ಸಂಪುಟ ವಿಸ್ತರಣೆ ಸರ್ಕಸ್‌ ಆಪ್ತನಿಗಾಗಿ ಲಿಂಗಾಯತರಿಗೆ ಕೊಕ್‌ ?


Team Udayavani, Aug 27, 2017, 8:10 AM IST

samputa.jpg

ಬೆಂಗಳೂರು: ಸಂಪುಟದಲ್ಲಿ ಖಾಲಿ ಇರುವ 3 ಸ್ಥಾನಗಳನ್ನು ಭರ್ತಿ ಮಾಡುವ ವಿಷಯದಲ್ಲಿ  ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ ಹೊಂದಾಣಿಕೆ ಯಾಗದ ಹಿನ್ನೆಲೆಯಲ್ಲಿ ಇನ್ನೂ ಗೊಂದಲ ಮುಂದುವರಿದಿದೆ. ಮೂರು ಸ್ಥಾನಗಳನ್ನು ಭರ್ತಿ ಮಾಡುವ ಹಿನ್ನೆಲೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೀಡಿದ್ದ ಪಟ್ಟಿಗೆ ಹೈಕಮಾಂಡ್‌ ಬಹುತೇಕ ಒಪ್ಪಿಗೆ ನೀಡಿತ್ತು ಎಂದು ಹೇಳಲಾಗಿತ್ತು.

ಎಡ-ಬಲದ ಗೊಂದಲ ನಿವಾರಣೆಯಾಗಿ ಈಗ ಸಿಎಂ ತಮ್ಮ ಪರಮಾಪ್ತ ಸಿ.ಎಂ. ಇಬ್ರಾಹಿಂರನ್ನು ಸಂಪುಟಕ್ಕೆ ಸೇರಿಸಿ ಕೊಳ್ಳಲು ಕಸರತ್ತು ನಡೆಸಿದ್ದಾರೆನ್ನಲಾಗಿದೆ. ಅದಕ್ಕಾಗಿ ಲಿಂಗಾಯತರಿಗಿದ್ದ ಅವಕಾಶ ತಪ್ಪಿಸಲು ಕಾರ್ಯತಂತ್ರ ಹೆಣೆದಿದ್ದು, ಅದಕ್ಕೆ ಆಪ್ತ ಸಚಿವರಿಂದಲೇ ವಿರೋಧ ವ್ಯಕ್ತವಾಗಿದೆ ಎನ್ನಲಾಗಿದೆ.

ಹೈಕಮಾಂಡ್‌ ಮುಂದೆ ನೀಡಿರುವ ಪಟ್ಟಿಯ ಪ್ರಕಾರ ಕುರುಬ ಸಮುದಾಯದ ಎಚ್‌.ಎಂ. ರೇವಣ್ಣ, ದಲಿತ ಸಮುದಾಯದ ಆರ್‌.ಬಿ. ತಿಮ್ಮಾಪುರ ಅಥವಾ ನರೇಂದ್ರ ಸ್ವಾಮಿ ಹಾಗೂ ಲಿಂಗಾಯತ ಸಮು ದಾಯದ ಷಡಕ್ಷರಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಮುಖ್ಯಮಂತ್ರಿ ಹೈಕ ಮಾಂಡ್‌ನಿಂದ ಒಪ್ಪಿಗೆ ಪಡೆದುಕೊಂಡಿದ್ದರು. ಎಡ- ಬಲದ ಗೊಂದಲ ನಿವಾರಿಸಿ ದಲಿತ ಸಮುದಾಯದ ಎಡ ಪಂಗಡಕ್ಕೆ ಸೇರಿರುವ ಆರ್‌.ಬಿ. ತಿಮ್ಮಾಪುರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಮುಖ್ಯಮಂತ್ರಿ ತೀರ್ಮಾನಿಸಿದ್ದು, ಈಗ ಲಿಂಗಾಯತ ಸಮುದಾಯದ ಷಡಕ್ಷರಿ ಅವರಿಗೆ ಕೈ ತಪ್ಪುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸಿ.ಎಂ. ಇಬ್ರಾಹಿಂಗೆ ಸ್ಥಾನ ಕಲ್ಪಿಸಲು ಲಿಂಗಾಯತ ಶಾಸಕರಿಗೆ ಸ್ಥಾನ ತಪ್ಪಿಸುತ್ತಿರುವ ಬಗ್ಗೆ ಲಿಂಗಾಯತ ಸಚಿವರು ವಿರೋಧ ವ್ಯಕ್ತ ಪಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದೇ ಇರುವುದರಿಂದ ಸಂಪುಟ ವಿಸ್ತರಣೆ ಮುಂದೂಡಲಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ. ಇದುವರೆಗೂ ಯಾವ ಸಮುದಾಯದಿಂದ ಸಚಿವ ಸ್ಥಾನ ಖಾಲಿಯಾಗಿದೆ ಅದೇ ಸಮುದಾ ಯದವ ರಿಗೆ ಸಚಿವ ಸ್ಥಾನ ನೀಡುವು ದಾಗಿ ಹೇಳಿಕೊಂಡು ಬಂದಿದ್ದ ಸಿಎಂ ಸಿದ್ದರಾಮಯ್ಯ, ಈಗ ತಮ್ಮ ಆಪ್ತ ಇಬ್ರಾಹಿಂಗಾಗಿ ಷಡಕ್ಷರಿಗೆ ತಪ್ಪಿ ಸುತ್ತಿರುವುದು ಲಿಂಗಾಯತ ಸಚಿವರ ಅಸಮಾಧಾನಕ್ಕೆ ಕಾರಣವಾಗಿದೆ.

ಚುನಾವಣೆ ವರ್ಷದಲ್ಲಿ ಲಿಂಗಾಯತ ರಿಗೆ ಸಚಿವ ಸ್ಥಾನ ತಪ್ಪಿಸಿದರೆ, ಅದೆ ದೊಡ್ಡ ವಿಷಯವಾಗಿ ಲಿಂಗಾಯತ ಸಮುದಾಯದ ಮುನಿಸಿಗೆ ಕಾರಣವಾ ಗಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕಾರಣಕ್ಕಾಗಿ ಸಿ.ಎಂ. ಇಬ್ರಾಹಿಂಗೆ ಸ್ಥಾನ ಕಲ್ಪಿಸಲು ಕುರುಬ ಸಮುದಾಯದ ಎಚ್‌.ಎಂ. ರೇವಣ್ಣ ಅವರನ್ನು ಕೈ ಬಿಡುವ ಆಲೋಚನೆಯನ್ನೂ ಮುಖ್ಯಮಂತ್ರಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈಗಾಗಲೇ ಎಚ್‌. ವಿಶ್ವನಾಥ ಪಕ್ಷದಿಂದ ಹೊರ ಹೋಗಿರುವುದರಿಂದ ಎಚ್‌.ಎಂ. ರೇವಣ್ಣಗೆ ಭರವಸೆ ನೀಡಿದಂತೆ ಸಚಿವ ಸ್ಥಾನ ನೀಡದಿದ್ದರೆ, ಕುರುಬ ಸಮುದಾಯದ ಮುನಿಸಿಗೆ ಕಾರಣವಾಗುವ ಆತಂಕ ಇರು ವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಿಗೆ ಸ್ಥಾನ ಕಲ್ಪಿಸಲು ಸಂಪುಟ ವಿಸ್ತರಣೆ ಮುಂದೂಡುತ್ತಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್‌ ವಲಯದಲ್ಲಿ ಹರಿದಾಡುತ್ತಿವೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.