ಲಿಫ್ಟ್ನಲ್ಲಿ ಸಿಲುಕಿದ್ದವರ ರಕ್ಷಣೆ
Team Udayavani, Jan 25, 2019, 1:40 AM IST
ಬೀದರ್: ನಗರದ ಬ್ರಿಮ್ಸ್ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ 11 ಮಂದಿ ಲಿಫ್ಟ್ನಲ್ಲಿ ಸಿಲುಕಿ ಹೊರ ಬರಲು ಪರದಾಡಿದ ಘಟನೆ ಜರುಗಿದೆ.
ಆಸ್ಪತ್ರೆಗೆ ಚಿಕಿತ್ಸೆಗೆ ಬಂದ ರೋಗಿಗಳು ಲಿಫ್ಟ್ ಮೂಲಕ ಮೇಲೇರಲು ಹೋಗಿದ್ದಾರೆ. ಈ ಸಂದರ್ಭದಲ್ಲಿ ಲಿಫ್ಟ್ನಲ್ಲಿ ಸಮಸ್ಯೆ ಉಂಟಾಗಿ ಸ್ಥಗಿತಗೊಂಡಿತ್ತು. ಹೀಗಾಗಿ ಒಂದು ಗಂಟೆಗೂ ಅಧಿಕ ಸಮಯ ಎರಡು ಹಸುಗೂಸು ಸೇರಿ ಒಟ್ಟು 11 ಜನರು ಲಿಫ್ಟ್ನಲ್ಲಿ ಸಿಲುಕಿದ್ದಾರೆ. ಬಳಿಕ ಬಾಗಿಲು ಬಡಿದು, ಕಿರುಚಾಡಿದ್ದಾರೆ.
ಲಿಫ್ಟ್ನಲ್ಲಿ ಜನರು ಸಿಲುಕಿಕೊಂಡಿರುವ ವಿಷಯ ತಿಳಿದ ಆಸ್ಪತ್ರೆಯವರು ಕೂಡಲೇ ಅಗ್ನಿ ಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕ ಸಿಬ್ಬಂದಿ ಹರಸಾಹ ಪಟ್ಟು ಲಿಫ್ಟ್ ಬಾಗಿಲು ಮುರಿದು ಜನರ ಜೀವ ಉಳಿಸಿದ್ದಾರೆ. ಲಿಫ್ಟ್ನಲ್ಲಿ ಸಿಲುಕಿದವರು ಹೊರ ಬರುತ್ತಿದಂತೆ ಕೆಲವರು ಆಸ್ಪತ್ರೆಯ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು. ಸರ್ಕಾರದ ಲಕ್ಷಾಂತರ ರೂ. ಖರ್ಚು ಮಾಡುವ ಅಧಿಕಾರಿಗಳು ಗುಣಮಟ್ಟದ ಕಾಮಗಾರಿ ಮಾಡದ ಹಿನ್ನೆಲೆಯಲ್ಲಿ ಜನರ ಜೀವಕ್ಕೆ ಆಪತ್ತು ಬರುತ್ತಿದೆ. ಆಸ್ಪತ್ರೆಯ ಅಧಿಕಾರಿಗಳನ್ನೇ ಲಿಫ್ಟ್ನಲ್ಲಿ ಹಾಕಿ ಬಂದ್ ಮಾಡಿದರೆ ನಾವು ಅನುಭವಿಸಿದ ಕಷ್ಟ ಗೊತ್ತಾಗುತ್ತದೆ ಎಂದು ಹಿಡಿಶಾಪ ಹಾಕಿದರು. ಕೆಲ ಹೊತ್ತು ಆಸ್ಪತ್ರೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣಗೊಂಡಿತ್ತು. ಘಟನೆಯಲ್ಲಿ ಬಾಣಂತಿಯೊಬ್ಬರು ಆಯಾಸದಿಂದ ಕೆಲ ಹೊತ್ತು ಆಸ್ಪತ್ರೆಯಲ್ಲಿ ಕುಳಿತು ವಿಶ್ರಾಂತಿ ಪಡೆದರು.
1
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ