ಉಪ ಚುನಾವಣೆ: ಬಿಸಿಲಲ್ಲೂ ಬಿರುಸಿನ ಮತದಾನ ;ಘರ್ಷಣೆ,ಲಾಠಿ ಪ್ರಹಾರ


Team Udayavani, Apr 9, 2017, 11:37 AM IST

4.jpg

ನಂಜನಗೂಡು/ಗುಂಡ್ಲುಪೇಟೆ: ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಗುಂಡ್ಲುಪೇಟೆ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರಗಳಿಗೆ ಭಾನುವಾರ ಉಪ ಚುನಾವಣೆ ನಡೆಯುತ್ತಿದ್ದು, ಬಿರುಸಿನ 
ಮತದಾನ ನಡೆಯುತ್ತಿದ್ದು, 2 ಕ್ಷೇತ್ರಗಳಲ್ಲಿ ಮಧ್ಯಾಹ್ನ 3 ಗಂಟೆಯ ವೇಳೆಗೆ 60 ಶೇಕಡಾ ಮತದಾನವಾಗಿರುವ ಬಗ್ಗೆ ವರದಿಯಾಗಿದೆ. 

ಗುಂಡ್ಲುಪೇಟೆಯಲ್ಲಿ ಪತಿ ಮಹದೇವ್‌ ಪ್ರಸಾದ್‌ ಅವರ ಸಮಾಧಿಗೆ ಕುಟುಂಬ ಸದಸ್ಯರೊಂದಿಗೆ ಪೂಜೆ ಸಲ್ಲಿಸಿದ ಬಳಿಕಕಾಂಗ್ರೆಸ್‌ ಅಭ್ಯರ್ಥಿ ಗೀತಾ ಅವರು ಮತ ಚಲಾಯಿಸಿದರು. 

ನಂಜನಗೂಡಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್‌ ಪ್ರಸಾದ್‌ ಮತ ಚಲಾಯಿಸಿದ್ದು, ಕಳಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮತ ಚಲಾಯಿಸಿದ್ದಾರೆ. 

ಬಿಜೆಪಿ -ಕಾಂಗ್ರೆಸ್‌ ಘರ್ಷಣೆ 
ಗುಂಡ್ಲುಪೇಟೆಯ ಬೇಳೂರಿನ ಮತಗಟ್ಟೆಯ ಬಳಿ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆದು ಕೈ-ಕೈ ಮಿಸಲಾಯಿಸಿದ ಬಗ್ಗೆ ವರದಿಯಾಗಿದೆ. 

ಗುಂಡ್ಲುಪೇಟೆಯ ಸರ್ಕಾರಿ ಶಾಲೆಯ ಬಳಿ ಮತಗಟ್ಟೆಯಲ್ಲಿ ಕಾಂಗ್ರೆಸ್‌ -ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡಾಗ ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ನಂಜನಗೂಡಿನ ಮಹದೇವನಗರದಲ್ಲಿ ಮತದಾರರರು ಮತದಾನ ಬಹಿಷ್ಕರಿಸಿದ್ದಾರೆ.

ಗುಂಡ್ಲುಪೇಟೆಯ ಕೆಲವೆಡೆ ಮತ ಯಂತ್ರಗಳು ಕೈಕೊಟ್ಟು  ಮತದಾನ ವಿಳಂಳಬವಾಗಿದೆ. 

ಮಾಜಿ ಸಚಿವ ಎಚ್‌.ಎಸ್‌. ಮಹದೇವಪ್ರಸಾದ್‌ ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿರುವ ಸ್ಥಾನಕ್ಕೆ ಗುಂಡ್ಲುಪೇಟೆಯಲ್ಲಿ ಮತದಾನ ನಡೆಯುತ್ತಿದ್ದರೆ, ಮಾಜಿ ಸಚಿವ ಶ್ರೀನಿವಾಸ ಪ್ರಸಾದ್‌ ಅವರು ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದರಿಂದ ನಂಜನಗೂಡಿನಲ್ಲಿ ಚುನಾವಣೆ ನಡೆಯುತ್ತಿದೆ. ಉಭಯ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ನೇರ ಸ್ಪರ್ಧೆ ಇದೆ.

ಬೆಳಗ್ಗೆ 7 ರಿಂದ ಆರಂಭವಾದ ಮತದಾನ ಸಂಜೆ 5 ಗಂಟೆವರೆಗೆ  ನಡೆಯಲಿದೆ. ಈ ಮಧ್ಯೆ, ಪಂಚರಾಜ್ಯಗಳ ಚುನಾವಣೆ ವೇಳೆ ಮತಯಂತ್ರಗಳ ಬಗ್ಗೆ ಸಾಕಷ್ಟು ದೂರುಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಮತದಾನ ಆರಂಭಕ್ಕೂ ಮುನ್ನ, ಬೆಳಗ್ಗೆ 6 ಗಂಟೆಗೆ ಕಣದಲ್ಲಿರುವ ಅಭ್ಯರ್ಥಿಗಳು ಅಥವಾ ಅವರ ಪರವಾರ ಏಜೆಂಟರ ಸಮ್ಮುಖದಲ್ಲಿ ಅಣಕು ಮತದಾನ ನಡೆಸಲಾಯಿತು. ಏ.13ರಂದು ಮತಗಳ ಎಣಿಕೆ ನಡೆಯಲಿದ್ದು ಗೀತಾ ಮಹದೇವಪ್ರಸಾದ್‌, ಶ್ರೀನಿವಾಸ ಪ್ರಸಾದ್‌ ಹಾಗೂ ಕಳಲೆ ಕೇಶವಮೂರ್ತಿ ಮತತು ನಿರಂಜನ್‌ ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. 

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿವಿ ಪ್ಯಾಟ್‌ ಇದ್ದು, ಮತದಾರ ತಾನು ಯಾರಿಗೆ ಮತ ಚಲಾಯಿಸಿದ್ದೇನೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬಹುದಾಗಿದೆ. ಈ ಮಧ್ಯೆ, ಶಾಂತಿಯುತವಾಗಿ ಮತದಾನ ನಡೆಸಲು ಜಿಲ್ಲಾಡಳಿತಗಳು ಸಕಲ ಸಿದ್ದತೆ ನಡೆಸಿದ್ದು, ಎಲ್ಲೆಡೆ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ. 

ಕ್ಷೇತ್ರ ವ್ಯಾಪ್ತಿಯಲ್ಲಿ ಭಾನುವಾರ ನಡೆಯುವ ಎಲ್ಲಾ ಸಂತೆ, ಜಾತ್ರೆ, ಉತ್ಸವ ಇತ್ಯಾದಿಗಳನ್ನು ಮುಂದೂಡಲಾಗಿದೆ. ಉಭಯ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ಕಾರ್ಖಾನೆಗಳು ಹಾಗೂ ಇತರ ಖಾಸಗಿ ಸಂಸ್ಥೆಗಳಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.