮಾಡಲಾಗುತ್ತದೆ. ಈ ಪರಿಶ್ರಮದ ಹಿಂದೆ ಹಿಂದೆ ಹಾಲುಮತ ಸಮುದಾಯದ ಶ್ರಮಗೌರವ ಅಡಗಿದೆ. ಹೀಗಾಗಿ ಕಂಬಳಿ ಹೊದ್ದುಕೊಳ್ಳಲೂ ಯೋಗ್ಯತೆ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರೋಕ್ಷವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಭಾನುವಾರ ಸಿಂದಗಿ ವಿಧಾನಸಭೆ ಉಪ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಕೊಕಟನೂರು ಗ್ರಾಮದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಉಣ್ಣೆ ಕಂಬಳ ಹೊದ್ದುಕೊಂಡ ಎಲ್ಲರಿಗೂ ಅದರ ಯೋಗ್ಯತೆ ಬರುವುದಿಲ್ಲ. ಹಾಲುಮತದ ಸಮಾಜಕ್ಕೆ ಸರಿಯಾದ ಅಭಿವೃದ್ಧಿ ಮಾಡಿದವರಿಗೆ ಮಾತ್ರ ಆ ಯೋಗ್ಯತೆ ಪ್ರಾಪ್ತವಾಗುತ್ತದೆ ಎಂದು ಕುಟುಕಿದರು.

ದಾಸಶ್ರೇಷ್ಠ ಕನಕದಾಸರ ಜನ್ಮಸ್ಥಳ ಬಾಡ ಹಾಗೂ ಅವರ ಕರ್ಮಭೂಮಿ ಕಾಗಿನೆಲೆ ಕ್ಷೇತ್ರಗಳ ಅಭಿವೃದ್ಧಿಗೆ ಕಾಂಗ್ರೆಸ್ ಗಮನವನ್ನೇ ಹರಿಸಲಿಲ್ಲ. ಆದರೆ ನಮ್ಮ ಬಿ.ಜೆ.ಪಿ. ಸರಕಾರದ ಅಧಿಕಾರ ಅವಧಿಯಲ್ಲೇ ಕನಕದಾಸರ ಈ ಕ್ಷೇತ್ರಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಯಿತು ಎಂದರು.

ಎಲ್ಲಿದೆ ಸಾಮಾಜಿಕ ನ್ಯಾಯ: ಸಾಮಾಜಿಕ ನ್ಯಾಯದ ಹರಿಕಾರರೆಂದು ಬಿಂಬಿಸಿಕೊಳ್ಳುವ ಕಾಂಗ್ರೆಸ್ ಪಕ್ಷ ಯಾರಿಗೂ ಸಾಮಾಜಿಕ ನ್ಯಾಯ ಕಲ್ಪಿಸಿಲ್ಲ. ಸಂವಿಧಾನದ ಮೂಲಕ ಸಾಮಾಜಿಕ‌ ನ್ಯಾಯ ಕಲ್ಪಿಸಿದ ಡಾ.ಅಂಬೇಡ್ಕರ್ ಗೆ ದೇಶ ಸದಾ ಋಣಿಯಾಗಿರಬೇಕು ಎಂದರು.

ಆದರೆ ಇಂಥ ಧೀಮಂತ ನಾಯಕ ಡಾ.ಅಂಬೇಡ್ಕರ್ ವಿರುದ್ಧ ಚುನಾವಣೆಯಲ್ಲಿ ಶ್ರೀಮಂತರನ್ನು  ಸ್ಪರ್ಧೆಗಿಳಿಸಿ ಸೋಲಿಸಿದರು ಎಂದರು.

ಹಾಲುಮತ ಸಮಾಜ ಇಂದಿಗೂ ಅದೇ ಸ್ಥಿತಿಯಲ್ಲಿದೆ. ಸಣ್ಣ ಸಣ್ಣ ಕಸುಬುಗಳನ್ನು ಮಾಡುವವರು ಸಹ ಅದೇ ಸ್ಥಿತಿಯಲ್ಲಿದ್ದಾರೆ. ಅಲ್ಪಸಂಖ್ಯಾತರಿಗೆ ಈ ಹಿಂದಿನ ಸರ್ಕಾರಗಳು ಕೇವಲ ಚುನಾವಣೆಗೆ ಬಳಸಿಕೊಂಡರು ಅವರನ್ನು ಅಂಧಕಾರದಲ್ಲಿ ಇಟ್ಟಿದ್ದಾರೆ ಎಂದು ತಿಳಿಸಿದ ಅವರು ಅಲ್ಪಸಂಖ್ಯಾತರು ಮತ್ತು ಹಿಂದುಳಿದವರ ಮಕ್ಕಳು ಮುಂದಕ್ಕೆ ಬಂದು ಅಭಿವೃದ್ಧಿ ಹೊಂದಬೇಕಾದರೆ ಬಿಜೆಪಿ ಯಿಂದ ಮಾತ್ರ ಸಾಧ್ಯ. ಹೀಗಾಗಿ ಬಿಜೆಪಿ ಅಭಿವೃದ್ಧಿಗೆ ರಮೇಶ ಭೂಸನೂರ ಅವರನ್ನು ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ ಎಂದರು

ಅಭಿವೃದ್ಧಿಗೆ ಸರಕಾರದ ಆದ್ಯತೆ :

ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ನೀರಾವರಿ, ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ವಸತಿ ಸೌಲಭ್ಯ ಸೇರಿದಂತೆ ಈ ಭಾಗದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ವಿವರಿಸಿದರು.

ಇದಲ್ಲದೇ ನಮ್ಮ ಸರ್ಕಾರ ಪ್ರಸಕ್ತ ವರ್ಷ ಹೆಚ್ಚುವರಿಯಾಗಿ 5 ಲಕ್ಷ ಮನೆಗಳನ್ನು ನಿರ್ಮಿಸಲು ಯೋಜಿಸಿದೆ. ಇದರಲ್ಲಿ ಸಿಂದಗಿ ಕ್ಷೇತ್ರಕ್ಕೆ 5 ಸಾವಿರ ಮನೆ ನೀಡಲಾಗುತ್ತದೆ. ಅಮೃತ  ಯೋಜನೆ ಅಡಿಯಲ್ಲಿ 2 ಸಾವಿರ ಮನೆಗಳನ್ನು ಮಂಜೂರು ಮಾಡಲಾಗುತ್ತದೆ. ಹೀಗೆ  1 ವರ್ಷದಲ್ಲಿ ಸಿಂದಗಿ ಕ್ಷೇತ್ರದಲ್ಲಿ  7 ಸಾವಿರ ಮನೆ  ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.

ಸಿಂದಗಿ ಭಾಗದಲ್ಲಿ ಚಿಮ್ಮಲಗಿ ಏತ ನೀರಾವರಿ ಅಡಿ ಬರುವ ಕೋರವಾರ ಉಪ ಕಾಲುವೆ ಟೆಂಡರ್ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ.  ಇದರಿಂದ 80 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿ ಸಲಾಗುತ್ತದೆ. ಇಂಡಿ ಮತ್ತು ಗುತ್ತಿ ಬಸವಣ್ಣ ಯೋಜನೆಗಳ ಪುನಃಶ್ಚೇತನ ಮಾಡಲಾಗುತ್ತಿದೆ ಎಂದು ಕೇಳಿದರು.

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.