ಸಚಿವ ಸಂಪುಟ ಪುನರ್ ರಚನೆ ಖಚಿತ: ಕಟೀಲು
Team Udayavani, Feb 16, 2020, 3:02 AM IST
ದಾವಣಗೆರೆ: ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸಚಿವ ಸಂಪುಟ ಪುನರ್ ರಚನೆ ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲು ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ನಮ್ಮಲ್ಲಿ ಮೂಲ ಮತ್ತು ವಲಸಿಗ ಬಿಜೆಪಿಗರು ಎಂಬುದಿಲ್ಲ. ಎಲ್ಲ ಒಂದೇ. ಯಾರಲ್ಲಿಯೂ ಭೇದಭಾವ ಇಲ್ಲ ಎಂದರು. ಬಳ್ಳಾರಿಯಲ್ಲಿ ಸಚಿವ ಆರ್.ಅಶೋಕ್ ಪುತ್ರನ ಕಾರು ಅಪಘಾತ ಪ್ರಕರಣ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಟೀಲು, ಸಚಿವ ಅಶೋಕ ಅವರ ಪುತ್ರ ಕಾರಿನಲ್ಲಿ ಇರಲಿಲ್ಲ ಎನ್ನುವ ಮಾಹಿತಿ ಇದೆ ಎಂದರು.