ಮಾಜಿ ನಕ್ಸಲ್ ನೂರ್ ಜುಲ್ಫಿಕರ್ ಜಾಮೀನು ರದ್ದತಿಗೆ ಅರ್ಜಿ ಸಲ್ಲಿಕೆ
Team Udayavani, Mar 23, 2017, 11:22 AM IST
ಚಿಕ್ಕಮಗಳೂರು: ನಕ್ಸಲ್ ಶರಣಾಗತಿ ಪ್ಯಾಕೇಜ್ನಡಿ ಶರಣಾಗುವಾಗ ಹಾಕಿದ್ದ ಷರತ್ತುಗಳನ್ನು ಉಲ್ಲಂ ಸಿದ ಆರೋಪದ ಮೇಲೆ ಮಾಜಿ ನಕ್ಸಲ್ ನೂರ್ ಜುಲ್ಫಿàಕರ್ಗೆ ನೀಡಿರುವ ಜಾಮೀನನ್ನು ರದ್ದುಪಡಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ.ಅಣ್ಣಾಮಲೈ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕ್ಸಲ್ ಸಂಘಟನೆ ತೊರೆದು ಶರಣಾಗತರಾದಾಗ ಇವರಿಗೆ ನ್ಯಾಯಾಲಯ ಜಾಮೀನು ನೀಡುವಾಗ ಯಾವುದೇ ಕಾರಣಕ್ಕೂ ಚಿತ್ರದುರ್ಗ ಬಿಟ್ಟು ಹೊರಗೆ ಹೋಗಬಾರದು. ಅವರು ಮಾಡುತ್ತಿರುವ ಚಟುವಟಿಕೆಗಳ ಬಗ್ಗೆ ಅಲ್ಲಿನ ಠಾಣೆಗೆ ಮಾಹಿತಿ ನೀಡಬೇಕೆಂದು ಷರತ್ತು ವಿಧಿಸಲಾಗಿತ್ತು. ಆದರೆ ನೂರ್ ಜುಲ್ಫಿàಕರ್ ರಾಜ್ಯದೆಲ್ಲೆಡೆ ಓಡಾಡುತ್ತಿದ್ದು, ಪ್ರತಿಭಟನೆಗಳಲ್ಲಿಯೂ ಭಾಗವಹಿಸುತ್ತಿದ್ದಾರೆ. ಜೊತೆಗೆ ತಮ್ಮ ಕಾರ್ಯಚಟುವಟಿಕೆಗಳ ಬಗ್ಗೆ ಸ್ಥಳೀಯ ಠಾಣೆಗೆ ಮಾಹಿತಿ ನೀಡುತ್ತಿಲ್ಲ. ಹೀಗಾಗಿ ಶರಣಾಗುವಾಗ ಹಾಕಿದ್ದ ಷರತ್ತುಗಳನ್ನು ಉಲ್ಲಂ ಸಿರುವುದರಿಂದ ಜಾಮೀನು ರದ್ದುಪಡಿಸುವಂತೆ ಎಡಪಂಥೀಯ ತೀವ್ರಗಾಮಿಗಳ ಶರಣಾಗತ ಜಿಲ್ಲಾ ಸಮಿತಿಯ
ಮೂಲಕ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ ಎಂದರು. ಶರಣಾದ ನಕ್ಸಲರ ಚಟುವಟಿಕೆಗಳನ್ನು 3 ವರ್ಷಗಳ ಕಾಲ ಗಮನಿಸಲು ಓರ್ವ ಉಸ್ತುವಾರಿ ಅಧಿಕಾರಿ ನೇಮಿಸಲಾಗುತ್ತದೆ. ಅದೇ ರೀತಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ನೇಮಕವಾಗಿದ್ದ ಕೊಪ್ಪ ಡಿವೈಎಸ್ಪಿ ನೀಡಿದ ವರದಿ ಆಧರಿಸಿ ನೂರ್ ಜುಲ್ಫಿàಕರ್ರ ಜಾಮೀನು ರದ್ದುಪಡಿಸಲು ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ