ರಮೇಶ ಜಾರಕಿಹೊಳಿ ಸರಕಾರಕ್ಕೆ ಮುಜುಗರ ತರುವ ಕೆಲಸ ಮಾಡುತ್ತಿಲ್ಲ : ಭೈರತಿ ಬಸವರಾಜ್
Team Udayavani, Jun 30, 2021, 1:03 PM IST
ಹುಬ್ಬಳ್ಳಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಸರಕಾರಕ್ಕೆ ಮುಜುಗರ ತರುವ ಕೆಲಸ ಮಾಡುತ್ತಿಲ್ಲ. ಬೇಸರ ಹಾಗೂ ಉದ್ವೇಗದಿಂದ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದರು. ಅವರ ಸಹೋದರರೆಲ್ಲಾ ಸಮಾಧಾನ ಮಾಡಿದ್ದಾರೆ. ಯಾವುದೋ ಒಂದು ಪ್ರಕರಣವಿದೆ. ಅದು ಇತ್ಯರ್ಥವಾದ ನಂತರ ಸಚಿವರಾಗುತ್ತಾರೆ. ನಾವೆಲ್ಲರೂ ಅವರೊಂದಿಗೆ ಇದ್ದೇವೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಅವರ ಜೊತೆಗೆ ಇದ್ದೇವೆ. ಇಂದು ನಿನ್ನೆಯ ಸ್ನೇಹವಲ್ಲ. ಯುವ ಕಾಂಗ್ರೆಸ್ ಹಂತದಿಂದಲೇ ಸ್ನೇಹಿತರಾಗಿದ್ದೇವೆ. ಸಣ್ಣಪುಟ್ಟ ಅಹಿತಕರ ಘಟನೆಗಳು ನಡೆದಿವೆ ಎಂದರು.
ಇದನ್ನೂ ಓದಿ: ಕಾಂಗ್ರೆಸ್ ಗೆ ಬಿಜೆಪಿ ಆಡಳಿತ ಟೀಕಿಸುವ ನೈತಿಕತೆಯೇ ಉಳಿದಿಲ್ಲ: ಬಿ.ವೈ. ವಿಜಯೇಂದ್ರ
ಹೀಗಾಗಿ ಸ್ವಲ್ಪ ಸಮಸ್ಯೆಯಾಗಿದೆ. ಪ್ರಕರಣ ಎಸ್ಐಟಿ ಮುಂದೆ ಇದೆ. ಎಸ್ಐಟಿ ಏನು ತೀರ್ಮಾನ ಮಾಡುತ್ತಿದ್ದೆ ನೋಡಬೇಕು. ಆದರೆ ಶೀಘ್ರದಲ್ಲಿ ಪ್ರಕರಣ ಮುಗಿಯಲಿದೆ ಎನ್ನುವ ಭರವಸೆಯಿದೆ. ನಂತರ ಸಚಿವ ಸಂಪುಟ ಸೇರ್ಪಡೆಗೊಳ್ಳಲಿದ್ದಾರೆ ಎಂದ ಅವರು, ಮೂವರು ಬಿಜೆಪಿ ನಾಯಕರು ಬೆನ್ನಿಗೆ ಚೂರಿ ಹಾಕಿದ್ದಾರೆ ಎನ್ನುವ ರಮೇಶ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಚಿವ ಬಸವರಾಜ, ಈ ಕುರಿತು ಅವರನ್ನೇ ಕೇಳಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್