ಸಚಿವ ಸಂಪುಟ ವಿಸ್ತರಣೆ: ಹಾವೇರಿ ಶಾಸಕರ ಪೈಪೋಟಿ


Team Udayavani, Jun 10, 2019, 3:05 AM IST

samputa]

ಹಾವೇರಿ: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಜೂ.12ಕ್ಕೆ ಸಂಪುಟ ವಿಸ್ತರಣೆಗೆ ಮಹೂರ್ತ ನಿಗದಿಪಡಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರಾಜಕಾರಣದಲ್ಲಿ ಸಂಚಲನ ಶುರುವಾಗಿದೆ. ಜಿಲ್ಲೆಯ ಶಾಸಕರಾದ ಆರ್‌. ಶಂಕರ್‌ ಹಾಗೂ ಬಿ.ಸಿ. ಪಾಟೀಲ ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಗಳು. ಈ ಇಬ್ಬರಲ್ಲಿ ಯಾರಿಗೆ ಸಚಿವ ಸ್ಥಾನ ಎಂಬುದೇ ಕುತೂಹಲಕ್ಕೆ ಕಾರಣ.

ಸಂಪುಟ ವಿಸ್ತರಣೆಯಲ್ಲಿ ರಾಣಿಬೆನ್ನೂರು ಪಕ್ಷೇತರ ಶಾಸಕ ಆರ್‌. ಶಂಕರ್‌ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದ್ದು ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ. ಇದು ನಿಜವಾದರೆ, ಆರ್‌. ಶಂಕರ್‌ ಮೈತ್ರಿ ಸರ್ಕಾರದಲ್ಲಿ ಎರಡನೇ ಬಾರಿ ಸಚಿವ ಸ್ಥಾನ ಪಡೆದಂತಾಗುತ್ತದೆ. ಕೆಪಿಜೆಪಿಯಿಂದ ಗೆದ್ದು ಮೈತ್ರಿ ಸರ್ಕಾರವನ್ನು ಬೆಂಬಲಿಸಿದ ಶಂಕರ್‌ಗೆ ಸರ್ಕಾರದ ಮೊದಲ ಸಂಪುಟದಲ್ಲಿಯೇ ಅರಣ್ಯ ಖಾತೆ ನೀಡಲಾಗಿತ್ತು.

ಆದರೆ, ಕೆಲವೇ ತಿಂಗಳಲ್ಲಿ ಕಾಂಗ್ರೆಸ್‌ ಅವರಿಂದ ಸಚಿವ ಸ್ಥಾನ ವಾಪಸ್‌ ಪಡೆದುಕೊಂಡಿತ್ತು. ಇದರಿಂದ ಬೇಸತ್ತ ಶಂಕರ್‌ ಲೋಕಸಭೆ ಚುನಾವಣೆಯಲ್ಲಿ ತಟಸ್ಥವಾಗಿದ್ದರೂ ಅವರ ಅಭಿಮಾನಿಗಳು ಬಹಿರಂಗವಾಗಿಯೇ ಬಿಜೆಪಿ ಬೆಂಬಲಿಸಿದ್ದರು. ಈಗ ಕಾಂಗ್ರೆಸ್‌ ಸಿ.ಎಸ್‌. ಶಿವಳ್ಳಿ ನಿಧನಾ ನಂತರ ಖಾಲಿ ಇದ್ದ ಸಚಿವ ಸ್ಥಾನವನ್ನು ಶಂಕರ್‌ಗೆ ನೀಡಲು ನಿರ್ಧರಿಸಿದೆ ಎನ್ನಲಾಗುತ್ತಿದೆ.

ಬಿ.ಸಿ. ಪಾಟೀಲ ಬಿಸಿ: ಸಚಿವಾಕಾಂಕ್ಷಿಗಳಲ್ಲಿ ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲರೂ ಪ್ರಮುಖರಾಗಿದ್ದಾರೆ. ಜಿಲ್ಲೆಯ ಏಕೈಕ ಕಾಂಗ್ರೆಸ್‌ ಶಾಸಕರಾಗಿರುವ ಇವರು ಸಮ್ಮಿಶ್ರ ಸರ್ಕಾರ ರಚನೆಯಾದಾಗಿನಿಂದಲೂ ಸಚಿವ ಸ್ಥಾನದ ಆಕಾಂಕ್ಷಿ. ಪ್ರತಿ ಬಾರಿಯೂ ಅವರಿಗೆ ಅವಕಾಶ ಕೈ ತಪ್ಪಿದಾಗೆಲ್ಲಾ, ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕುತ್ತಲೇ ಬಂದಿದ್ದಾರೆ.

ಮೊದಲ ಸಂಪುಟ ರಚನೆ ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಸಚಿವ ಸ್ಥಾನ ವಂಚಿತ ಬಿ.ಸಿ. ಪಾಟೀಲ ಬಿಜೆಪಿಗೆ ಹೋಗುತ್ತಾರೆಂಬ ಮಾತು ವ್ಯಾಪಕವಾಗಿ ಕೇಳಿಬಂದಿತ್ತು. ಆದರೆ, ಸ್ವತಃ ಪಾಟೀಲರೇ ಇದನ್ನು ನಿರಾಕರಿಸಿ, ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸುತ್ತಲೇ ಬಂದಿದ್ದರು. ಹೀಗಾಗಿ ಈ ಬಾರಿ ಅವರಿಗೆ ಅವಕಾಶ ನೀಡಬಹುದು ಎನ್ನಲಾಗುತ್ತಿದೆ.

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್‌ನಿಂದ ಬಿ.ಸಿ. ಪಾಟೀಲ ಒಬ್ಬರೇ ಗೆದ್ದಿರುವುದರಿಂದ ಸಹಜವಾಗಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಶಕ್ತಿ ಉಳಿಸಿಕೊಳ್ಳಲು ಅವರಿಗೆ ಸಚಿವ ಸ್ಥಾನ, ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಬಹುದೆಂಬ ಲೆಕ್ಕಾಚಾರ ಈ ಹಿಂದಿನಿಂದಲೂ ನಡೆದಿದೆ. ಆದರೆ, ಹಲವು ಬಾರಿ ಈ ಲೆಕ್ಕಾಚಾರ ತಲೆಕೆಳಗಾಗುತ್ತಲೇ ಬಂದಿದೆ. ಈ ಬಾರಿಯಾದರೂ ಇದು ನಿಜವಾಗುತ್ತದೋ ಅಥವಾ ಮತ್ತೆ ಕೈ ತಪ್ಪುತ್ತದೋ ಎಂಬುದು ಸದ್ಯದ ಕುತೂಹಲ.

ಸಂಪುಟ ವಿಸ್ತರಣೆಯಲ್ಲಿ ಆರ್‌. ಶಂಕರ್‌ ಅವರಿಗೆ ಸಚಿವ ಸ್ಥಾನ ನೀಡುವುದು ಖಚಿತವಾಗಿದೆ. ಈ ಹಿಂದೆಯೂ ಕಾಂಗ್ರೆಸ್‌ ತಾನಾಗಿಯೇ ಕರೆದು ಅವರಿಗೆ ಸಚಿವ ಸ್ಥಾನ ನೀಡಿತ್ತು. ಈಗ ಮತ್ತೆ ತಾನಾಗಿಯೇ ಕರೆದು ಸಚಿವ ಸ್ಥಾನ ನೀಡುತ್ತಿದೆ. ರಾಜಕಾರಣದಲ್ಲಿ ಇವೆಲ್ಲವೂ ಸಾಮಾನ್ಯ.
-ರಾಜು ಅಡಿವೆಪ್ಪನವರ, ಕೆಪಿಜೆಪಿ, ಜಿಲ್ಲಾಧ್ಯಕ್ಷ

ಕಾಂಗ್ರೆಸ್‌ನ ಏಕೈಕ ಶಾಸಕರಾಗಿರುವ ಬಿ.ಸಿ. ಪಾಟೀಲರಿಗೆ ಸಚಿವ ಸ್ಥಾನ ಈ ಹಿಂದೆ ಕಾರಣಾಂತರದಿಂದ ಕೈತಪ್ಪಿದೆ. ಈ ಬಾರಿ ಅವರಿಗೆ ಅವಕಾಶ ಸಿಗುತ್ತದೆಂಬ ಭರವಸೆಯಿದೆ. ದಿನೇಶ್‌ ಗುಂಡೂರಾವ್‌, ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಒತ್ತಡ ಹಾಕಿದ್ದು, ಅವರೂ ಸಕಾರಾತ್ಮಕ ಭರವಸೆ ನೀಡಿದ್ದಾರೆ.
-ಎಂ.ಎಂ. ಹಿರೇಮಠ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ

* ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.