Cafe blast; ಸರಕಾರ ಮತ್ತು ಪೊಲೀಸ್ ಗುಪ್ತಚರ ವೈಫಲ್ಯ ಸ್ಪಷ್ಟವಾಗಿದೆ: ಬಿಜೆಪಿ
ಭದ್ರತೆಯ 'ಗ್ಯಾರಂಟಿ' ಖಾತ್ರಿಪಡಿಸಿ... ಯಕ್ಷ ಪ್ರಶ್ನೆ ಹುಟ್ಟು ಹಾಕಿದ 'ಮೈ ಬ್ರದರ್' ಪಾಲಿಸಿ
Team Udayavani, Mar 1, 2024, 9:13 PM IST
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟ ಘಟನೆ ನಡೆದಿರುವುದು ಸರಕಾರ ಮತ್ತು ಪೊಲೀಸ್ ಗುಪ್ತಚರ ವೈಫಲ್ಯವು ಸ್ಪಷ್ಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಈ ಸರ್ಕಾರವು ರಾಜ್ಯವನ್ನು ಅವ್ಯವಸ್ಥೆಗೆ ತಳ್ಳುತ್ತಿದೆ, ಇದು ಸಮಾಜವಿರೋಧಿಗಳಿಗೆ ಸುರಕ್ಷಿತ ಸ್ವರ್ಗವಾಗಿದೆ. ಅಪರಾಧಗಳನ್ನು ಹೆಚ್ಚಿಸುತ್ತಿದೆ. ಇಂದು ನಡೆದ ಸ್ಫೋಟ ಘಟನೆ ವಿಧಾನಸೌಧದಲ್ಲಿ ಪಾಕಿಸ್ಥಾನ ಜಿಂದಾಬಾದ್ ಹೇಳಿಕೆ ನೀಡಿದುದರ ಮುಂದುವರಿದ ಭಾಗವಾಗಿದೆ. ಅಲ್ಪಸಂಖ್ಯಾತರನ್ನು ಓಲೈಸುವ, ತುಷ್ಟೀಕರಣ ನೀತಿ ರಾಜ್ಯಕ್ಕೆ ಗಂಡಾಂತರ ತಂದಿಟ್ಟಿದೆ’ ಎಂದು ಆರೋಪಿಸಿದರು.
ಎಫ್ ಎಸ್ ಎಲ್ ವರದಿಯಲ್ಲಿ ‘ಪಾಕಿಸ್ಥಾನ್ ಜಿಂದಾಬಾದ್’ ಎಂದು ಹೇಳಿರುವ ಬಗ್ಗೆ ಖಚಿತವಾದ ವರದಿ ಬಂದರೂ ಅದನ್ನು ಬೋಗಸ್ ಮಾಡಿ ಮತ್ತೊಂದು ರಿಪೋರ್ಟ್ ಕೊಡುವಂತಹ ಕೆಲಸ ಸರಕಾರ ಮಾಡುವ ಅನುಮಾನ ನಮಗಿದೆ ಎಂದರು.
‘ಶಿವಮೊಗ್ಗದಲ್ಲಿ ಟಿಪ್ಪು ಜಯಂತಿಯ ಮುಖೇನ ಹಿಂದೂಗಳ ಮನೆಗಳಿಗೆ ನುಗ್ಗಿ ದಾಂಧಲೆ ನಡೆಸಲಾಗಿದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣದಲ್ಲಿ ಭಾಗಿಯಾದ ಅಪರಾಧಿಗಳನ್ನು ಕಾಂಗ್ರೆಸ್ ಶಾಸಕರೇ ನಿರಪರಾಧಿಗಳು, ಅಮಾಯಕರು ಅವರ ವಿರುದ್ಧ ಕೇಸ್ ಹಿಂಪಡಿಯಿರಿ ಎಂದು ಗೃಹ ಸಚಿವರಿಗೆ ಪತ್ರ ಬರೆದಿದ್ದರು’ಎಂದರು.
ಕಾಂಗ್ರೆಸ್ ಸಂಸದನ ಹಿಂಬಾಲಕರು ಪಾಕ್ ಪರ ಘೋಷಣೆ ಕೂಗಿ ಇಡೀ ದೇಶಕ್ಕೆ ಆತಂಕ ಪಡುವ ಕೆಲಸ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ‘ಮೈ ಬ್ರದರ್ ಪಾಲಿಸಿ’ಯು ರಾಜ್ಯದ ಜನರ ರಕ್ಷಣೆ ವಿಚಾರದಲ್ಲಿ ದೊಡ್ಡ ಯಕ್ಷ ಪ್ರಶ್ನೆ ಹುಟ್ಟು ಹಾಕಿದೆ ಎಂದರು.
“ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೆ ಸಮಗ್ರ ತನಿಖೆಯನ್ನು ನಡೆಸಿ ಈ ಅಂಶಗಳನ್ನು ಮೂಲದಿಂದ ನಿರ್ಮೂಲನೆ ಮಾಡುವಂತೆ ನಾವು ಪೊಲೀಸರನ್ನು ಬಲವಾಗಿ ಒತ್ತಾಯಿಸುತ್ತೇವೆ” ಎಂದರು.
ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಮತ್ತೊಂದು ಜ್ವಲಂತ ಉದಾಹರಣೆಯಾಗಿದೆ ಎಂದರು.
“ಕಾಂಗ್ರೆಸ್ ಎಲ್ಲಿ ಅಧಿಕಾರಕ್ಕೆ ಬಂದರೂ, ಭಯೋತ್ಪಾದಕರು ಮತ್ತು ದೇಶವಿರೋಧಿಗಳು ಅದರ ನಿರ್ಲಜ್ಜ ಮತ್ತು ಕಡಿವಾಣವಿಲ್ಲದ ಓಲೈಕೆಯ ನೀತಿಯಿಂದಾಗಿ ಧೈರ್ಯಶಾಲಿಯಾಗುತ್ತಾರೆ. ಸರ್ಕಾರವು ಮೊದಲು ಕರ್ನಾಟಕದ ಜನರಿಗೆ ಸುರಕ್ಷತೆ ಮತ್ತು ಭದ್ರತೆಯ ‘ಗ್ಯಾರಂಟಿ’ಯನ್ನು ಖಾತ್ರಿಪಡಿಸಬೇಕು” ಎಂದರು.
ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಘಟನೆಯ ಬಗ್ಗೆ ತನಿಖೆ ನಡೆಸಲು ಮತ್ತು ಬೆಂಗಳೂರಿನ ಜನರಿಗೆ ಸ್ಪಷ್ಟ ಉತ್ತರವನ್ನು ನೀಡಲು ಪೊಲೀಸರು ಮತ್ತು ತನಿಖಾ ಸಂಸ್ಥೆಗಳಿಗೆ ಮುಕ್ತ ಹಸ್ತವನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ