ಅಭ್ಯರ್ಥಿಗಳು-ಕೆಪಿಎಸ್ಸಿ ಸದಸ್ಯರ ಕರೆ ವಿನಿಮಯ
Team Udayavani, Nov 9, 2017, 9:35 AM IST
ಬೆಂಗಳೂರು: 2011ನೇ ಸಾಲಿನ ಕೆಪಿಎಸ್ಸಿ ಪರೀಕ್ಷೆಯಲ್ಲಿ ಸಂದರ್ಶನಕ್ಕೆ ಆಯ್ಕೆಯಾದ 46 ಮಂದಿ ಅಭ್ಯರ್ಥಿಗಳು ಹಾಗೂ ಕೆಪಿಎಸ್ಸಿ ಸದಸ್ಯರ ನಡುವೆ ದೂರವಾಣಿ ಕರೆ ವಿನಿಮಯವಾಗಿದೆ ಎಂದು ರಾಜ್ಯ ಸರ್ಕಾರ ಬುಧವಾರ ಹೈಕೋರ್ಟ್ಗೆ ತಿಳಿಸಿದೆ.
“ಕೆಪಿಎಸ್ಸಿ ನೇಮಕಾತಿ ರದ್ದುಕೋರಿ ಸಲ್ಲಿಸಿರುವ ಪಿಐಎಲ್ ವಿಚಾರಣೆ ಅಕ್ರಮದಲ್ಲಿ ಭಾಗಿಯಾದ ಅಭ್ಯರ್ಥಿಗಳ ಬಗ್ಗೆ ಮಾಹಿತಿ ಇದೆಯೇ’ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್ ದಿನೇಶ್ಕುಮಾರ್ ಅವರಿದ್ದ ವಿಭಾಗೀಯ ಪೀಠ ಸರ್ಕಾರದ ಪರ ವಕೀಲರಿಗೆ ಪ್ರಶ್ನಿಸಿತು. ಈ ವೇಳೆ ಸರ್ಕಾರದ ಪರ ವಕೀಲರು, ಸಂದರ್ಶನಕ್ಕೆ ಆಯ್ಕೆಯಾದ 46 ಅಭ್ಯರ್ಥಿಗಳು ಹಾಗೂ ಕೆಪಿಎಸ್ಸಿ ಸದಸ್ಯರ ನಡುವೆ ಹಲವು ಬಾರಿ ದೂರವಾಣಿ ಕರೆಗಳ ವಿನಿಮಯವಾಗಿದೆ ಎಂದು ಸಿಐಡಿ ವರದಿಯಲ್ಲಿದೆ. ಈ ಪಟ್ಟಿಯಲ್ಲಿ ಡಾ.ಮೈತ್ರಿಯಾ ಅವರೂ ಇದ್ದಾರೆ. ಆದರೆ, ಯಾರು, ಯಾರಿಗೆ, ಯಾವ ಉದ್ದೇಶಕ್ಕೆ ಕರೆ ಮಾಡಿದ್ದರು ಎಂಬ ಬಗ್ಗೆ ನಿಖರತೆಯಿಲ್ಲ. ಸಂದರ್ಶನಕ್ಕೆ ಹಾಜರಾಗಬೇಕೆಂಬ ಮಾಹಿತಿ ನೀಡಲು ಕರೆ ಮಾಡಿರಬಹುದು
ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನೇಮಕಾತಿ ಪ್ರಕ್ರಿಯೆಯ ಅಂಗವಾಗಿ ಔಪಚಾರಿಕ ಕರೆಯೂ
ಮಾಡಿರಬಹುದು ಎಂದಿತು.
ಆಯ್ಕೆಯಾದ ಅಭ್ಯರ್ಥಿಗಳ ಪರ ವಾದಿಸಿದ ವಕೀಲರು, ಅಕ್ರಮದಲ್ಲಿ ಭಾಗಿಯಾದವರನ್ನು ಪತ್ತೆ ಹಚ್ಚುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಲಿದೆ. ಆದರೆ, ತಾವು ನೇಮಕಾತಿ ಹೊಂದಿಲ್ಲ ಎಂಬ ಕಾರಣಕ್ಕೆ ನೇಮಕಾತಿ ರದ್ದುಪಡಿಸಲು ಕೋರಲಾಗಿದೆ. ಮೇಲ್ನೋಟಕ್ಕೆ ಅಕ್ರಮ ನಡೆದಿದೆ ಎಂಬ ಸಿಐಡಿ ವರದಿ ಇಟ್ಟುಕೊಂಡೇ ಇಡೀ ನೇಮಕಾತಿ ಪ್ರಕ್ರಿಯೆಯನ್ನು ರದ್ದು ಪಡಿಸುವಂತೆ ಕೋರಿರುವುದು
ದುರುದ್ದೇಶದಿಂದ ಕೂಡಿದೆ. ಅರ್ಜಿದಾರರಲ್ಲಿ ಕೆಲವರು ಲಿಖೀತ ಪರೀಕ್ಷೆಯಲ್ಲಿಯೇ ಉತ್ತೀರ್ಣರಾಗಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಜೊತೆಗೆ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ ತಕ್ಷಣ ಸಾಂವಿಧಾನಿಕ ಸಂಸ್ಥೆಯ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹರ್ಯಾಣ ಹೈಕೋರ್ಟ್ನ ಹಲವು ತೀರ್ಪುಗಳನ್ನು ಉಲ್ಲೇಖೀಸಿದರು. ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ ಗುರುವಾರಕ್ಕೆ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ