Caste census ವರದಿ ಅವೈಜ್ಞಾನಿಕ :ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಖಂಡನೆ
ಮತ್ತೊಮ್ಮೆ ಅಮೂಲಾಗ್ರವಾಗಿ ಪರಾರ್ಮಶಿಸಬೇಕು
Team Udayavani, Mar 2, 2024, 5:34 PM IST
ಬೆಳಗಾವಿ: ಸರ್ಕಾರ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಪಡೆದಿರುವ ಜಾತಿ ವರದಿ ದತ್ತಾಂಶವು ಅವೈಜ್ಞಾನಿಕವಾಗಿದೆ. ವೀರಶೈವ ಲಿಂಗಾಯತ ಸಮುದಾಯವು ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಪ್ರಭಾಕರ ಕೋರೆ ಶನಿವಾರ ಹೇಳಿಕೆ ನೀಡಿದ್ದಾರೆ.
ಜಾತಿಯ ವಿಷಯದಲ್ಲಿ ರಾಜಕೀಯ ಮಾಡಬಾರದು. ನೈಜವಾದ ವರದಿಯಾಗಿದ್ದರೆ ಒಪ್ಪಿಕೊಳ್ಳಬಹುದಾಗಿತ್ತು. ಈ ವರದಿಯು ಪಾರದರ್ಶಕವೆನಿಸುವುದಿಲ್ಲ. ವರದಿಯು ಸಾರ್ವಜನಿಕವಾಗಿ ಚರ್ಚೆಯಾಗಬೇಕು. ಸರಿಯಾದ ಅಂಕಿಅಂಶಗಳನ್ನು ಸಂಗ್ರಹಿಸಿ ವರದಿ ರೂಪಿಸಬೇಕು ಎಂದು ಹೇಳಿದ್ದಾರೆ.
ಸರಿಯಾಗಿ ಯಾರಿಗೂ ಭೇಟಿಯಾಗದೆ ತರಾತುರಿಯಲ್ಲಿ ಮಾಡಿರುವುದನ್ನು ನಮ್ಮ ಸಮಾಜವು ಒಪ್ಪಲಾರದು. ಸರ್ಕಾರವು ಬದ್ಧತೆ ಹಾಗೂ ಪ್ರಾಮಾಣಿಕವಾಗಿ ಇದನ್ನು ರೂಪಿಸಲಿ. ಮತ್ತೊಮ್ಮೆ ಅಮೂಲಾಗ್ರವಾಗಿ ಪರಾರ್ಮಶಿಸಬೇಕು ಎಂದು ಒತ್ತಾಯಿಸಿದ್ದಾರೆ.