ನವೆಂಬರ್ ವೇಳೆಗೆ ಜೆಡಿಎಸ್ಗೆ ಸಿ.ಎಂ.ಇಬ್ರಾಹಿಂ ?
ಕೈ ಕೊಟ್ಟು ತೆನೆ ಹೊರುತ್ತಾರಾ ಕೇಂದ್ರದ ಮಾಜಿ ಸಚಿವ
Team Udayavani, Sep 23, 2021, 9:00 PM IST
ಬೆಂಗಳೂರು: ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ನವೆಂಬರ್ ವೇಳೆಗೆ ಜೆಡಿಎಸ್ ಸೇರ್ಪಡೆಯಾಗಬಹುದು ಎಂದು ಹೇಳಲಾಗಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಸಿ.ಎಂ.ಇಬ್ರಾಹಿಂ ಅವರಿಗೆ ನೀಡಿ ಪಕ್ಷ ಸಂಘಟನೆಗೆ ಒತ್ತು ನೀಡಲು ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ಗೆ ತಿರುಗೇಟು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತೀಚೆಗೆ ಬಿಡದಿ ತೋಟದ ಮನೆಗೆ ಹೋಗಿದ್ದ ಸಿ.ಎಂ.ಇಬ್ರಾಹಿಂ ಜತೆ ಮುಂದಿನ ಕಾರ್ಯತಂತ್ರದ ಬಗ್ಗೆಯೂ ಕುಮಾರಸ್ವಾಮಿ ಚರ್ಚಿಸಿದ್ದಾರೆ ಎನ್ನಲಾಗಿದೆ.
ಈ ಹಿಂದೆಯೂ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ತ್ಯಜಿಸಿ ಜೆಡಿಎಸ್ ಸೇರಲು ಮುಂದಾದಾಗ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಮನವೊಲಿಸಿದ್ದರು.
ಇದನ್ನೂ ಓದಿ:ಕೋವಿಡ್ ಮೃತರಿಗೆ 1 ಲಕ್ಷ ರೂ. ಯೋಜನೆಗೆ ಚಾಲನೆ: ಸಚಿವ ಆರ್. ಅಶೋಕ್
ಈ ಮಧ್ಯೆ, ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಇದೇ ತಿಂಗಳ 28 ಮತ್ತು 29 ರಂದು ಜೆಡಿಎಸ್ವತಿಯಿಂದ ಆಕಾಂಕ್ಷಿಗಳಿಗೆ ಕಾರ್ಯಾಗಾರ ಆಯೋಜಿಸಿದ್ದು, ಅಲ್ಲಿಂದ ಚುನಾವಣೆ ಸಿದ್ಧತೆ ಆರಂಭಿಸಲಿದ್ದಾರೆ. ತಳಮಟ್ಟದಿಂದ ಪಕ್ಷ ಕಟ್ಟುವುದು ಹಾಗೂ ಕಾರ್ಯಕರ್ತರ ಸಮಸ್ಯೆ ಆಲಿಸುವ ಸಂಬಂಧ ಕೆಲವು ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. ಸ್ಥಳೀಯ ಮಟ್ಟದಲ್ಲಿ ಕಾಂಗ್ರೆಸ್ ನಾಯಕರನ್ನು ಸೆಳೆಯುವ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ