ಯಡಿಯೂರಪ್ಪ ಅವರಿಗೆ ಈಗ ಮದುವೆ ಮಾಡಿದ್ರೂ ಎರಡು ಮಕ್ಕಳಾಗುತ್ತೆ: ಸಿ.ಎಂ.ಇಬ್ರಾಹಿಂ
Team Udayavani, Jul 27, 2021, 2:45 PM IST
ಬೆಂಗಳೂರು: ಕೇರಳದಲ್ಲಿ 80 ವರ್ಷದ ಮುದಿಯರನ್ನು ಸಿಎಂ ಅಭ್ಯರ್ಥಿ ಮಾಡುತ್ತಾರೆ. ಆದರೆ ಇಲ್ಲಿ ವಯಸ್ಸಾಗಿದೆಯೆಂದುಕಿತ್ತು ಹಾಕಿದ್ದಾರೆ. ಯಡಿಯೂರಪ್ಪನವರಿಗೆ ಈಗ ಮದುವೆ ಮಾಡಿದರೂ ಎರಡು ಮಕ್ಕಳಾಗುತ್ತದೆ ಎಂದು ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಹೇಳಿದರು.
ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ತಮಗೆಲ್ಲರಿಗೂ ಗೊತ್ತಿದೆ. ಜೂನ್, ಜುಲೈ, ಆಗಸ್ಟ್ ನಲ್ಲಿ ರಾಜಕೀಯ ವಿಕೇಂದ್ರೀಕೃತ ಆಗುತ್ತದೆ, ರಾಜಕೀಯ ಬದಲಾಗುತ್ತದೆ ಎಂದು ಹೇಳಿದ್ದೆ. ಆರೂವರೆ ಕೋಟಿ ಜನರಿರುವ ರಾಜ್ಯದಲ್ಲಿ ಬದಲಾವಣೆ ಸಹಿಸುವುದಿಲ್ಲ ಎಂದರು.
ಏಕಾಏಕಿ ರಾಜಕೀಯ ಒತ್ತಡ ಹಾಕಿ ರಾಜೀನಾಮೆ ಪಡೆಯುವುದು ಸರಿಯಲ್ಲ. ಅಕ್ಟೋಬರ್ ನಲ್ಲಿ ಅಲ್ಪಸಂಖ್ಯಾತರು ಸೇರಿ ಸಭೆ ನಡೆಯಲಿದೆ. ಹೀರಾ-ಪೀರಾ ಸಭೆ ಕರೆದು ರಾಜ್ಯದ ಹಿತಾಸಕ್ತಿ ಕಾಪಾಡಲು ಏನು ಕ್ರಮ ಕೈಗೊಳ್ಳಬೇಕು ಎನ್ನುವುದನ್ನು ತೀರ್ಮಾನ ಮಾಡುತ್ತೇವೆ ಎಂದರು.
ಇದನ್ನೂ ಓದಿ:ನಾಳೆಯೇ ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಿದ್ದತೆ ಮಾಡುವಂತೆ ಸೂಚನೆ
ಯಡಿಯೂರಪ್ಪ ಲವಲವಿಕೆಯಿಂದ ಇದ್ದಾರೆ. ರಾಜ್ಯಪಾಲರ ಹುದ್ದೆ ತಿರಸ್ಕರಿಸಿದ್ದಾರೆ. ಕನ್ನಡಿಗರು ನೀಡುವವರು, ಬೇಡುವವರಲ್ಲ. ಯಡಿಯೂರಪ್ಪ ಮೇಲೆ ಆರೋಪ, ಪ್ರತ್ಯಾರೋಪ ಇರಬಹುದು ಅದು ಬೇರೆ. ಅಧಿಕಾರ ಇದ್ದಾಗ ನಾನು ದೂರ ಇರುವು ಮನುಷ್ಯ. ಅವರು ರಾಜೀನಾಮೆ ನೀಡಿರುವುದರಿಂದ ಭೇಟಿ ಮಾಡಲು ಬಂದಿದ್ದೇನೆ ಎಂದರು.
ಒರಿಜಿನಲ್ ಕಾಪಿ ಇಲ್ಲ, ಝೆರಾಕ್ಸ್ ತಗೆದುಕೊಂಡು ಏನು ಮಾಡುವುದು. ಸಿಎಂ ಯಾರೇ ಆಗಲಿ, ಅದನ್ನು ನಮ್ಮ ಜನ ಒಪ್ಪಲ್ಲ. ನಾನು ಏನು ಹೇಳಿದರೂ ನಂಬುತ್ತಿರಲಿಲ್ಲ. ಈಗ ಸಿಕ್ಸ್ತ್ ಸೆನ್ಸ್ ಪ್ರಕಾರ ನಡೆದಿದೆ ಎಂದ ಅವರು, ನಾವು ಸಾಧು ಸಂತರ ಜೊತೆ ಇದ್ದವರು. ಮಠದ ಸ್ವಾಮಿಗಳು ಖಾವಿ ಹಾಕಿಕೊಂಡು ವಿದ್ಯೆ, ಅನ್ನ ಕೊಟ್ಟಿದ್ದಾರೆ. ಅವರು ಹಕ್ಕಿನ ಪ್ರಕಾರ ಕೇಳಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಹೊಸ ಪರ್ವ ಶುರುವಾಗಲಿದೆ. ನಾನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಬರಲಿಲ್ಲ. ಮಠದ ದಾಸೋಹಿ ನಾನು, ಯಡಿಯೂರಪ್ಪ ಭೇಟಿ ಆಗಲು ಬಂದೆ. ನಮ್ಮ ನಾಡು, ನಮ್ಮ ನೆಲ, ನಮ್ಮ ಜಲ ನಮ್ಮ ನಾಯಕನನ್ನ ಆಯ್ಕೆ ಮಾಡಬೇಕಿದೆ. ಸೆಪ್ಟೆಂಬರ್ ನಂತರ ಎಲ್ಲವೂ ಗೊತ್ತಾಗಲಿದೆ ಎಂದು ಇಬ್ರಾಹಿಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…