ಕಾರು ಡಿಕ್ಕಿ: ಸ್ಥಳದಲ್ಲೇ ನಾಲ್ವರ ದುರ್ಮರಣ
Team Udayavani, Feb 14, 2019, 12:06 AM IST
ಹೊನ್ನಾಳಿ: ಕಾರಿನ ಟಯರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದವರಿಗೆ ಡಿಕ್ಕಿಯಾಗಿ ಮೂವರು ಹಾಗೂ ಕಾರು ಚಲಾಯಿಸುತ್ತಿದ್ದ ವ್ಯಕ್ತಿಯೂ ಮೃತಪಟ್ಟ ಘಟನೆ ತಾಲೂಕಿನ ಹರಳಹಳ್ಳಿಯಲ್ಲಿ ಸಂಭವಿಸಿದೆ.
ಹರಳಹಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ಬುಧವಾರ ಸಂಜೆ 5.30ರ ಸುಮಾರಿಗೆ ಅವಘಡ ಸಂಭವಿಸಿದ್ದು ಅರಬಗಟ್ಟೆ ಗ್ರಾಮದ ರಮೇಶ್ (38), ಉಷಾ (28), ಚಂದ್ರು (6) ಮತ್ತು ಕಾರು ಚಲಾಯಿಸುತ್ತಿದ್ದ ದಾವಣಗೆರೆಯ ಎಸ್ಸೆಸ್ ಲೇಔಟ್ ನಿವಾಸಿ, ಗುತ್ತಿಗೆದಾರಜಯದೇವಯ್ಯ ಹಿರೇಮಠ(45) ಮೃತಪಟ್ಟಿದ್ದಾರೆ.
ಬಸ್ಸಿಗಾಗಿ ಕಾಯುತ್ತಿದ್ದರು: ಮೃತಪಟ್ಟ ಮೂವರು ಅರಬಗಟ್ಟೆ ಗ್ರಾಮದ ಚೀಲೋಡಿ ಮನೆತನದ ಒಂದೇ ಕುಟುಂಬಕ್ಕೆ ಸೇರಿದವರು. ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮಕ್ಕೆ ತೆರಳಲು ಬಸ್ಸಿಗಾಗಿ ಕಾಯುತ್ತ ನಿಂತಿದ್ದರು. ಇದೇ ಮಾರ್ಗದಲ್ಲಿ ಗುತ್ತಿಗೆದಾರ ಜಯದೇವಯ್ಯ ತಮ್ಮ ಕಾರಿನಲ್ಲಿ ಶಿವಮೊಗ್ಗದಿಂದ ದಾವಣಗೆರೆಗೆ ತೆರಳುತ್ತಿದ್ದರು. ಗ್ರಾಮದ ಬಸ್ ನಿಲ್ದಾಣದ ಸಮೀಪದಲ್ಲೇ ಇವರ ಕಾರಿನ ಟಯರ್ ಸ್ಫೋಟಗೊಂಡಿದೆ. ಪರಿಣಾಮ ನಿಯಂತ್ರಣ ತಪ್ಪಿ ಕಾರು ಅಡ್ಡಾದಿಡ್ಡಿಯಾಗಿ ಚಲಿಸಿ ಕ್ಷಣಾರ್ಧದಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದವರ ಮೇಲೆ ಹರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು