ಕಾಂಗ್ರೆಸ್ ಚಲಾವಣೆಯಲ್ಲಿ ಇಲ್ಲದ ಸವಕಲು ನಾಣ್ಯ: ಸಿ.ಟಿ.ರವಿ ವ್ಯಂಗ್ಯ
Team Udayavani, Dec 25, 2021, 2:05 PM IST
ಚಿಕ್ಕಮಗಳೂರು: ಕಾಂಗ್ರೆಸ್ ಚಲಾವಣೆಯಲ್ಲಿ ಇಲ್ಲದ ಸವಕಲು ನಾಣ್ಯ. ಸಿದ್ದು, ಡಿಕೆಶಿ, ಸೋನಿಯಾಗಾಂಧಿ, ಪರಮೇಶ್ವರ್ ಯಾರ ನಾಯಕತ್ವದಲ್ಲಾದರು ಎಲೆಕ್ಷನ್ ಮಾಡಲಿ, ಯಾರ ನೇತೃತ್ವದಲ್ಲಿ ಹೋದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ನಿಲುವು ಏನೆಂದು ವಿಧಾನಸಭೆ ಅಧಿವೇಶನದಲ್ಲೇ ನೋಡಿದ್ದೇವೆ. ಕಾಂಗ್ರೆಸ್ ನಿಲುವುಗಳೇ ಕಾಂಗ್ರೆಸ್ ಪಕ್ಷಕ್ಕೆ ಮಾರಕವಾಗಿವೆ. ಅವರ ನಿಲುವು, ತತ್ವಗಳಿಂದ ಕಾಂಗ್ರೆಸ್ ಸೋಲುತ್ತಿದೆ, ಅವರ ತತ್ವ-ನಿಲುವು ಜನಹಿತಕ್ಕೆ ಮಾರಕವಾಗಿದೆ. ಅವರ ತತ್ವ-ನಿಲುವು ಓಲೈಕೆ ರಾಜನೀತಿ ಅದಕ್ಕೆ ಅವರು ವಿಫಲರಾಗುತ್ತಾರೆ, ಮತ್ತೇನೂ ಇಲ್ಲ ಎಂದರು.
ಹೆಬ್ಬೆಟ್ಟಿನ ಜನ ಕೂಡ ಮತ್ತೊಬ್ಬರ ಬಳಿ ಕೇಳಿ ಹೆಬ್ಬೆಟ್ಟು ಒತ್ತುತ್ತಾರೆ. ಹೆಬ್ಬೆಟ್ಟಿನ ಜನರಿಗಾದರೂ ತಿಳುವಳಿಕೆ ಇರುತ್ತದೆ, ಇವರದ್ದು ಬರೀ ನಾಟಕ. 2016ರಲ್ಲಿ ಮತಾಂತರ ಡ್ರಾಫ್ಟ್ ಗೆ ಸಹಿ ಹಾಕಿ, ನಾನು ಹಾಕಿಲ್ಲ ಅಂದರು. ಗೊತ್ತಿಲ್ಲದೆ ಸಹಿ ಹಾಕಿದ್ದೇನೆ ಅಂದರು ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯರನ್ನು ವ್ಯಂಗ್ಯಮಾಡಿದರು.
ಮೇಕೆದಾಟು ವಿಚಾರವಾಗಿ ಕಾಂಗ್ರೆಸ್ ಪಾದಯಾತ್ರೆ, ಉರುಳು ಸೇವೆ ಎನೂ ಬೇಕಾದರೂ ಮಾಡಬಹುದು, ಮಾಡಿಕೊಳ್ಳಲಿ. ಕೇಂದ್ರದಲ್ಲಿ 2004 ರಿಂದ 2014 ರವರೆಗೂ ಕಾಂಗ್ರೆಸ್ ಸರ್ಕಾರವಿತ್ತು. ಅನುಮತಿ ಕೊಟ್ಟಿದ್ದರಾ.? 1996 ರಲ್ಲಿ ಪ್ರಸ್ತಾವನೆ, ಮಂಜೂರಾತಿ ಮಾಡಿಸಿದ್ದೆವು ಎಂದು ಎಚ್.ಡಿ.ಕೆ ಹೇಳಿದ್ದಾರೆ. 2004 ರಿಂದ 2014 ಕಾಂಗ್ರೆಸ್ ಸರ್ಕಾರ ಇತ್ತಲ್ಲ ಯಾಕೆ ಅನುಮತಿ ನೀಡಿಲ್ಲ ಇವರ ಅಡಳಿತ ಅವಧಿಯಲ್ಲಿ ತೆಗೆದುಕೊಂಡ ಕ್ರಮ ಏನು ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
MUST WATCH
ಹೊಸ ಸೇರ್ಪಡೆ
ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ
Kollywood: ಕಮಲ್ ಹಾಸನ್ ʼಥಗ್ ಲೈಫ್ʼ ಅಖಾಡಕ್ಕೆ ಬಾಲಿವುಡ್ನ ಖ್ಯಾತ ನಟರು ಎಂಟ್ರಿ?
ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ