ಕುಂದಗೋಳ “ಕೈ’ ವಶಕ್ಕೆ ಬೂತ್‌ ಮಟ್ಟದ ಜಾತಿ ಲೆಕ್ಕ


Team Udayavani, May 2, 2019, 3:00 AM IST

Udayavani Kannada Newspaper

ಬೆಂಗಳೂರು: ಕುಂದಗೋಳ ವಿಧಾನಸಭೆಯ ಉಪ ಚುನಾವಣೆಯನ್ನು ಶತಾಯ ಗತಾಯ ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್‌ ನಾಯಕರು, ಕ್ಷೇತ್ರದಲ್ಲಿ ಗ್ರಾಮ ಪಂಚಾಯತಿಯ ಬೂತ್‌ ಮಟ್ಟದಲ್ಲಿ ಸಚಿವರಾದಿಯಾಗಿ ಜಾತಿ ಲೆಕ್ಕಾಚಾರದಲ್ಲಿ ಮತದಾರರನ್ನು ಸೆಳೆಯಲು ಯೋಜನೆ ರೂಪಿಸಿದ್ದಾರೆ.

ಕ್ಷೇತ್ರದಲ್ಲಿನ ಪ್ರತಿ ಗ್ರಾಮ ಪಂಚಾಯತಿ ಹಾಗೂ ಗ್ರಾಮಗಳಲ್ಲಿನ ಬೂತ್‌ ಮಟ್ಟದಲ್ಲಿ ಜಾತಿ ಲೆಕ್ಕಾಚಾರವನ್ನು ನೀಡುವಂತೆ ಪಕ್ಷದ ಉಸ್ತುವಾರಿ ಕಾರ್ಯದರ್ಶಿ ಮಾಣಿಕ್ಯಂ ಠಾಕೂರ್‌, ಕುಂದಗೋಳ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈಗಾಗಲೇ ಕ್ಷೇತ್ರದಲ್ಲಿ ಉಸ್ತುವಾರಿಯನ್ನಾಗಿ ಇಬ್ಬರು ಹಿರಿಯ ಸಚಿವರು, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಕೆ. ಪಾಟೀಲ್‌, ರಾಜ್ಯ ಉಸ್ತುವಾರಿ ಕಾರ್ಯದರ್ಶಿ ಮಾಣಿಕ್ಯಂ ಠಾಕೂರ್‌, ಜೊತೆಗೆ ಮಾಜಿ ಸಚಿವರಾದ ವಿನಯ್‌ ಕುಲಕರ್ಣಿ, ಸಂತೋಷ್‌ ಲಾಡ್‌ ಅವರನ್ನು ನೇಮಿಸಲಾಗಿದೆ. ಉಸ್ತುವಾರಿ ಸಂಯೋಜಕರಾಗಿ ಐವರು ಕೆಪಿಸಿಸಿ ಪದಾಧಿಕಾರಿಗಳನ್ನು ನೇಮಿಸಲಾಗಿದೆ.

ಇವರ ಹೊರತಾಗಿ ಪ್ರತಿ ಜಿಲ್ಲಾ ಪಂಚಾಯತಿಗೆ ಒಬ್ಬರು ಸಚಿವರು, ಇಬ್ಬರು ಶಾಸಕರು ಹಾಗೂ ಒಬ್ಬರು ಪಕ್ಷದ ಪದಾಧಿಕಾರಿಯನ್ನು ನೇಮಿಸಲು ನಿರ್ಧರಿಸಲಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಕುಂದಗೋಳ ಹಾಗೂ ಛಬ್ಬಿ ಬ್ಲಾಕ್‌ ಕಾಂಗ್ರೆಸ್‌ ಘಟಕಗಳಿದ್ದು,

ಎರಡೂ ಬ್ಲಾಕ್‌ ವ್ಯಾಪ್ತಿಯಲ್ಲಿ ಬರುವ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಹಳ್ಳಿಯ ಬೂತ್‌ ಮಟ್ಟದಲ್ಲಿ ಯಾವ ಜಾತಿಯ ಜನರು ಎಷ್ಟು ಪ್ರಮಾಣದಲ್ಲಿದ್ದಾರೆ, ಎರಡನೇ ಹಾಗೂ ಮೂರನೇ ಸ್ಥಾನದಲ್ಲಿ ಯಾವ ಸಮುದಾಯದ ಜನರಿದ್ದಾರೆ ಎನ್ನುವುದನ್ನು ಅಂಕಿ-ಅಂಶ ಸಮೇತ ಮಾಹಿತಿ ಕಲೆ ಹಾಕಲು ಸೂಚಿಲಾಗಿದೆ.

ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಆರು ಜಿಲ್ಲಾ ಪಂಚಾಯತಿಗಳಿದ್ದು, 40 ಗ್ರಾಮ ಪಂಚಾಯತಿಗಳು, 87 ಗ್ರಾಮಗಳು ಹಾಗೂ 214 ಬೂತ್‌ಗಳಿವೆ. ಕ್ಷೇತ್ರದಲ್ಲಿ ಒಟ್ಟು 1,89,281 ಮತದಾರರಿದ್ದು, 29,000 ಕುಟುಂಬಗಳಿವೆ.

ಅವುಗಳಲ್ಲಿ ಕ್ಷೇತ್ರದ ಪ್ರತಿಯೊಂದು ಸಮುದಾಯದ ಜಾತಿ ಲೆಕ್ಕ ಹಾಕಿಕೊಂಡಿದ್ದು, ಪಂಚಮಸಾಲಿ ಸಮುದಾಯ 52,477, ಅಲ್ಪಸಂಖ್ಯಾತರು-36,679, ಕುರುಬರು-34,407, ಪರಿಶಿಷ್ಟ ಪಂಗಡ-16,899, ಪರಿಶಿಷ್ಠ ಜಾತಿ-14,608, ಸಾದರು-14,227, ಗಾಣಿಗೇರ್‌-12,084, ಇತರ ಸಮುದಾಯದವರು 7900 ಮತದಾರರಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಿ.ಎಸ್‌.ಶಿವಳ್ಳಿಯವರು ಅತಿ ಕಡಿಮೆ ಅಂತರದಿಂದ ಗೆಲುವು ಸಾಧಿಸಿದ್ದರಿಂದ ಪ್ರತಿ ಮನೆಯ ಪ್ರತಿ ಮತವನ್ನೂ ಗಂಭೀರವಾಗಿ ಪರಿಗಣಿಸಿ ಪಕ್ಷದ ಅಭ್ಯರ್ಥಿಗೆ ಹಾಕಿಸಲು ಜಾತಿ ಲೆಕ್ಕವನ್ನೇ ಪ್ರಮುಖವಾಗಿ ಕಾಂಗ್ರೆಸ್‌ ನಾಯಕರು ನಂಬಿಕೊಂಡಿದ್ದಾರೆ.

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.