ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ: ಡಿಸಿಎಂ ಸವದಿ
Team Udayavani, Jan 13, 2020, 3:05 AM IST
ಕೊಪ್ಪಳ: ಬಿಜೆಪಿಯಿಂದ ಗೆದ್ದಿರುವ ಶಾಸಕರಿಗೆ ಸಂಕ್ರಾಂತಿ ಬಳಿಕ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೆದ್ದ ಎಲ್ಲ ಶಾಸಕರಿಗೂ ಸಚಿವ ಸ್ಥಾನ ನೀಡುವುದು ಸಿಎಂ ಪರಮಾಧಿಕಾರ. ಸಂಕ್ರಾಂತಿ ಬಳಿಕ ಉತ್ತಮ ದಿನ ನೋಡಿ ನೂತನ ಶಾಸಕರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಮತ್ತೆ ದಲಿತ ಸಿಎಂ ಕೂಗು ಕೇಳುತ್ತಿದ್ದು, ಅದು ಅವರವರ ವೈಯಕ್ತಿಕ ಅಭಿಪ್ರಾಯ ಎಂದರು. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಬಗ್ಗೆ ನಾನು ಮಾತನಾಡುವ ಅವಶ್ಯಕತೆಯಿಲ್ಲ. ಈಶ್ವರ ಖಂಡ್ರೆ ಹೇಳಿಕೆಗೂ ನಾನು ಉತ್ತರ ಕೊಡುವುದಿಲ್ಲ. ಮೊದಲು ಕುಮಾರಸ್ವಾಮಿ ಕೊಳಕು ಹೇಳಿಕೆ ನಿಲ್ಲಿಸಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ಅವರ ಭ್ರಷ್ಟಾಚಾರವನ್ನು ಬಯಲಿಗೆಳೆಯಲಾಗುವುದು.
ಪೌರತ್ವ ಕಾನೂನು ಬಗ್ಗೆ ಅನೇಕ ಕಡೆಗಳಲ್ಲಿ ಗೊಂದಲ ಸೃಷ್ಟಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಪೌರತ್ವ ಕಾನೂನು ದೇಶದ ಅಖಂಡತೆಗೆ ಮತ್ತಷ್ಟು ಬಲ ಬಂದಿದೆ. ಇವರೆಗೂ ಪೌರತ್ವ ಕಾಯ್ದೆ ಎಂಟು ಬಾರಿ ತಿದ್ದುಪಡಿಯಾಗಿದೆ. ಅನವಶ್ಯಕವಾಗಿ ದೇಶದ ಮುಸ್ಲಿಂ ಬಾಂಧವರಿಗೆ ಕಾಂಗ್ರೆಸ್ ಗೊಂದಲ ಸೃಷ್ಟಿಸಿ, ಬೀದಿಗಿಳಿದು ಹೋರಾಟ ಮಾಡುವಂತೆ ಪ್ರೇರೇಪಿಸುತ್ತಿದೆ. ಗಂಗಾವತಿಯಲ್ಲಿ ಪೌರತ್ವ ಜಾಗೃತಿ ಕುರಿತಂತೆ ನಡೆದ ಗಲಾಟೆ ಅನ್ಯ ಪಕ್ಷದವರ ಕೈವಾಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
MUST WATCH
ಹೊಸ ಸೇರ್ಪಡೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.