ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ
Team Udayavani, Dec 6, 2021, 7:30 AM IST
ಬೆಂಗಳೂರು: ವಿಧಾನ ಪರಿಷತ್ ಚುನಾ ವಣೆ ನಡುವೆಯೇ ರಾಜ್ಯ ಬಿಜೆಪಿಯಲ್ಲಿ ಸಚಿವ ಸಂಪುಟ ವಿಸ್ತರಣೆಯ ಪಿಸು ಮಾತು ಕೇಳಿಬರತೊಡಗಿದೆ. ಅಧಿವೇಶನಕ್ಕೆ ಮೊದಲೇ ವಿಸ್ತರಣೆಯ ನಿರೀಕ್ಷೆಯಲ್ಲಿ ಕೆಲವರಿದ್ದರೆ, ಅಧಿವೇಶನ ಮುಗಿದ ಅನಂತರ ಆಗುವ ಲೆಕ್ಕಾಚಾರದಲ್ಲಿ ಕೆಲವು ಸಚಿವಾಕಾಂಕ್ಷಿಗಳಿದ್ದಾರೆ.
ಖಾಲಿ ಇರುವ 2 ಸ್ಥಾನಗಳ ಜತೆಗೆ ಕೆಲವು ಸಚಿವರನ್ನು ಕೈಬಿಟ್ಟು ಇನ್ನಷ್ಟು ಹೊಸಬರಿಗೆ ಅವಕಾಶ ಕಲ್ಪಿಸಿ ಕೊಡಬೇಕೆಂಬ ಬೇಡಿಕೆ ಇದ್ದು, ಪರಿಷತ್ ಚುನಾವಣೆಯ ಫಲಿ ತಾಂಶವೂ ಹಾಲಿ ಸಚಿವರ ಭವಿಷ್ಯ ನಿರ್ಧ ರಿಸಲಿದೆ ಎಂಬ ಮಾತು ಕೇಳಿಬರುತ್ತಿದೆ.
ಅಧಿವೇಶನಕ್ಕೆ ಮುನ್ನ ಅನುಮಾನ
ಡಿ. 13ರಂದು ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅದಕ್ಕೆ ಮುನ್ನವೇ ಸಂಪುಟ ವಿಸ್ತರಣೆಯಾಗುತ್ತದೆ ಎಂಬ ಮಾತು ಬಿಜೆಪಿ ವಲಯ ದಲ್ಲಿದೆ. ಮಾಜಿ ಸಿಎಂ ಯಡಿಯೂರಪ್ಪ ಇದಕ್ಕೆ ಪುಷ್ಟಿ ನೀಡು ವಂತೆ ಮಾತ ನಾಡಿದ್ದರೆ, ಶಾಸಕ ಬಸನಗೌಡ ಯತ್ನಾಳ್ ಸಂಪುಟ ವಿಸ್ತರಣೆಯ ಬಗ್ಗೆ ಮೇಲಿಂದ ಮೇಲೆ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದು ಆಕಾಂಕ್ಷಿಗಳಲ್ಲಿ ಆಸೆ ಗರಿಗೆದರಲು ಕಾರಣವಾಗಿವೆ.
ಆದರೆ, ಡಿ. 10ರಂದು ವಿಧಾನ ಪರಿಷತ್ತಿಗೆ ಚುನಾವಣೆ ನಡೆಯಲಿದ್ದು, ಅದಕ್ಕೆ ಮೊದಲು ಸಂಪುಟ ವಿಸ್ತರಣೆ ಅನುಮಾನ ಎಂಬ ಅಭಿಪ್ರಾಯವಿದೆ.
ಇದನ್ನೂ ಓದಿ:ಪಿಎಫ್ ಖಾತೆಯಿಂದ ಎಲ್ಐಸಿ ಪ್ರೀಮಿಯಂ ಪಾವತಿಸಿ! ಹೊಸ ಸೌಲಭ್ಯ ಪಡೆಯಲು ಬೇಕು ಫಾರ್ಮ್ ನಂ.14
ಚರ್ಚೆಯಾಗಿಲ್ಲ
ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಜ್ಯಾಧಕ್ಷರ ನಡುವೆ ಹಾಗೂ ಪಕ್ಷದ ಯಾವುದೇ ಆಂತರಿಕ ಸಭೆಯಲ್ಲಿ ಚರ್ಚೆ ನಡೆದಿಲ್ಲ ಎಂಬ ಮಾಹಿತಿ ಲಭಿಸಿದೆ. ಚುನಾವಣೆ ಮತ್ತು ಅಧಿವೇಶನ ಇರುವ ಈ ಸನ್ನಿವೇಶದಲ್ಲಿ ಸಂಪುಟ ವಿಸ್ತರಣೆಗೆ ಕೈ ಹಾಕುವ ಸಂಭವ ಕಡಿಮೆ ಎಂದು ಬಿಜೆಪಿ ಹಿರಿಯ ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ರಮೇಶ್, ವಿಜಯೇಂದ್ರ ಸೇರ್ಪಡೆ?
ಸಂಪುಟ ವಿಸ್ತರಣೆ ಚರ್ಚೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೆಸರು ಕೇಳಿ ಬರುತ್ತಿವೆ. ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಜತೆಗೆ ಸಹೋದರ ಲಖನ್ ಜಾರಕಿಹೊಳಿ ಅವರನ್ನು ಗೆಲ್ಲಿಸುವ ಜವಾಬ್ದಾರಿ ಹೊತ್ತಿರುವ ರಮೇಶ್ ಅಧಿವೇಶನಕ್ಕೆ ಮುನ್ನ ಮತ್ತೆ ಸಂಪುಟ ಸೇರಲು ಕಸರತ್ತು ನಡೆಸಿ ದ್ದಾರೆ ಎನ್ನಲಾಗಿದೆ. ವಿಜಯೇಂದ್ರ ಅವರನ್ನೂ ಸೇರಿಸಿಕೊಳ್ಳಬೇಕೆಂಬ ಒತ್ತಡ ಹಿಂದಿನಿಂದಲೂ ಇದೆ. ಈ ಬಾರಿ ವಿಸ್ತರಣೆ ಆದರೆ ವಿಜಯೇಂದ್ರ ಅವರಿಗೆ ಸ್ಥಾನ ಖಚಿತ ಎಂಬ ಮಾತು ಅವರ ಆಪ್ತ ವಲಯದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…