ಭಂಡತನ, ಬಂಡೆತನ ಬೇಡ.. ಎಲ್ಲದಕ್ಕೂ ಸಮರ್ಥವಾಗಿ ಉತ್ತರ ಕೊಡ್ತೀವಿ:ಅಶ್ವತ್ಥನಾರಾಯಣ್ ಟಾಂಗ್
Team Udayavani, Jan 11, 2022, 12:30 PM IST
ಬೆಂಗಳೂರು: ಎಲ್ಲಿ ಯಾರು ಬೇಕಾದರೂ ಸೋಂಕಿತರಾಗಬಹುದು. ಟೆಸ್ಟ್ ಮಾಡಿಸಿದಾಗ ಅದು ಗೊತ್ತಾಗುತ್ತದೆ. ಡಿಕೆ ಶಿವಕುಮಾರ್ ರವರು ತಮ್ಮ ಪಾದಯಾತ್ರೆ ಸಮರ್ಥಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಭಂಡತನ ,ಬಂಡೆತನ ಬೇಡ, ಎಲ್ಲದಕ್ಕೂ ಸಮರ್ಥವಾಗಿ ಉತ್ತರ ಕೊಡುತ್ತೇವೆ ಎಂದು ಸಚಿವ ಅಶ್ವತ್ಥ ನಾರಯಣ್ ಸರ್ಕಾರವೇ ಹೆಚ್ಚುವರಿ ಡಿಸಿ ಕಳುಹಿಸಿ ಸೋಂಕಿತನನ್ನಾಗಿ ಮಾಡುತ್ತಿದೆ ಎಂಬ ಡಿಕೆಶಿ ಆರೋಪ ವಿಚಾರಕ್ಕೆ ತಿರುಗೇಟು ನೀಡಿದ್ದಾರೆ.
ಡಿಕೆಶಿ ಮೌನ ಪಾದಯಾತ್ರೆಗೆ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದ ಅವರು, ಅವರು ಮಾತನಾಡಿದರೆ ಸಿಕ್ಕಿ ಹಾಕಿಕೊಳ್ಳುತ್ತಾರೆ. ಮಾತನಾಡದಿದ್ದರೆ ಬಚಾವ್ ಆಗುತ್ತೇನೆ ಎಂದು ಅವರಿಗೆ ಅನಿಸಿದೆ. ಅದಕ್ಕೆ ಮೌನವಾಗಿದ್ದಾರೆ ಎಂದರು.
ಮಾಜಿ ಸಚಿವ ರೇಣುಕಾಚಾರ್ಯ ಜಾತ್ರೆಯಲ್ಲಿ ಪಾಲ್ಗೊಂಡ ವಿಚಾರವನ್ನು ಸಮರ್ಥನೆ ಮಾಡಿದ ಸಚಿವರು, ಅಲ್ಲಿ ರೇಣುಕಾಚಾರ್ಯ ಕಾರ್ಯಕ್ರಮ ಆಯೋಜನೆ ಮಾಡಿರಲಿಲ್ಲ. ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಕ್ಷಮೆ ಕೋರಿದ್ದಾರೆ ಎಂದರು.
ಸಿಎಂ ಜತೆ ಇದ್ದ ತಾವು ಕ್ಯಾರಂಟೈನ್ ಯಾಕೆ ಆಗಿಲ್ಲ ಎಂಬ ವಿಚಾರಕ್ಕೆ ಉತ್ತರಿಸಿದ ಅಶ್ವಥ್ ನಾರಾಯಣ, ಸೋಮವಾರ ನಾನು ಸಿಎಂ ಜತೆ ಸಭೆಯಲ್ಲಿರಲಿಲ್ಲ. ಸಿಎಂ ಕಚೇರಿಗೆ ಹೋಗಿದ್ದೆ. ಭಾರತ ಸರ್ಕಾರದ ಗೈಡ್ಲೈನ್ಸ್ ಬಂದಿದೆ. ಸೋಂಕು ಇದ್ದಾಗ ಕ್ರಮ ವಹಿಸಬೇಕಾಗುತ್ತದೆ. ಸರ್ಕಾರದ ಕೆಲಸ ಮಾಡಲೇಬೇಕು. ನನಗೆ ಸೋಂಕಿನ ಲಕ್ಷಣ ಕಾಣಿಸಿಕೊಂಡರೆ ಐಸೋಲೇಟ್ ಆಗುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ