49 ಹೊಸ ತಾಲೂಕುರಚನೆಗೆ ಸಂಪುಟದ ಸಮ್ಮತಿ
Team Udayavani, Aug 29, 2017, 11:30 AM IST
ಬೆಂಗಳೂರು: ಬಜೆಟ್ನಲ್ಲಿ ಘೋಷಣೆ ಮಾಡಿರುವ ದಾಂಡೇಲಿ,ಅಳ್ನಾವರ, ಬಬಲೇಶ್ವರ, ಕುಡಚಿ, ಬ್ರಹ್ಮಾವರ, ಕಾಪು, ಮೂಡಬಿದರೆ ಸೇರಿದಂತೆ 49 ಹೊಸ ತಾಲೂಕು ರಚನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಕುರಿತು ಸಂಪುಟ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಟಿ.ಬಿ. ಜಯಚಂದ್ರ, 49 ಹೊಸ ತಾಲೂಕುಗಳ ರಚನೆಗೆ ಒಪ್ಪಿಗೆ ನೀಡಲಾಗಿದ್ದು, ಹೊಸ ತಾಲೂಕುಗಳ ಗಡಿ ನಿರ್ಧಾರವಾಗದ ಹಿನ್ನೆಲೆಯಲ್ಲಿ ತಕ್ಷಣವೇ ಆದೇಶ ಹೊರಡಿಸುವುದಿಲ್ಲ. ಹೊಸ ತಾಲೂಕುಗಳಿಗೆ ಸೇರ್ಪಡೆಯಾಗುವ ಭೂ ಪ್ರದೇಶದ ಗಡಿ ನಿಗದಿ ಪಡಿಸಿ ಶೀಘ್ರವೇ ಸರ್ಕಾರಕ್ಕೆ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳ ವರದಿ ಬಂದ ನಂತರ ಸರ್ಕಾರ ಅಧಿಕೃತ ಆದೇಶ
ಸಂಪುಟದ ಪ್ರಮುಖ ನಿರ್ಣಯಗಳು
- ಮೈಸೂರು, ಬೆಳಗಾವಿ ಹಾಗೂ ಕಲಬುರಗಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತೆರೆಯಲು ನಿರ್ಧಾರ
- ಆಲಮಟ್ಟಿ ಎಡದಂಡೆ ಕಾಲುವೆ ಆಧುನಿಕರಣಕ್ಕೆ 112 ಕೋಟಿ ನೀಡಲು ಒಪ್ಪಿಗೆ.
- ಚೆನ್ನರಾಯಪಟ್ಟಣ ತಾಲೂಕಿನಲ್ಲಿ 25 ಕೆರೆ ತುಂಬಿಸಲು 79 ಕೋಟಿ ರೂ. ಬಿಡುಗಡೆಗೆ ತೀರ್ಮಾನ
- ಕೃಷ್ಣ ಜಲಭಾಗ್ಯ ನಿಗಮಕ್ಕೆ 1500 ಕೋಟಿ ಸಾಲಕ್ಕೆ ಅನುಮೋದನೆ.
- ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ನಿರ್ಮಲ,ಸಿರಿಗಂಧ ಕಿಟ್ ವಿತರಿಸಲು 6.50 ಕೋಟಿ.
- ಗದಗದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಆಸ್ಪತ್ರೆಯ ಆಧುನಿಕರಣಕ್ಕೆ 5.8 ಕೋಟಿ.
- ಕುಣಬಿ ಸಮುದಾಯವನ್ನು ಎಸ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು.
- ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಏತ ನೀರಾವರಿ ಯೋಜನೆಗೆ 170 ಕೋಟಿ ನೀಡಲು ಒಪ್ಪಿಗೆ
- ಕಲಬುರಗಿ ಜಿಲ್ಲೆ ಆಳಂದ ತಾಲೂಕಿನಲ್ಲಿ ಅಂತರ್ಜಲ ಅಭಿವೃದ್ಧಿಗೆ 20 ಕೋಟಿ ಯೋಜನೆಗೆ ಒಪ್ಪಿಗೆ
- 2017-18 ನೇ ಸಾಲಿಗೆ ರಸಗೊಬ್ಬರ ದಾಸ್ತಾನು ಮಾಡಲು ಸಹಕಾರ ಮಾರಾಟ ಮಂಡಳಿಗೆ 500 ಕೋಟಿ ಸಾಲಕ್ಕೆ ಸರ್ಕಾರ ಖಾತ್ರಿ ನೀಡುವುದು.
- ತೊಗರಿಗೆ ಬೆಂಬಲ ಬೆಲೆಯಡಿಯಲ್ಲಿ ರೈತರಿಗೆ ನೀಡಿರುವ 13.92 ಕೋಟಿಗೆ ಅನುಮೋದನೆ.
- ರಾಯಚೂರು ಜಿಲ್ಲಾ ಕಚೇರಿಗಳ ಸಂಕೀರ್ಣ ನಿರ್ಮಾಣಕ್ಕೆ 25 ಕೋಟಿ
- ಕೆಂಪೇಗೌಡ ಪ್ರಾಧಿಕಾರದ ಅಧಿಕಾರೇತರ ಸದಸ್ಯರ ಸಂಖ್ಯೆಯನ್ನು 2 ರಿಂದ 6 ಕ್ಕೆ ಹೆಚ್ಚಿಸುವುದು.
- ಗಜೇಂದ್ರಗಢ-ನರೇಗಲ್, ರೋಣ ಪಟ್ಟಣಕ್ಕೆ ನೀರು ಸರಬರಾಜು ಮಾಡಲು ಕೆರೆ ನಿರ್ಮಾಣಕ್ಕೆ 60 ಕೋಟಿಗೆ ಒಪ್ಪಿಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು
Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ
ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ
Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ
Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು
MUST WATCH
ಹೊಸ ಸೇರ್ಪಡೆ
Rabkavi-Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ
Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್
ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ
ಗೋಕಾಕ ತಾಲೂಕಿನ ಸರಕಾರಿ ಶಾಲೆಗಳು ಹೈಟೆಕ್
Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.