ಬಿರುಸುಗೊಂಡ ಉಪ ಚುನಾವಣೆ ಕಣ
Team Udayavani, Mar 21, 2021, 7:00 AM IST
ಬೆಂಗಳೂರು: ಬೆಳಗಾವಿ ಲೋಕ ಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನ ಸಭೆ ಕ್ಷೇತ್ರಗಳ ಉಪ ಚುನಾವಣೆ ಸಂಬಂಧ 3 ಪಕ್ಷಗಳಲ್ಲಿ ಚಟುವಟಿಕೆಗಳು ತೀವ್ರಗೊಂಡಿವೆ.
ಶನಿವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದು ಮೂರೂ ಕ್ಷೇತ್ರಗಳಿಗೆ ಸಂಭಾವ್ಯರ ಬಗ್ಗೆ ಚರ್ಚಿಸಿದ್ದು, ಕೇಂದ್ರ ಚುನಾವಣ ಸಮಿತಿಗೆ ಹೆಸರು ಶಿಫಾರಸು ಮಾಡುವ ಅಧಿಕಾರ ರಾಜ್ಯಾಧ್ಯಕ್ಷರಿಗೆ ಕೊಡಲಾಗಿದೆ. ಈ ಮಧ್ಯೆ, ಬಳ್ಳಾರಿ ಜಿಲ್ಲೆಯ ತೋರಣಗಲ್ಲು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ, ರವಿವಾರವೇ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಲಿದೆ ಎಂದಿದ್ದಾರೆ.
ಮಸ್ಕಿ ಮತ್ತು ಬಸವಕಲ್ಯಾಣ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್, ಚುನಾವಣ ಕಾರ್ಯತಂತ್ರ ರೂಪಿಸಲು ಶನಿವಾರ ಹಿರಿಯ ನಾಯಕರ ಸಭೆ ನಡೆಸಿತು. ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರೇ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ.
ಬಸವಕಲ್ಯಾಣ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿ ರುವ ಜೆಡಿಎಸ್, ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧೆ ಬಗ್ಗೆ ಗೊಂದಲದಲ್ಲಿದೆ. ಮಸ್ಕಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಮರ್ಥ ಅಭ್ಯರ್ಥಿಗಾಗಿ ಶೋಧ ನಡೆಸುತ್ತಿದೆ.
ಮಸ್ಕಿ ಮತ್ತು ಬಸವಕಲ್ಯಾಣಕ್ಕೆ ಅಭ್ಯರ್ಥಿಗಳನ್ನು ಘೋಷಿಸಿ ದ್ದೇವೆ. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಸತೀಶ್ ಜಾರಕಿ ಹೊಳಿ ಸ್ಪರ್ಧಿಸಿದರೆ ಗೆಲ್ಲುತ್ತೇವೆ. ಹೀಗಾಗಿ ಅವರ ಒಂದೇ ಹೆಸರನ್ನು ಹೈಕಮಾಂಡ್ಗೆ ಶಿಫಾರಸು ಮಾಡಲು ತೀರ್ಮಾನಿಸಿದ್ದೇವೆ. –ಸಿದ್ದರಾಮಯ್ಯ, ವಿಪಕ್ಷ ನಾಯಕ
ಕೋರ್ ಕಮಿಟಿಯಲ್ಲಿ ಉಪ ಚುನಾವಣೆ ಅಭ್ಯರ್ಥಿಗಳ ಬಗ್ಗೆ ಚರ್ಚೆ ಆಗಿದೆ. ಕೇಂದ್ರ ಚುನಾವಣ ಸಮಿತಿಗೆ ರಾಜ್ಯಾಧ್ಯಕ್ಷರು, ಅಭ್ಯರ್ಥಿಗಳ ಹೆಸರನ್ನು ಕಳುಹಿಸಲಿದ್ದಾರೆ. ಅಂತಿಮವಾಗಿ ಚುನಾವಣ ಸಮಿತಿ ಹೆಸರು ಪ್ರಕಟ ಮಾಡುತ್ತದೆ. –ಅರುಣ್ ಕುಮಾರ್, ರಾಜ್ಯ ಬಿಜೆಪಿ ಉಸ್ತುವಾರಿ
ಬೆಳಗಾವಿ ಟಿಕೆಟ್ ಬಗ್ಗೆ ಚರ್ಚೆಯಾಗಿದೆ. ನನ್ನ ಜತೆ ಇನ್ನಿಬ್ಬರ ಹೆಸರು ರವಾನಿಸಲಾಗಿದೆ. ನಾನೂ ಕೂಡ ಒಮ್ಮೆ ಹೈಕಮಾಂಡ್ ಭೇಟಿ ಮಾಡುತ್ತೇನೆ. ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇನೆ. ಪ್ರಕಾಶ್ ಹುಕ್ಕೇರಿ ಹೆಸರನ್ನು ಕೂಡ ದಿಲ್ಲಿಗೆ ಕಳುಹಿಸಲಾಗಿದೆ. – ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಕಾರ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ