ಸಿಎಂ ದೆಹಲಿ ಪ್ರವಾಸ ಬಳಿಕ ಸಂಪುಟ ಸ್ಪಷ್ಟತೆ: ಪ್ರಹ್ಲಾದ ಜೋಶಿ
Team Udayavani, Oct 25, 2022, 10:45 PM IST
ಹುಬ್ಬಳ್ಳಿ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಬೇಕಾದ ಸಂದರ್ಭದಲ್ಲಿ ಆಗಲಿದೆ. ಈ ಬಗ್ಗೆ ಮುಖ್ಯಮಂತ್ರಿಗಳೇ ದೆಹಲಿಗೆ ಹೋಗಿ ಬರುವುದಾಗಿ ಸ್ವತಃ ಘೋಷಿಸಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳೇ ಸ್ಪಷ್ಟಪಡಿಸಿದ್ದಾರೆ. ಅವರು ದೆಹಲಿಗೆ ತೆರಳಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಆಗಮಿಸಿದ ನಂತರ, ಪಕ್ಷದಲ್ಲಿ ನಾವೆಲ್ಲ ಸೇರಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.