Cabinet expansion ನಾಳೆ, ಸಂಜೆಯೇ ಖಾತೆ ಹಂಚಿಕೆ: ಸಚಿವ ಕೆ.ಎಚ್.ಮುನಿಯಪ್ಪ

ಹಿರಿಯರು ಮತ್ತು ಯುವಕರ ಮಿಶ್ರಣವಾಗಿರಲಿದೆ...

Team Udayavani, May 26, 2023, 6:43 PM IST

K-H-Muniyappa

ಬೆಂಗಳೂರು: ಶನಿವಾರ ಮಧ್ಯಾಹ್ನ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಸಂಜೆ ವೇಳೆಗೆ ಖಾತೆ ಹಂಚಿಕೆಯಾಗಲಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಶುಕ್ರವಾರ ಹೇಳಿದ್ದಾರೆ.

ನವದೆಹಲಿಯಿಂದ ಹಿಂದಿರುಗಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾಳೆ (ಶನಿವಾರ) ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಸಮಯವೂ ನಿಗದಿಯಾಗಿದೆ. ಹೆಚ್ಚಿನ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ನಾಲ್ಕೈದು ಸಚಿವ ಸ್ಥಾನಗಳನ್ನು ಹೊರತುಪಡಿಸಿ ಉಳಿದ ಸ್ಥಾನಗಳನ್ನು ಒಂದೇ ದಿನದಲ್ಲಿ ಭರ್ತಿ ಮಾಡಲಾಗುವುದು. ಸಂಪುಟವು ಹಿರಿಯರು ಮತ್ತು ಯುವಕರ ಮಿಶ್ರಣವಾಗಿರಲಿದೆ. ನಾಲ್ಕೈದು ಸ್ಥಾನಗಳನ್ನು ಹೊರತುಪಡಿಸಿ ಉಳಿದೆಲ್ಲವನ್ನೂ ಭರ್ತಿ ಮಾಡಲಾಗುವುದು” ಎಂದು ಮುನಿಯಪ್ಪ ಹೇಳಿದರು.

ಸಚಿವ ಸ್ಥಾನಕ್ಕೆ ಸಂಬಂಧಿಸಿದಂತೆ ಹಿರಿಯ ನಾಯಕರು ಪಕ್ಷದ ಹೈಕಮಾಂಡ್ ಮುಂದೆ ಏನಾದರೂ ಬೇಡಿಕೆ ಇಟ್ಟಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮುನಿಯಪ್ಪ,”ಈ ಹೊತ್ತಿನಲ್ಲಿ ಏನನ್ನೂ ಹೇಳುವುದು ಕಷ್ಟ” ಎಂದರು.ಆದಾಗ್ಯೂ, ”ನಮಗೆ ಹಿರಿಯರು ಮತ್ತು ಯುವಕರು ಬೇಕು. ಇವೆರಡರ ಸಮತೋಲನವನ್ನು ನಾವು ಮಾಡಬೇಕಾಗಿದೆ,ಖಾತೆಗಳ ಬಗ್ಗೆ ಇನ್ನೂ ನಿಗದಿಯಾಗಿಲ್ಲ. ನಾಳೆ ನಿರ್ಧರಿಸಲಾಗುವುದು. ಸಂಜೆಯೊಳಗೆ ಪ್ರಕಟಿಸಬೇಕು”ಎಂದರು.

ಮಾಜಿ ಕೇಂದ್ರ ಸಚಿವ ಮತ್ತು ಏಳು ಬಾರಿ ಲೋಕಸಭೆ ಸದಸ್ಯರಾಗಿರುವ ದೇವನಹಳ್ಳಿ ಶಾಸಕ ಮುನಿಯಪ್ಪ ಅವರು ಮೇ 20 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

34 ಮಂದಿ ಸಚಿವರಾಗಲು ಸಾಧ್ಯವಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ 10 ಹುದ್ದೆಗಳನ್ನು ಇದುವರೆಗೆ ಭರ್ತಿ ಮಾಡಲಾಗಿದ್ದು, 24 ಹುದ್ದೆಗಳು ಖಾಲಿ ಇವೆ.ಡಾ.ಜಿ.ಪರಮೇಶ್ವರ, ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ ಮತ್ತು ಬಿ.ಝಡ್. ಜಮೀರ್ ಅಹಮದ್ ಖಾನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಯುತ್ತಿದ್ದು, ತಮ್ಮ ಉಮೇದುವಾರಿಕೆಯ ಮೇಲೆ ಪ್ರಭಾವ ಬೀರಲು ಹಲವು ಆಕಾಂಕ್ಷಿಗಳು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

ಟಾಪ್ ನ್ಯೂಸ್

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

2-

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಆಘಾತ; ಮೃತ್ಯು

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿ ದುಬಾರಿ? ಐದು ಭರವಸೆ ಜಾರಿಯಿಂದಾಗಿ ಬೊಕ್ಕಸಕ್ಕೆ ಹೊರೆ

ಗ್ಯಾರಂಟಿ ದುಬಾರಿ? ಐದು ಭರವಸೆ ಜಾರಿಯಿಂದಾಗಿ ಬೊಕ್ಕಸಕ್ಕೆ ಹೊರೆ

hdk

113 ಸ್ಥಾನ ಬಂದು ಪಂಚರತ್ನ ಜಾರಿ ಮಾಡದಿದ್ದರೆ ವಿಸರ್ಜನೆ ಎಂದಿದ್ದೆ- HDK

ಗ್ಯಾರಂಟಿಗೆ ಹಣಕಾಸು ಇಲಾಖೆಯ ಷರತ್ತು ! ಷರತ್ತು ಇಲ್ಲದೆ ಜಾರಿ ಅಸಾಧ್ಯ ಎಂದ ಅಧಿಕಾರಿಗಳು

ಗ್ಯಾರಂಟಿಗೆ ಹಣಕಾಸು ಇಲಾಖೆಯ ಷರತ್ತು ! ಷರತ್ತು ಇಲ್ಲದೆ ಜಾರಿ ಅಸಾಧ್ಯ ಎಂದ ಅಧಿಕಾರಿಗಳು

thumb-3

ದಕ್ಷಿಣ ಒಳನಾಡು, ಕರಾವಳಿಯಲ್ಲಿ 5 ದಿನ ಮಳೆ ಸಾಧ್ಯತೆ

ಶಿಕ್ಷಕರ ವರ್ಗಾವಣೆಗೆ ಸರಕಾರ ಒಪ್ಪಿಗೆ: 75 ಸಾವಿರಕ್ಕೂ ಹೆಚ್ಚು ಶಿಕ್ಷಕರಿಂದ ಅರ್ಜಿ

ಶಿಕ್ಷಕರ ವರ್ಗಾವಣೆಗೆ ಸರಕಾರ ಒಪ್ಪಿಗೆ: 75 ಸಾವಿರಕ್ಕೂ ಹೆಚ್ಚು ಶಿಕ್ಷಕರಿಂದ ಅರ್ಜಿ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು