ಸಂಪುಟ ವಿಸ್ತರಣೆ: ಬಹಿರಂಗವಾಗಿ ಮಾತನಾಡುವುದನ್ನು ಪಕ್ಷ ಗಂಭೀರವಾಗಿ ಪರಿಗಣಿಸುತ್ತದೆ
Team Udayavani, Dec 4, 2020, 11:53 PM IST
ಸಾಂದರ್ಭಿಕ ಚಿತ್ರ
ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ಶಾಸಕರು ಅಥವಾ ಮುಖಂಡರು ಬಹಿರಂಗವಾಗಿ ಮಾತನಾಡುವುದನ್ನು ಪಕ್ಷ ಗಂಭೀರವಾಗಿ ಪರಿಗಣಿಸುತ್ತದೆ. ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದರು. ನಗರದಲ್ಲಿ ಶುಕ್ರವಾರ ರಾತ್ರಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯ ನಂತರ ಸುದ್ದಿಗಾರರ ಜೊತೆ ಮಾತಮಾಡಿದ ಅವರು
ಸಚಿವ ಸಂಪುಟ ವಿಸ್ತರಣೆ ಕುರಿತು ಕೋರ್ ಕಮಿಟಿಯಲ್ಲಿ ಯಾವುದೇ ಚರ್ಚೆ ಆಗಿಲ್ಲ. ಅದು ಮುಖ್ಯಮಂತ್ರಿಯವರಿಗೆ ಇರುವ ಪರಮಾಧಿಕಾರ. ಈ ವಿಷಯದಲ್ಲಿ ಅವರು ಕೇಂದ್ರದ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಆದ್ದರಿಂದ ಶಾಸಕರು ಬಹಿರಂಗ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಸಭೆ ಸೂಕ್ಷ್ಮವಾಗಿ ಎಚ್ಚರಿಕೆ ನೀಡಿದೆ ಎಂದು ಲಿಂಬಾವಳಿ ಹೇಳಿದರು.
ಸಭೆಯಲ್ಲಿ ಯಾರು ಮಂತ್ರಿ ಆಗಬೇಕು ಎನ್ನುವ ಬಗ್ಗೆಯೂ ಚರ್ಚೆಯಾಗಿಲ್ಲ. ವಿಸ್ತರಣೆ ಹಾಗೂ ದಿನಾಂಕ ನಿಗದಿ ಮಾಡುವ ಅಧಿಕಾರ ಸಹ ಮುಖ್ಯಮಂತ್ರಿಯವರದ್ದಾಗಿದೆ ಎಂದರು.
ಕೋರ್ ಕಮಿಟಿ ಸಭೆಯಲ್ಲಿ ಪ್ರಮುಖವಾಗಿ ನಾಲ್ಕಾರು ವಿಷಯಗಳ ಬಗ್ಗೆ ಚರ್ಚೆಯಾಯಿತು. ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಪಕ್ಷದ ಉಸ್ತುವಾರಿಗಳು ಚುನಾವಣೆ ಜವಾಬ್ದಾರಿ ವಹಿಸಿಕೊಂಡಿದ್ದಾರೆ ಎಂದರು.
ಡಿ.5ರಂದು ನಡೆಯುವ ರಾಜ್ಯ ಕಾರ್ಯಕಾರಿಣಿಯಲ್ಲಿ ಎರಡು ಮಹತ್ವದ ವಿಷಯಗಳ ಬಗ್ಗೆ ನಿರ್ಣಯ ಅಂಗೀಕರಿಸಿ ಸರ್ಕಾರಕ್ಕೆ ಕಳುಹಿಸಲಾಗುವುದು. ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ತಡೆಗೆ ಕಾಯ್ದೆ ಮಾಡುವಂತೆ ನಿರ್ಣಯ ಅಂಗೀಕರಿಸಕಾಗುವದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…