ಉಪಚುನಾವಣೆ : ಲೋಕಸಭೆಗೆ ಜೆಡಿಎಸ್‌ ಡೌಟು: ವಿಧಾನಸಭೆ ಸ್ಪರ್ಧೆಗೆ ರೆಡಿ?


Team Udayavani, Mar 17, 2021, 11:43 AM IST

ಉಪಚುನಾವಣೆ : ಲೋಕಸಭೆಗೆ ಜೆಡಿಎಸ್‌ ಡೌಟು: ವಿಧಾನಸಭೆ ಸ್ಪರ್ಧೆಗೆ ರೆಡಿ?

ಬೆಂಗಳೂರು: ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸ್ಪರ್ಧಿ ಸಲು ಚಿಂತಿಸಿರುವ ಜೆಡಿಎಸ್‌ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ. ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗೆ ಅಲ್ಪಸಂಖ್ಯಾತರ ಸಮುದಾಯದವರಿಗೆ ಟಿಕೆಟ್‌ ನೀಡುವ ಬಗ್ಗೆ ಗಂಭೀರ ಚಿಂತನೆ ನಡೆಸಿರುವ ಜೆಡಿಎಸ್‌, ಮಸ್ಕಿ ಕ್ಷೇತ್ರದ ಉಪಚುನಾ ವಣೆಗೆ ಅಭ್ಯರ್ಥಿಯನ್ನು ಕಣ ಕ್ಕಳಿಸುವ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಕೈಗೊಂಡಂತಿಲ್ಲ.

ಒಟ್ಟಾರೆ ಜೆಡಿಎಸ್‌ ಉಪಚುನಾವಣೆಯಲ್ಲಿ ನಾಮ್‌ ಕೇವಾಸ್ತೆಗೆ ಎಂಬಂತೆ ಸ್ಪರ್ಧಿ ಸುವ ಚಿಂತನೆ ಯಲ್ಲಿದ್ದು, 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಿದ್ಧತೆಗೆ ಹೆಚ್ಚಿನ ಆದ್ಯತೆ ನೀಡುವತ್ತ ಗಮನ ಹರಿಸಿದೆ. ಮಸ್ಕಿ ಹಾಗೂ ಬಸವಕಲ್ಯಾಣ ಕ್ಷೇತ್ರದ ಉಪಚುನಾ ವಣೆ ನಿರೀಕ್ಷಿತವಾಗಿದ್ದರೂ ಜೆಡಿಎಸ್‌ನಲ್ಲಿ ಈವರೆಗೆ ಹೆಚ್ಚಿನ ಪೂರ್ವ ಸಿದ್ಧತೆ ನಡೆಸಿಲ್ಲ. ಉಭಯ ಕ್ಷೇತ್ರಗಳಲ್ಲಿ ಪಕ್ಷದ ಕೇಡರ್‌ ವ್ಯವಸ್ಥೆಯಿಲ್ಲದ ಕಾರಣ ತಳಮಟ್ಟದಿಂದಲೇ ಪಕ್ಷ ಸಂಘಟಿಸಿ ಸ್ಪರ್ಧೆಯೊಡ್ಡಬೇಕಿದೆ. ಉಪಚುನಾವಣೆ ಘೋಷಣೆಯಾಗಿರುವ ಈ ಹೊತ್ತಿನಲ್ಲಿ ಪಕ್ಷ ಸಂಘಟಿಸಿ ಪ್ರಬಲ ಪೈಪೋಟಿ ನೀಡುವುದು ಕಷ್ಟಸಾಧ್ಯವಾಗಿ ರುವ ಹಿನ್ನೆಲೆಯಲ್ಲಿ ಸ್ಪರ್ಧೆ ಬಗ್ಗೆ ಹೆಚ್ಚಿನ ಒತ್ತು ನೀಡಿದಂತಿಲ್ಲ.

ಲೋಕಸಭಾ ಉಪಚುನಾವಣೆಗೆ ಸ್ಪರ್ಧೆ ಇಲ್ಲ!: ಬೆಳಗಾವಿ ಲೋಕಸಭಾ ಉಪಚುನಾ ವಣೆ ಘೋಷಣೆಯಾಗಿದ್ದರೂ ಜೆಡಿಎಸ್‌ ಸ್ಪರ್ಧೆ ಸಾಧ್ಯತೆ ಕ್ಷೀಣವೆನಿಸಿದೆ. ಈ ಬಗ್ಗೆ ಪಕ್ಷದ ಮಟ್ಟದಲ್ಲಿ ಉಪಚುನಾವಣೆ ಬಗ್ಗೆ ಯಾವುದೇ ರೀತಿ ಚರ್ಚೆ ನಡೆಯದ ಕಾರಣ ಉಪಚುನಾವಣೆಗೆ ಸಿದ್ಧತೆ ಪ್ರಕ್ರಿಯೆಗಳು ನಡೆದಿಲ್ಲ. ಅಲ್ಲದೆ ಬಿಜೆಪಿ, ಕಾಂಗ್ರೆಸ್‌ ನಡುವೆ ಸದ್ಯದ ಸಂದರ್ಭದಲ್ಲಿ ಸ್ಪರ್ಧೆಯೊಡ್ಡುವ ರೀತಿಯಲ್ಲಿ ಉಪಚುನಾವಣೆಗೆ ಸಿದ್ಧತೆ ನಡೆಯದ ಕಾರಣ ಸ್ಪರ್ಧೆಯಿಂದ ದೂರ ಉಳಿಯುವ ಸಾಧ್ಯತೆ ಹೆಚ್ಚು ಎನ್ನಲಾಗಿದೆ.

ಬಸವಕಲ್ಯಾಣಕ್ಕೆ ಅಲ್ಪಸಂಖ್ಯಾತ ಅಭ್ಯರ್ಥಿ?: ಕೆಲ ವರ್ಷಗಳಿಂದ ಅಲ್ಪಸಂಖ್ಯಾತ ಸಮು ದಾಯ ಪಕ್ಷ ದಿಂದ ದೂರವಾಗು ತ್ತಿರುವ ಸೂಖ‍ಕ್ಷ್ಮವನ್ನು ಗಮನಿಸಿರುವ ಪಕ್ಷದ ನಾಯಕರು ಅಲ್ಪಸಂಖ್ಯಾತ ಸಮುದಾಯವನ್ನು ವಿಶ್ವಾಸ ದಲ್ಲಿ ಟ್ಟುಕೊಳ್ಳುವ ಕಾರ್ಯಕ್ಕೆ ಒತ್ತು ನೀಡಿದ್ದಾರೆ. ಇದೇ ಪ್ರಯತ್ನದ ಭಾಗವಾಗಿ ಕಾಂಗ್ರೆಸ್‌ನ ವಿಧಾನ ಪರಿಷತ್‌ ಸದಸ್ಯ ಸಿ.ಎಂ. ಇಬ್ರಾಹಿಂ ಅವರನ್ನು ಪಕ್ಷಕ್ಕೆ ಕರೆತಂದು ಪ್ರಮುಖ ಜವಾಬ್ದಾರಿ ವಹಿಸಿ ಸಂಘಟನೆ ಕಾರ್ಯಕ್ಕೆ ನಿಯೋಜಿಸುವ ನಿಟ್ಟಿನಲ್ಲಿಯೂ ಪ್ರಯತ್ನ ನಡೆದಿದೆ. ಇದೀಗ ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗೆ ಅಲ್ಪಸಂಖ್ಯಾತ ಸಮು ದಾಯ ದವರನ್ನೇ ಅಭ್ಯರ್ಥಿ ಮಾಡುವ ಮೂಲಕ ಆ ಸಮುದಾಯದ ವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳುವ ಬಗ್ಗೆಯೂ ಪಕ್ಷದಲ್ಲಿ ಗಂಭೀರ ಚರ್ಚೆ ನಡೆದಿದೆ ಎಂದು ಮೂಲಗಳು ಹೇಳಿವೆ.

ಮಸ್ಕಿ ಕ್ಷೇತ್ರದಲ್ಲಿ ಪಕ್ಷಕ್ಕೆ ಉತ್ತಮ ನೆಲೆಯಿಲ್ಲದ ಕಾರಣ ಸ್ಪರ್ಧೆ ಸೂಕ್ತವೇ ಎಂಬ ಬಗ್ಗೆಯೂ ಚರ್ಚೆ ನಡೆದಿದೆ. 2023ರ ವಿಧಾ ನ ಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರ ಹಿಡಿಯಲಿದೆ ಎಂದು ನಾಯಕರು ಹೇಳುತ್ತಿದ್ದರೂ ಉಪಚುನಾವಣೆಗೆ ಹೆಚ್ಚಿನ ಉತ್ಸಾಹ ತೋರದಿರುವುದು ಚರ್ಚೆಗೆ ಗ್ರಾಸವಾಗಿದೆ. ಅಂತಿಮವಾಗಿ ವರಿಷ್ಠರಾದ ಎಚ್‌.ಡಿ.ದೇವೇ ಗೌಡ, ಮಾಜಿ ಸಿಎಂ ಕುಮಾರಸ್ವಾಮಿಯವರ ನಿರ್ಧಾರದ ಮೇಲೆ ಎಲ್ಲವೂ ಅವಲಂಬಿ ತವಾಗಿದ್ದು, ಕಾದು ನೋಡಬೇಕಿದೆ.

 

– ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.