Cauvery water; ನಮ್ಮ ರೈತರ ರಕ್ಷಣೆಗೆ ಎಲ್ಲಾ ವ್ಯವಸ್ಥೆ ಮಾಡಿದ್ದೇವೆ : ಡಿ.ಕೆ.ಶಿವಕುಮಾರ್
ಮೇಕೆದಾಟು ಕುರಿತು ಕೇಂದ್ರ ತೀರ್ಮಾನ ಕೈಗೊಳ್ಳಬೇಕು... ಸಾರ್ವಜನಿಕವಾಗಿ ಮಾತನಾಡಲ್ಲ
Team Udayavani, Oct 11, 2023, 8:24 PM IST
ಮೈಸೂರು: ಮತ್ತೆ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯುತ್ತೇವೆ, ನಮ್ಮ ರೈತರ ರಕ್ಷಣೆಗೆ ಎಲ್ಲಾ ವ್ಯವಸ್ಥೆ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಕಾವೇರಿ ನೀರಿನ ವಿಚಾರದಲ್ಲಿನಮ್ಮ ರಾಜ್ಯದಲ್ಲಿ ಎಷ್ಟು ಟಿಎಂಸಿ ನೀರಿದ ಅಂತ ದಾಖಲೆ ತೆಗೆದುಕೊಂಡಿದ್ದಾರೆ. ಅವರ ಡ್ಯಾಂ ನ ಮಾಹಿತಿ ಕೂಡ ತೆಗೆದುಕೊಂಡಿದ್ದಾರೆ. ನಮ್ಮ ಡ್ಯಾಂ ಗಳಿಗೆ 7 ರಿಂದ 10 ಸಾವಿರ ಕ್ಯೂಸೆಕ್ ಒಳ ಹರಿವಿದೆ. ಬಿಳಿಗುಂಡಲಿಗೆ ಎರಡು ದಿನ ಕಡಿಮೆ ನೀರು ಹೋಗಿದೆ. ಬೆಂಗಳೂರಿಗೆ ಮಳೆಯಾದ ಕಾರಣ ಅದು ಬ್ಯಾಲೆನ್ಸ್ ಆಗಿದೆ.ಅದನ್ನ ಅವರಿಗೆ ಮನದಟ್ಟು ಮಾಡಿಕೊಟ್ಟಿದ್ದೇವೆ ಎಂದರು.
ಮೇಕೆದಾಟು ವಿಚಾರವನ್ನು ಸಾರ್ವಜನಿಕವಾಗಿ ಮಾತನಾಡಲ್ಲ. ಕೇಂದ್ರ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು. ಮೇಕೆ ದಾಟು ವಿಚಾರ ನಮ್ಮ ಮೊದಲ ಆದ್ಯತೆ. ಈ ವಿಚಾರವಾಗಿ ಕೋರ್ಟ್ ಮುಂದೆ ವಾದ ಮಾಡುತ್ತಿದ್ದೇವೆ. ಕೋರ್ಟ್ ಮುಂದೆ ಮತ್ತಷ್ಟು ವಾದ ಮಾಡಲು ಸಿದ್ದತೆ ಮಾಡಿಕೊಳ್ಳಲಾಗಿದೆ. ನ್ಯಾಯಾಲಯ ಈಗಾಗಲೇ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅವರು ಡ್ಯಾಂ ಕಟ್ಟಿ ನಿಮಗೆ 170 ಟಿಎಂಸಿ ನೀರು ಕೊಡುತ್ತಾರೆ ಎಂದು ಮನದಟ್ಟು ಮಾಡಿದೆ. ಮೇಕದಾಟು ಯೋಜನೆ ನಮ್ಮ ಆದ್ಯತೆ. ಡ್ಯಾಂ ಕಟ್ಟಲು ಭೂಮಿ ತೆಗೆದುಕೊಂಡು ವ್ಯವಸ್ಥೆ ಮಾಡುತ್ತಿದ್ದೇವೆ. ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡಬೇಕು. ನಮ್ಮ ಜಮೀನಿನಲ್ಲಿ ನಾವು ಏನು ಬೇಕಾದರು ಮಾಡಬಹುದು. ಸರ್ವೆ ಮಾಡಲು ಯಾರ ಅನುಮತಿಯು ಬೇಕಾಗಿಲ್ಲ. ನಮ್ಮ ಕೆಲಸ ನಾವು ಮಾಡುತ್ತೇವೆ ಎಂದರು.
ಲೋಡ್ ಶೆಡ್ಡಿಂಗ್ ಸರಕಾರ ಬ್ಯಾಲೆನ್ಸ್ ಮಾಡುತ್ತದೆ
ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ರಾಜ್ಯದಲ್ಲಿ 192 ತಾಲೂಕು ಬರ ಘೋಷಣೆ ಮಾಡಲಾಗಿದೆ.ಮಳೆ ಬಾರದ ಕಾರಣ ಬರ ಬಂದಿದೆ. ಕಳೆದ ಬಾರಿಗಿಂತ ಅರ್ಧದಷ್ಟು ಮಳೆ ಬಂದಿದೆ. ಕಳೆದ ಬಾರಿ ಡಬಲ್ ಮಳೆಯಾಗಿತ್ತು.ಈಗಾಗಿ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ. ಆದರು ಸರಕಾರ ಇದನ್ನ ಬ್ಯಾಲೆನ್ಸ್ ಮಾಡುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ