ಅಭ್ಯರ್ಥಿ ಆಯ್ಕೆ ವರಿಷ್ಠರಿಗೆ ಬಿಟ್ಟದ್ದು, ಬಿಜೆಪಿ ಮಾತಿನ ಮೇಲೆ ನಿಲ್ಲುವ ಪಕ್ಷ: ಮುನಿರತ್ನ
Team Udayavani, Sep 30, 2020, 11:00 AM IST
ಬೆಂಗಳೂರು: ಅಭ್ಯರ್ಥಿ ಯಾರಾಗುತ್ತಾರೆ ಎಂಬ ಪ್ರೆಶ್ನೆಯನ್ನು ವರಿಷ್ಠರಿಗೆ ಕೇಳಬೇಕು. ಆದರೇ ಬಂದವರಿಗೆ ಖಂಡಿತಾ ಅನ್ಯಾವಾಗಲ್ಲ ಎಂದು ಅಮಿತ್ ಶಾ ತಿಳಿಸಿದ್ದಾರೆ. ಬಿಜೆಪಿ ಎಂದಿಗೂ ಮಾತಿನ ಮೇಲೆ ನಿಲ್ಲುವ ಪಕ್ಷ ಎಂದು, ಆರ್.ಆರ್ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಮುನಿರತ್ನ ಹೇಳಿದ್ದಾರೆ.
ರಾಜ್ಯದಲ್ಲಿ ಉಪಚುನಾವಣೆಗೆ ಅಖಾಡ ಸಜ್ಜಾಗಿದ್ದು, ಆರ್.ಆರ್ ನಗರದಲ್ಲಿ ಮುನಿರತ್ನ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ನವೆಂಬರ್ 3ರಂದು ಮತದಾನ ನಡೆಯಲಿದ್ದು ನವೆಂಬರ್ 10ರಂದು ಫಲಿತಾಂಶ ಹೊರಬೀಳಲಿದೆ, ಈಗಾಗಲೇ ರಾಜರಾಜೇಶ್ವರಿ ನಗರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಈ ಕುರಿತು ಮಾತನಾಡಿದ ಮುನಿರತ್ನ, ನಾವೆಲ್ಲಾ ಬಿಜೆಪಿ ಸೇರಿದಾಗ ನೀವೇ ಅಭ್ಯರ್ಥಿ ಎಂದು ಮಾತುಕೊಟ್ಟಿದ್ದರು. ಆದರೂ ಅಭ್ಯರ್ಥಿ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.
ಸಿಎಂ ಭೇಟಿಯಾಗುತ್ತೀರಾ ಅನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಇವತ್ತು ನನ್ನ ಕ್ಷೇತ್ರದ ಕಾರ್ಯಕರ್ತರು, ಮುಖಂಡರನ್ನು ಭೇಟಿ ಮಾಡುತ್ತಿದ್ದೇನೆ. ಬಿಬಿಎಂಪಿ ಹಾಲಿ, ಮಾಜಿ ಸದಸ್ಯರು ಜೊತೆಗೆ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರೂ ನನ್ನ ಜೊತೆಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.